ಕಿವೀಸ್‌ಗೆ ಅಫ್ಘಾನ್‌ ಆಘಾತ!


Team Udayavani, Jan 26, 2018, 9:41 AM IST

26-14.jpg

ಕ್ರೈಸ್ಟ್‌ಚರ್ಚ್‌: ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆತಿಥೇಯ ನ್ಯೂಜಿಲ್ಯಾಂಡಿನ ಆಟ ಮುಗಿದಿದೆ. ಗುರುವಾರದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಅಪಾಯಕಾರಿ ಅಫ್ಘಾನಿಸ್ಥಾನ ವಿರುದ್ಧ 202 ರನ್ನುಗಳ ಆಘಾತಕಾರಿ ಸೋಲುಂಡು ಪ್ರಶಸ್ತಿ ರೇಸ್‌ನಿಂದ ಹೊರಬಿದ್ದಿದೆ. ಅಫ್ಘಾನ್‌ ಇನ್ನು ಆಸ್ಟ್ರೇಲಿಯ ಸವಾಲನ್ನು ಎದುರಿಸಲಿದೆ.

ಶುಕ್ರವಾರ ನಡೆಯಲಿರುವ ಕೊನೆಯ ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತ- ಬಾಂಗ್ಲಾ ದೇಶ ಎದುರಾಗಲಿದ್ದು, ಇಲ್ಲಿ ಗೆದ್ದ ತಂಡ ಸೆಮಿಫೈನಲ್‌ನಲ್ಲಿ ಪಾಕಿಸ್ಥಾನವನ್ನು ಎದುರಿಸಲಿದೆ. ಸೆಮಿಫೈನಲ್‌ನಲ್ಲಿ ಏಶ್ಯದ 3 ತಂಡಗಳು  ಸೆಣಸಲಿರುವುದು ವಿಶೇಷ.

ಅಫ್ಘಾನ್‌ ಸರ್ವಾಂಗೀಣ ಪ್ರಾಬಲ್ಯ
ನವೀನ್‌ ಉಲ್‌ ಹಕ್‌ ನೇತೃತ್ವದ ಅಫ್ಘಾನಿ ಸ್ಥಾನ ಕ್ರಿಕೆಟಿನ ಎಲ್ಲ ವಿಭಾಗಗಳಲ್ಲೂ ಸ್ಪಷ್ಟ ಮೇಲುಗೈ ಸಾಧಿಸಿ ಕೇವಲ ನ್ಯೂಜಿಲ್ಯಾಂಡಿಗಷ್ಟೇ ಅಲ್ಲ, ಕ್ರಿಕೆಟ್‌ ಜಗತ್ತಿಗೇ ಶಾಕ್‌ ಕೊಟ್ಟಿತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಏಶ್ಯದ ಈ ತಂಡ 6 ವಿಕೆಟಿಗೆ 309 ರನ್ನುಗಳ ಬೃಹತ್‌ ಮೊತ್ತವನ್ನು ರಾಶಿ ಹಾಕಿತು. ಜವಾಬಿತ್ತ ನ್ಯೂಜಿಲ್ಯಾಂಡ್‌ ಅಫ್ಘಾನ್‌ ಸ್ಪಿನ್‌ ಬಲೆಗೆ ಸಿಲುಕಿ 28.1 ಓವರ್‌ಗಳಲ್ಲಿ 107 ರನ್ನುಗಳಿಗೆ ಸರ್ವಪತನ ಕಂಡಿತು.

ಆಫ್ಸ್ಪಿನ್ನರ್‌ ಮುಜೀಬ್‌ ಜದ್ರಾನ್‌ ಮತ್ತು ಲೆಗ್‌ಸ್ಪಿನ್ನರ್‌ ಕೈಸ್‌ ಅಹ್ಮದ್‌ ಸೇರಿಕೊಂಡು ಕಿವೀಸ್‌ ಬ್ಯಾಟಿಂಗ್‌ ಸರದಿಯನ್ನು ಸೀಳಿದರು. ಮುಜೀಬ್‌ 14 ರನ್ನಿಗೆ 4 ವಿಕೆಟ್‌ ಹಾರಿಸಿದರೆ, ಅಹ್ಮದ್‌ 33 ರನ್ನಿಗೆ 4 ವಿಕೆಟ್‌ ಕಿತ್ತರು. ಇನ್‌ಫಾರ್ಮ್ ಆರಂಭಕಾರ ರಚಿನ್‌ ರವೀಂದ್ರ ದ್ವಿತೀಯ ಓವರಿನಲ್ಲಿ ರನೌಟಾಗಿ ನಿರ್ಗಮಿಸುವುದರೊಂದಿಗೆ ಕಿವೀಸ್‌ಗೆ ಬ್ಯಾಟಿಂಗ್‌ ಕಂಟಕ ಎದುರಾಗತೊಡಗಿತು. ಈ ಸಂಕಟದಿಂದ ಆತಿಥೇಯ ಪಡೆಗೆ ಪಾರಾಗಲು ಸಾಧ್ಯವಾಗಲೇ ಇಲ್ಲ. 

ನ್ಯೂಜಿಲ್ಯಾಂಡ್‌ 7 ಓವರ್‌ ಆಗು ವಷ್ಟ ರಲ್ಲಿ 20 ರನ್ನಿಗೆ 4 ವಿಕೆಟ್‌ ಉದುರಿಸಿಕೊಂಡಿತು. ಬಳಿಕ ಕ್ಯಾಟೀನ್‌ ಕ್ಲಾರ್ಕ್‌ (38) ಮತ್ತು ಡೇಲ್‌ ಫಿಲಿಪ್ಸ್‌ (31) ಸೇರಿಕೊಂಡು ಸಣ್ಣ ಮಟ್ಟದ ಹೋರಾಟ ವೊಂದನ್ನು ಸಂಘಟಿಸಿದರೂ ಇದರಿಂದ ಯಾವುದೇ ಲಾಭವಾಗಲಿಲ್ಲ. ಇವರಿಬ್ಬರ ಜತೆಯಾಟದಲ್ಲಿ 66 ರನ್‌ ಒಟ್ಟುಗೂಡಿತು. ಆದರೆ ಈ ಜೋಡಿ ಬೇರ್ಪಟ್ಟೊಡನೆ ಕಿವೀಸ್‌ ಕುಸಿತ ತೀವ್ರಗೊಂಡಿತು. ಎಷ್ಟರ ಮಟ್ಟಿಗೆಂದರೆ, 21 ರನ್‌ ಅಂತರದಲ್ಲಿ ಕೊನೆಯ 6 ವಿಕೆಟ್‌ ಹಾರಿ ಹೋಗಿತ್ತು!

ಅಫ್ಘಾನಿಸ್ಥಾನ ಕೂಟದಲ್ಲೇ ಅಮೋಘ ವೆನಿಸುವಂಥ ಬ್ಯಾಟಿಂಗ್‌ ಮೂಲಕ ಕಿವೀಸ್‌ ಬೌಲರ್‌ಗಳ ಮೇಲೆರಗಿ ಹೋಯಿತು. ಒಟ್ಟು 4 ಮಂದಿ 60 ರನ್‌ ಗಡಿ ದಾಟಿ ಮುನ್ನುಗ್ಗಿದರು. ಇವರಲ್ಲಿ ಆರಂಭಿಕರಾದ ರಹ್ಮನುಲ್ಲ ಗುರ್ಬಜ್‌ (69) ಮತ್ತು ಇಬ್ರಾಹಿಂ ಜದ್ರಾನ್‌ (68) ಕೂಡ ಸೇರಿದ್ದರು. ಇವರು 20.4 ಓವರ್‌ ಜತೆಯಾಟ ನಿಭಾಯಿಸಿ ಮೊದಲ ವಿಕೆಟಿಗೆ 117 ರನ್‌ ಪೇರಿಸಿ ಭದ್ರ ಬುನಾದಿ ಹಾಕಿದರು. ಮಧ್ಯಮ ಕ್ರಮಾಂಕದಲ್ಲಿ ಬಹಿರ್‌ ಶಾ ಅಜೇಯ 67 ರನ್‌ ಬಾರಿಸಿದರೆ, 7ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಅಜ್ಮತುಲ್ಲ ಒಮರ್‌ಜಾಯಿ ಸ್ಫೋಟಕ ಆಟಕ್ಕೆ ಮುಂದಾಗಿ ಕೇವಲ 23 ಎಸೆತಗಳಲ್ಲಿ 66 ರನ್‌ ಸಿಡಿಸಿದರು. ಇದರಲ್ಲಿ 7 ಪ್ರಚಂಡ ಸಿಕ್ಸರ್‌ ಜತೆಗೆ 3 ಬೌಂಡರಿ ಸೇರಿತ್ತು. ಈ ಸಾಹಸಕ್ಕಾಗಿ ಅಜ್ಮತುಲ್ಲ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.