ಭಾರತ ಅಫ್ಘಾನ್ ಪಂದ್ಯ ರೋಚಕ ‘ಟೈ’ಯಲ್ಲಿ ಅಂತ್ಯ


Team Udayavani, Sep 26, 2018, 1:23 AM IST

afghan-600.jpg

ದುಬೈ: ಏಷ್ಯಾ ಕಪ್ ಟೂರ್ನಿಯುದ್ದಕ್ಕೂ ಪಾಕಿಸ್ಥಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳಿಗೆ ಚಳಿ ಹುಟ್ಟಿಸಿದ್ದ ‘ಕ್ರಿಕೆಟ್ ಶಿಶು’ ಅಫ್ಘಾನ್ ತಂಡವು ಇಂದು ನಡೆದ ‘ಸೂಪರ್ 4’ ಹಣಾಹಣಿಯ ಪಂದ್ಯದಲ್ಲಿ ಈ ಕೂಟದ ಅಜೇಯ ತಂಡವಾಗಿದ್ದ ಭಾರತಕ್ಕೆ ಸೋಲಿನ ರುಚಿ ತೋರಿಸುವ ಹಂತದಲ್ಲಿ ಸ್ವಲ್ಪದರಲ್ಲೇ ಮುಗ್ಗರಿಸಿ ತನ್ನ ಏಷ್ಯಾ ಕಪ್ ಅಭಿಯಾನವನ್ನು ಸ್ಮರಣೀಯವಾಗಿ ಮುಗಿಸಿದೆ.

ಅಫ್ಘಾನ್ ನೀಡಿದ 252 ರನ್ನುಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ಎಡವಿದ ಭಾರತವು ಇನ್ನೂ 1 ಎಸೆತ ಬಾಕಿಯಿದ್ದಂತೆ 252 ರನ್ನುಗಳಿಗೆ ಆಲೌಟ್ ಆಗುವ ಮೂಲಕ ಜಯದ ಹೊಸ್ತಿಲಲ್ಲಿ ಎಡವಿತು. ರವೀಂದ್ರ ಜಡೇಜಾ (25) ಅವರು ಅಂತಿಮ ವಿಕೆಟ್ ರೂಪದಲ್ಲಿ ಔಟಾಗುತ್ತಿದ್ದಂತೆಯೇ ಅಫ್ಘಾನ್ ಆಟಗಾರರು ಮೈದಾನದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದರು. ಈಗಾಗಲೇ ಫೈನಲ್ ಪ್ರವೇಶಿಸಿರುವ ಭಾರತಕ್ಕೆ ಹಾಗೂ ಕೂಟದಿಂದ ಹೊರಬಿದ್ದಿದ್ದ ಅಫ್ಘಾನಿಸ್ಥಾನಕ್ಕೆ ಈ ಪಂದ್ಯ ಯಾವುದೇ ರೀತಿಯಲ್ಲಿ ಮಹತ್ವದಲ್ಲವಾಗಿದ್ದರೂ ಕ್ರಿಕೆಟ್ ಶಿಶು ಅಫ್ಘಾನಿಸ್ಥಾನಕ್ಕೆ ಈ ಚೇತೋಹಾರಿ ಪ್ರದರ್ಶನ ಅದ್ಭುತವಾದ ನೈತಿಕ ಬಲವನ್ನು ತುಂಬಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ.
 


ಅಫ್ಘಾನ್ ವಿಕೆಟ್ ಕೀಪರ್ ಮುಹಮ್ಮದ್ ಶಹಝಾದ್ (124) ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರುಗಳಲ್ಲಿ 8 ವಿಕೆಟ್ ನಷ್ಟದಲ್ಲಿ 252 ರನ್ನುಗಳನ್ನು ಕಲೆಹಾಕಿದ ಅಫ್ಘಾನ್ ಎದುರಾಳಿಯ ಗೆಲುವಿಗೆ 253 ರನ್ನುಗಳ ಗುರಿಯನ್ನು ನಿಗದಿಪಡಿಸಿತು.

ಧವನ್ ರೋಹಿತ್ ಅನುಪಸ್ಥಿತಿಯಲ್ಲಿ ಭಾರತದ ಇನ್ನಿಂಗ್ಸ್ಆರಂಭಿಸಿದ ಕೆ.ಎಲ್. ರಾಹುಲ್ (60) ಮತ್ತು ಅಂಬಟಿ ರಾಯುಡು (57) ಉತ್ತಮ ಆರಂಭವನ್ನೇ ಒದಗಿಸಿದರು. ಈ ಜೋಡಿ ಮೊದಲ ವಿಕೆಟಿಗೆ 110 ರನ್ನುಗಳನ್ನು ಕಲೆ ಹಾಕಿತು. ಇಲ್ಲಿಯವರೆಗೆ ಭಾರತದ ಗೆಲುವಿನ ಹಾದಿ ಸುಲಭವಾಗಿಯೇ ಇತ್ತು. ಆದರೆ ಇವರ ಜೊತೆಯಾಟ ಮುರಿಯುತ್ತಲೇ ಭಾರತ ಸಂಕಷ್ಟಕ್ಕೆ ಸಿಲುಕಿತು. ಒಂದು ಬದಿಯಲ್ಲಿ ದಿನೇಶ್ ಕಾರ್ತಿಕ್ (44) ತಾಳ್ಮೆಯ ಆಟದ ಮೊರೆ ಹೋದರೆ ಇನ್ನೊಂದು ಕಡೆಯಿಂದ ವಿಕೆಟ್ ಗಳು ಉದುರುತ್ತಾ ಸಾಗಿತು. ನಾಯಕ ಧೋನಿ (8), ಮನೀಶ್ ಪಾಂಡೆ (8), ಜಾಧವ್ (19) ಹೋರಾಟ ನೀಡುವಲ್ಲಿ ವಿಫಲರಾದರು. ಅಂತಿಮವಾಗಿ ಅನುಭವಿ ಆಟಗಾರ ರವೀಂದ್ರ ಜಡೇಜಾ (25) ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂದರಾದರೂ ಅಂತಿಮವಾಗಿ ಕ್ಯಾಚ್ ನೀಡಿ ಔಟಾಗುವ ಮೂಲಕ ಭಾರತ ತಂಡ ಆಲೌಟ್ ಆಗುವುದರೊಂದಿಗೆ ಪಂದ್ಯ ‘ಟೈ’ಗೊಂಡಿತು. ಈ ಹಂತದಲ್ಲಿ ಭಾರತದ ಗೆಲುವಿಗೆ 2 ಎಸೆತದಲ್ಲಿ 1 ರನ್ ಬೇಕಿತ್ತು ಕೈಯಲ್ಲಿದ್ದಿದ್ದು 1 ವಿಕೆಟ್ ಮಾತ್ರ.

ಕಳೆದ ಪಂದ್ಯದ ಹೀರೋಗಳಾಗಿದ್ದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಸೇರಿದಂತೆ ಬುಮ್ರಾ, ಭುವನೇಶ್ವರ್ ಮತ್ತು ಚಾಹಲ್ ಅವರಿಲ್ಲದಿದ್ದ ಟೀಂ ಇಂಡಿಯಾವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದರು. ಇದು ಕೂಲ್ ಕ್ಯಾಪ್ಟನ್ ಧೋನಿ ಅವರ ನಾಯಕತ್ವದ 200ನೇ ಏಕದಿನ ಪಂದ್ಯವಾಗಿತ್ತು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.