ಅಫ್ಘಾನಿಸ್ಥಾನಕ್ಕೆ ಐತಿಹಾಸಿಕ ಟೆಸ್ಟ್ ಗೆಲುವು


Team Udayavani, Mar 18, 2019, 10:02 AM IST

afghan.png

ಡೆಹ್ರಾಡೂನ್: ಐರ್ಲೆಂಡ್ ವಿರುದ್ಧದ  ಏಕೈಕ ಟೆಸ್ಟ್ ಪಂದ್ಯವನ್ನು ಏಳು ವಿಕೆಟ್ ಗಳಿಂದ ಗೆದ್ದ ಅಫ್ಘಾನಿಸ್ಥಾನ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿದೆ. ತನ್ನ ಟೆಸ್ಟ್ ಇತಿಹಾಸದಲ್ಲಿ ಚೊಚ್ಚಲ ಗೆಲುವು ದಾಖಲಿಸಿದೆ.

ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನ್ ಆಲ್ ರೌಂಡ್ ಪ್ರದರ್ಶನ ನೀಡಿ ಗೌರವಯುತ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಐರ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಗಳಿಸಿದ್ದು ಕೇವಲ 172 ರನ್ ಮಾತ್ರ. ವಿಶೇಷವೇನೆಂದರೆ 11ನೇ ಆಟಗಾರನಾಗಿ ಬ್ಯಾಟಿಂಗ್ ಮಾಡಿದ ಟಿಮ್ ಮುರ್ತಾಫ್ 54 ರನ್ ಗಳಿಸಿ ತಂಡದ ಪರ ಅತೀ ಹೆಚ್ಚು ರನ್ ಗಳಿಸಿದ್ದರು. 

ರಹಮತ್ ಶಾ, ಹಶ್ಮತುಲ್ಲಾಹ್ ಶಹೀದಿ ಮತ್ತು ನಾಯಕ ಅಸ್ಗರ್ ಅಫ್ಘಾನ್ ಅರ್ಧಶತಕದ ನೆರವಿನಿಂದ ಅಫ್ಘಾನಿಸ್ಥಾನ ಮೊದಲ ಇನ್ನಿಂಗ್ಸ್ ನಲ್ಲಿ 314 ರನ್ ಗಳಿಸಿತು. ರೆಹಮತ್ ಶಾ 98 ರನ್ ಔಟ್ ಆಗಿ ಅಫ್ಘಾನ್ ಪರ ಮೊದಲ ಟೆಸ್ಟ್ ಶತಕ ಬಾರಿಸುವ ಅವಕಾಶ ತಪ್ಪಿಸಿಕೊಂಡರು. ಶಹೀದಿ ಮತ್ತು ಅಸ್ಗರ್ ಅಫ್ಘಾನ್ ತಲಾ 61 ಮತ್ತು 67 ರನ್ ಗಳಿಸಿದರು.


142 ರನ್ ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ರ‍್ಲೆಂಡ್ ತಂಡಕ್ಕೆ ಆಂಡ್ರೂ ಬಾಲ್ಬಿರ್ನಿ ಮತ್ತು ಕೆವಿನ್ ಒಬ್ರೈನ್  ಆಸರೆಯಾದರು. ಬಾಲ್ಬಿರ್ನಿ 82 ರನ್ ಗಳಿಸಿದರೆ ಒಬ್ರೈನ್  56 ರನ್ ಗಳಿಸಿದರು. ಅಂತಿಮವಾಗಿ ತಂಡ 288 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಅಫ್ಘಾನ್ ಪರ ರಶೀದ್ ಖಾನ್ ಐದು ವಿಕೆಟ್ ಕಿತ್ತರು. 

ಟೆಸ್ಟ್ ಇತಿಹಾಸದ ಮೊದಲ ಜಯ ಸಾಧಿಸಲು 147 ರನ್ ಗಳಿಸುವ ಗುರಿ ಪಡೆದ ಅಫ್ಘಾನಿಸ್ಥಾನಕ್ಕೆ ಮತ್ತೆ ರೆಹಮತ್ ಶಾ ನೆರವಾದರು. ಶಾ 76 ರನ್ ಗಳಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ಇಹ್ಸಾನುಲ್ಲಾಹ್ ಜನಾತ್ 65 ರನ್ ಗಳಿಸಿದರು. ಇವರಿಬ್ಬರ 139 ರನ್ ಜೊತೆಯಾಟದ ನೆರವಿನಿಂದ ಅಫ್ಘಾನ್ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಎರಡೂ ಇನ್ನಿಂಗ್ಸ್ ಗಳಲ್ಲಿ ಅರ್ಧಶತಕ ಬಾರಿಸಿದ ರೆಹಮತ್ ಶಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಭಾರತವನ್ನು ಹಿಂದಿಕ್ಕಿದ ಅಫ್ಘಾನ್: ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಜಯ ಸಾಧಿಸಲು ಭಾರತ ಬರೋಬ್ಬರಿ 20 ವರ್ಷಗಳ ಕಾಲ ಕಾದಿತ್ತು. ತಾನಾಡಿದ 25ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಸಲ ಗೆಲುವಿನ ನಗೆ ಬೀರಿತ್ತು. ಆದರೆ ಅಫ್ಘಾನಿಸ್ಥಾನ ತನ್ನ ಎರಡನೇ ಟೆಸ್ಟ್ ಪಂದ್ಯದಲ್ಲೇ ಜಯ ಸಾಧಿಸಿ ದಾಖಲೆ ಬರೆಯಿತು. 2018ರಲ್ಲಿ ಭಾರತದ ವಿರುದ್ಧ ಟೆಸ್ಟ್ ಪದಾರ್ಪಣೆ ಮಾಡಿದ್ದ ಅಫ್ಘಾನ್ ಮೊದಲ ಪಂದ್ಯದಲ್ಲಿ ಸೋತಿತ್ತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.