ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ


Team Udayavani, Oct 25, 2021, 5:45 AM IST

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಶಾರ್ಜಾ: ಕೂಟದ ಡಾರ್ಕ್‌ ಹಾರ್ಸ್‌ ಎನಿಸಿರುವ ಅಫ್ಘಾನಿಸ್ಥಾನ ಮತ್ತು ಅರ್ಹತಾ ಸುತ್ತಿನಲ್ಲಿ ಸ್ಪಿರಿಟೆಡ್‌ ಪ್ರದರ್ಶನ ನೀಡಿದ ಸ್ಕಾಟ್ಲೆಂಡ್‌ ತಂಡಗಳು ಸೋಮವಾರ ರಾತ್ರಿ ಸೂಪರ್‌-12 ಹಂತದಲ್ಲಿ ತಮ್ಮ ಅಭಿಯಾನ ಆರಂಭಿಸಲಿವೆ.

ಅಫ್ಘಾನಿಸ್ಥಾನದಲ್ಲಿ ತಾಲಿಬಾನ್‌ ಆಡಳಿತಕ್ಕೆ ಬಂದ ಬಳಿಕ ಅಲ್ಲಿನ ಕ್ರಿಕೆಟ್‌ ಕೂಡ ಸಾಕಷ್ಟು ನಲುಗಿರುವುದು ರಹಸ್ಯವೇನಲ್ಲ. ಜತೆಗೆ ವಿಶ್ವಕಪ್‌ ತಂಡ ಆಯ್ಕೆಗೊಂಡ ಬಳಿಕ ಸಾಕಷ್ಟು ಅನಿರೀಕ್ಷಿತ ವಿದ್ಯಮಾನಗಳು ಘಟಿಸಿದವು. ರಶೀದ್‌ ಖಾನ್‌ ನಾಯಕತ್ವದಿಂದ ಕೆಳಗಿಳಿದರು. ಈ ಸ್ಥಾನಕ್ಕೆ ಹಿರಿಯ ಆಲ್‌ರೌಂಡರ್‌ ಮೊಹಮ್ಮದ್‌ ನಬಿ ಅವರನ್ನು ಮರಳಿ ನೇಮಿಸಲಾಯಿತು.

ಅನುಭವಿ ಶ್ರೀಲಂಕಾ, ಬಾಂಗ್ಲಾದೇಶ ತಂಡ ಗಳನ್ನು ಹಿಂದಿಕ್ಕಿ ವಿಶ್ವಕಪ್‌ ಪಂದ್ಯಾವಳಿಗೆ ನೇರ ಪ್ರವೇಶ ಪಡೆದದ್ದು ಅಫ್ಘಾನ್‌ ತಂಡದ ಹೆಗ್ಗಳಿಕೆ. ಅಭ್ಯಾಸ ಪಂದ್ಯದಲ್ಲಿ ತಂಡದ್ದು ಮಿಶ್ರ ಸಾಧನೆ. ದ.ಆಫ್ರಿಕಾ ವಿರುದ್ಧ ಎಡವಿದರೆ, ಹಾಲಿ ಚಾಂಪಿ ಯನ್‌ ವೆಸ್ಟ್‌ ಇಂಡೀಸನ್ನು ಮಗುಚಿ ಹಾಕಿತು.

ಅಫ್ಘಾನಿಸ್ಥಾನದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗವೆರಡೂ ಬಲಿಷ್ಠವಾಗಿದೆ. ಹಜ್ರತುಲ್ಲ ಜಜಾಯ್‌, ಮೊಹಮ್ಮದ್‌ ಶಾಜಾದ್‌, ನಜಿಬುಲ್ಲ ಜದ್ರಾನ್‌, ನಾಯಕ ನಬಿ ಬ್ಯಾಟಿಂಗ್‌ ಶಕ್ತಿಯಾಗಿದ್ದಾರೆ. ಬೌಲಿಂಗ್‌ ವಿಭಾಗ ಸ್ಪಿನ್‌ ತ್ರಿವಳಿಗಳಾದ ರಶೀದ್‌, ನಬಿ ಮತ್ತು ಮುಜೀಬ್‌ ಜದ್ರಾನ್‌ ಅವರಿಂದ ಜಬರ್ದಸ್ತ್ ಆಗಿದೆ.

ಇದನ್ನೂ ಓದಿ:ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

“ನಮ್ಮನ್ನು ಲಘುವಾಗಿ ಪರಿಗಣಿಸದಿರಿ’
ಇನ್ನೊಂದೆಡೆ ಸ್ಕಾಟ್ಲೆಂಡ್‌ ಅರ್ಹತಾ ಸುತ್ತಿನ ಮೂರೂ ಪಂದ್ಯಗಳನ್ನು ಗೆದ್ದ ಸಂಭ್ರಮದಲ್ಲಿದೆ. ಮೊದಲ ಜಯವೇ ನಂ.6 ಬಾಂಗ್ಲಾದೇಶ ವಿರುದ್ಧ ಬಂದಿರುವುದು ಕೈಲ್‌ ಕೋಟ್ಜರ್‌ ಬಳಗದ ಆತ್ಮವಿಶ್ವಾಸವನ್ನು ಬಹಳಷ್ಟು ಹೆಚ್ಚಿಸಿದೆ. ಸ್ಕಾಟ್ಲೆಂಡ್‌ ಈ ಕೂಟದಲ್ಲಿ ಕಳೆದುಕೊಳ್ಳುವಂಥದ್ದೇನಿಲ್ಲ. ಆದರೆ ಕೆಲವು ಏರುಪೇರಿನ ಫ‌ಲಿತಾಂಶ ದಾಖಲಿಸಿ ಗ್ರೂಪ್‌ ವಿಭಾಗದ ಲೆಕ್ಕಾಚಾರವನ್ನು ತಲೆ ಕೆಳಗು ಮಾಡುವುದನ್ನು ಅಲ್ಲಗಳೆಯುವಂತಿಲ್ಲ.

“ನಮ್ಮನ್ನು ಯಾರೂ ಲಘುವಾಗಿ ಪರಿಗಣಿಸುವುದು ಬೇಡ. ನಾವೀಗ ಅತ್ಯುತ್ತಮ ಫಾರ್ಮ್ ನಲ್ಲಿದ್ದೇವೆ. ಹಿಂದೆಯೂ ನಾವು ಸಾಕಷ್ಟು ಏರುಪೇರಿನ ಫ‌ಲಿತಾಂಶ ದಾಖಲಿಸಿದ್ದೇವೆ. ಇಂಗ್ಲೆಂಡನ್ನೂ ಮಣಿಸಿದ ದಾಖಲೆ ಇದೆ. ಎದುರಾಳಿಗಳು ಭೀತಿಪಡುವ ರೀತಿಯಲ್ಲಿ ನಮ್ಮ ಪ್ರದರ್ಶನ ಸಾಗಲಿದೆ’ ಎಂದಿದ್ದಾರೆ ನಾಯಕ ಕೋಟ್ಜರ್‌.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.