ಅಧಿಕಾರಿಗಳಿಗಾಗಿ ವಿಶ್ವ ಕೂಟದಿಂದ ಅಥ್ಲೀಟ್ಸ್‌ಗಳ ಕೈಬಿಟ್ಟ ಎಎಫ್ಐ?


Team Udayavani, Jul 27, 2017, 8:15 AM IST

World-Athletics-Championshi.jpg

ನವದೆಹಲಿ: ಮುಂದಿನ ತಿಂಗಳು ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ಗೆ ಅರ್ಹತೆ ಪಡೆದಿದ್ದ ಭಾರತದ ಮೂವರು ಅಥ್ಲೀಟ್‌ಗಳು ಅನರ್ಹರಾಗಿದ್ದಾರೆ!

ಸ್ಟೀಪಲ್‌ಚೆಸ್‌ ಸ್ಪರ್ಧಿ ಸುಧಾ ಸಿಂಗ್‌, 1500 ಮೀ. ಓಟಗಾರ್ತಿ ಪಿ.ಯು.ಚಿತ್ರಾ ಹಾಗೂ ಪುರುಷರ 1500 ಮೀ. ಓಟಗಾರ ಅಜಯ್‌ ಕುಮಾರ್‌ ಸರೋಜ್‌ ಅನರ್ಹಗೊಂಡವರು.

ಇದಕ್ಕಿದ್ದಂತೆ ಭಾರತೀಯ ಅಥ್ಲೆಟಿಕ್ಸ್‌ ಒಕ್ಕೂಟ (ಎಎಫ್ಐ) ಇಂತಹದೊಂದು ಹೇಳಿಕೆ ನೀಡಿರುವು ದು ಭಾರೀ ವಿವಾದಕ್ಕೆ ಕಾರಣವಾಗಿದೆ.ಭುವನೇಶ್ವರದಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಕೂಟದಲ್ಲಿ ಈ ಮೂವರು ಸ್ಪರ್ಧಿಗಳು ತಲಾ ಚಿನ್ನದ ಪದಕ ಗೆದ್ದು ವಿಶ್ವ ಕೂಟಕ್ಕೆ ಅರ್ಹತೆ ಪಡೆದಿದ್ದರು. ಸದ್ಯ ಇವರು ವಿಶ್ವ ಚಾಂಪಿಯನ್‌ ಶಿಪ್‌ಅರ್ಹತಾ ಸಮಯ ದಲ್ಲಿ ಓಡಿಲ್ಲ ಎನ್ನುವ ಕಾರಣಕ್ಕೆ ಇವರಿಗೆ ಅವಕಾಶ ನಿರಾಕರಿಸಲಾಗಿದೆ.

ಎಎಫ್ಐನಿಂದ ಒಟ್ಟಾರೆ 24 ಮಂದಿ ಅಥ್ಲೀಟ್‌ ಗಳ ತಂಡ ಪ್ರಕಟಿಸಲಾಗಿದೆ. ಜತೆಗೆ ತಂಡದ ಜತೆಗೆ ಹೋಗುವ ಕೆಲ ಪ್ರಭಾವಿ ಅಧಿಕಾರಿಗಳು ಕೂಡ ಹೋಗುತ್ತಿದ್ದಾರೆ. ಇಂತಿಷ್ಟು ಜನರಿಗೆ ಅವಕಾಶ ಎನ್ನುವ ನಿಯಮವಿದೆ. ಹೀಗಾಗಿ
ಮೂವರು ಅಥ್ಲೀಟ್‌ಗಳನ್ನು ಕೈಬಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಬಗ್ಗೆ ಸುಧಾ ಸಿಂಗ್‌ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೂಬ್ಬ ಅಥ್ಲೀಟ್‌ ಕೇರಳದ ಪಿ.ಯು.ಚಿತ್ರಾ ಕೋಟ್‌ ಮರೆಹೋಗಲು ತೀರ್ಮಾನಿಸಿದ್ದಾರೆ.

ಎಎಫ್ಐ ಹೇಳುವುದೇನು?: ವಿಶ್ವಚಾಂಪಿ ಯನ್‌ ಶಿಪ್‌ನಲ್ಲಿ ಪಾಲ್ಗೊಳ್ಳಲು ಇರುವ ಅರ್ಹತಾ ಸಮಯದಲ್ಲಿ ಅಥ್ಲೀಟ್‌ಗಳು ಗುರಿಮುಟ್ಟಿಲ್ಲ. ಹೀಗಾಗಿ ಅವಕಾಶ ನೀಡಿಲ್ಲ. ಸುಧಾಸಿಂಗ್‌ 9 ನಿಮಿಷ, 59.47 ಸೆಕೆಂಡ್‌ಗೆ ಗುರಿ ಮುಟ್ಟಿ ಚಿನ್ನ ಗೆದ್ದಿದ್ದಾರೆ. ಆದರೆ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತಾ ಸಮಯ 9 ನಿಮಿಷ,42 ಸೆಕೆಂಡ್‌ ಆಗಿದೆ. ಅದೇ ರೀತಿ ಯಾಗಿ ಚಿತ್ರಾ ಮತ್ತು ಅಜಯ್‌ ಕೂಡ ನಿಗದಿತ ಸಮಯದಲ್ಲಿ ಗುರಿ ಮುಟ್ಟಿಲ್ಲ ಎಂದು ಎಎಫ್ಐ ತಿಳಿಸಿದೆ.

ಅಥ್ಲೀಟ್‌ಗಳು ಹೇಳುವುದೇನು?
ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನಗೆದ್ದ ವರಿಗೆ ವಿಶ್ವ ಚಾಂಪಿಯನ್‌ಶಿಪ್‌ಗೆ ನೇರ ಅರ್ಹತೆ ನೀಡಲಾಗುತ್ತದೆ. ಜಿ.ಲಕ್ಷ್ಮಣನ್‌ ಸೇರಿದಂತೆ ಆಯ್ಕೆಯಾಗಿರುವ ಕೆಲವು ಅಥ್ಲೀಟ್‌ಗಳು ವಿಶ್ವಚಾಂಪಿಯನ್‌ಶಿಪ್‌ನ ಅರ್ಹತಾ ಸಮಯವನ್ನು ರೀಚ್‌ ಆಗಿಲ್ಲ. ಆದರೂ ಅವಕಾಶ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ .

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.