ದೀಪ್ತಿ ಶರ್ಮ, ಶಫಾಲಿ ವರ್ಮ ಆರ್ಭಟ : ವಿಂಡೀಸ್‌ ವಿರುದ್ಧ ಮತ್ತೂಂದು ವಿಕ್ರಮ


Team Udayavani, Nov 12, 2019, 5:28 AM IST

deept-isharma

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಆಫ್ ಸ್ಪಿನ್ನರ್‌ ದೀಪ್ತಿ ಶರ್ಮ ಅವರ ಘಾತಕ ಬೌಲಿಂಗ್‌ ಮತ್ತು ಯುವ ಆರಂಭಿಕ ಆಟಗಾರ್ತಿ ಶಫಾಲಿ ವರ್ಮ ಅವರ ಮತ್ತೂಂದು ಅಮೋಘ ಇನ್ನಿಂಗ್ಸ್‌ ನೆರವಿನಿಂದ ವೆಸ್ಟ್‌ ಇಂಡೀಸ್‌ ಎದುರಿನ 2ನೇ ಟಿ20 ಪಂದ್ಯದಲ್ಲಿ ಪ್ರವಾಸಿ ಭಾರತ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು 5 ಪಂದ್ಯಗಳ ಸರಣಿಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗಕ್ಕೆ ಒಲಿದ ಸತತ 2ನೇ ಗೆಲುವು.

ರವಿವಾರದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ ಗಳಿಸಿದ್ದು 7 ವಿಕೆಟಿಗೆ ಕೇವಲ 103 ರನ್‌. ದೀಪ್ತಿ ಶರ್ಮ 10 ರನ್ನಿಗೆ 4 ವಿಕೆಟ್‌ ಉಡಾಯಿಸಿ ಕೆರಿಬಿಯನ್ನರನ್ನು ಕಾಡಿದರು. ಇದು ದೀಪ್ತಿ ಶರ್ಮ ಅವರ ಅತ್ಯುತ್ತಮ ಬೌಲಿಂಗ್‌ ಸಾಧನೆಯಾಗಿದೆ. ಅಮೋಘ ಚೇಸಿಂಗ್‌ ನಡೆಸಿದ ಭಾರತ ಕೇವಲ 10.3 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 104 ರನ್‌ ಬಾರಿಸಿತು.

ಶಫಾಲಿ ಸತತ 2ನೇ ಅರ್ಧ ಶತಕ
ಇಲ್ಲೇ ನಡೆದ ಮೊದಲ ಪಂದ್ಯದಲ್ಲಿ 73 ರನ್‌ ಬಾರಿಸಿ ಮಿಂಚಿದ್ದ 15ರ ಹರೆಯದ ಶಫಾಲಿ ವರ್ಮ, ದ್ವಿತೀಯ ಮುಖಾಮುಖೀಯಲ್ಲೂ ಅರ್ಧ ಶತಕ ದಾಖಲಿಸಿದರು. ಶಫಾಲಿ ಗಳಿಕೆ 35 ಎಸೆತಗಳಿಂದ ಅಜೇಯ 69 ರನ್‌. ಇದರಲ್ಲಿ 10 ಬೌಂಡರಿ, 2 ಸಿಕ್ಸರ್‌ ಒಳಗೊಂಡಿತ್ತು.

ಮತ್ತೋರ್ವ ಓಪನರ್‌ ಸ್ಮತಿ ಮಂಧನಾ ಔಟಾಗದೆ 30 ರನ್‌ ಮಾಡಿದರು. 28 ಎಸೆತಗಳ ಈ ಇನ್ನಿಂಗ್ಸ್‌ ನಲ್ಲಿ 4 ಬೌಂಡರಿ ಸೇರಿತ್ತು. ವಿಂಡೀಸ್‌ ಒಂದೂ ವಿಕೆಟ್‌ ಉರುಳಿಸಲಾಗದೆ ಹತಾಶೆಗೊಳಗಾಯಿತು.

ಭಾರತದ ಬೌಲಿಂಗ್‌ ದಾಳಿಗೆ ಕೆರಿಬಿಯನ್ನರ ಬಳಿ ಯಾವ ಹಂತದಲ್ಲೂ ಉತ್ತರವಿರಲಿಲ್ಲ. ಅನಿಸಾ ಮೊಹಮ್ಮದ್‌ ಪಡೆ ನಿರಂತರವಾಗಿ ವಿಕೆಟ್‌ ಉರುಳಿಸಿಕೊಳ್ಳುತ್ತ ಹೋಯಿತು. ಮಧ್ಯಮ ಸರದಿಯ ಶಡೀಮ್‌ ನೇಶನ್‌ 32 ಮತ್ತು ಓಪನರ್‌ ಹ್ಯಾಲಿ ಮ್ಯಾಥ್ಯೂಸ್‌ 23 ರನ್‌ ಮಾಡಿ ಒಂದಿಷ್ಟು ಹೋರಾಟ ತೋರಿದರು.

ಸರಣಿಯ 3ನೇ ಪಂದ್ಯ ನ. 14ರಂದು ಗಯಾನಾದ “ಪ್ರೊವಿಡೆನ್ಸ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌: ವೆಸ್ಟ್‌ ಇಂಡೀಸ್‌-20 ಓವರ್‌ಗಳಲ್ಲಿ 7 ವಿಕೆಟಿಗೆ 103 (ನೇಶನ್‌ 32, ಹ್ಯಾಲಿ 23, ನತಾಶಾ 17, ದೀಪ್ತಿ 10ಕ್ಕೆ 4, ಶಿಖಾ 18ಕ್ಕೆ 1, ರಾಧಾ 20ಕ್ಕೆ 1, ಪೂಜಾ 23ಕ್ಕೆ 1). ಭಾರತ-10.3 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 104 (ಶಫಾಲಿ ಔಟಾಗದೆ 69, ಮಂಧನಾ ಔಟಾಗದೆ 30). ಪಂದ್ಯಶ್ರೇಷ್ಠ: ದೀಪ್ತಿ ಶರ್ಮ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.