“ಇನ್ನೂ ಸಮಯವಿದೆ, ಮನೆಯಲ್ಲಿರಿ’’ ಲಾಕ್ ಡೌನ್ ನ ಡ್ಯೂಟಿಯಲ್ಲಿ ಕಬಡ್ಡಿ ಸ್ಟಾರ್ ಅಜಯ್ ಠಾಕೂರ್
Team Udayavani, Mar 27, 2020, 9:41 AM IST
ಧರ್ಮಶಾಲಾ: ದೇಶದಲ್ಲಿ ಕೋವಿಡ್-19 ಸೋಂಕು ತಡೆಗಾಗಿ 21 ದಿನಗಳ ಲಾಕ್ ಡೌನ್ ಹೇರಲಾಗಿದೆ. ಈ ಮಧ್ಯೆ ಕಬಡ್ಡಿ ಸ್ಟಾರ್ ಅಜಯ್ ಠಾಕೂರ್ ಕೂಡಾ ಡ್ಯೂಟಿಯಲ್ಲಿದ್ದು, ಖಾಕಿ ತೊಟ್ಟು ಪ್ರಧಾನ ಮಂತ್ರಿಗಳ ಲಾಕ್ ಡೌನ್ ಆದೇಶವನ್ನು ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ.
ನಿಮಗೆ ಗೊತ್ತಿರುವಂತೆ ಅಜಯ್ ಠಾಕೂರ್ ಹಿಮಾಚಲ ಪ್ರದೇಶದಲ್ಲಿ ಪೊಲೀಸ್ ಉಪವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ವಿಶ್ವ ಕಬಡ್ಡಿಯಲ್ಲಿ ಪ್ರಸಿದ್ದಿ ಪಡೆದಿರುವ ಅಜಯ್ ಠಾಕೂರ್ ಪದ್ಮಶ್ರೀ ಪುರಸ್ಕೃತ ಕೂಡಾ. ಸದ್ಯ ಹಿಮಾಚಲ ಪ್ರದೇಶ ರಾಜ್ಯದ ಬಿಲಾಸ್ಪುರದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿರುವ ಮಾಜಿ ಬೆಂಗಳೂರು ಬುಲ್ಸ್ ಆಟಗಾರ “ ಆನ್ ಡ್ಯೂಟಿ” ಎಂದು ಬರೆದುಕೊಂಡಿದ್ದಾರೆ.
“ಇನ್ನೂ ಸಮಯವಿದೆ. ನೀವೂ ಮನೆಯಲ್ಲಿರಿ.ನಿಮ್ಮವರಿಗೂ ಹೇಳಿ. ಆಡಳಿತದೊಂದಿಗೆ ಸಹಕರಿಸಿ. ಆವಾಗ ಮಾತ್ರ ಇದು ಸಾಧ್ಯ” ಎಂದು ಅಜಯ್ ಠಾಕೂರ್ ಮನವಿ ಮಾಡಿದ್ದಾರೆ.
ದೇಶದಾದ್ಯಂತ ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು 21 ದಿನಗಳ ಲಾಕ್ ಡೌನ್ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆದೇಶಿಸಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!