MS Dhoni ಮಾತುಗಳನ್ನು ನೀವು ಕೇಳಿದರೆ…..: ಕ್ಯಾಪ್ಟನ್ ಕೂಲ್ ನಾಯಕತ್ವದ ಬಗ್ಗೆ ರಹಾನೆ


Team Udayavani, Apr 24, 2023, 1:17 PM IST

Ajinkya Rahane spoke about MS Dhoni’s captaincy

ಕೋಲ್ಕತ್ತಾ: ಭಾರತದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಸದ್ಯ ಅದ್ಭುತ ಟಿ20 ಫಾರ್ಮ್ ನಲ್ಲಿದ್ದಾರೆ. ಪ್ರತಿ ಪಂದ್ಯದಲ್ಲೂ ಅಬ್ಬರಿಸುತ್ತಿರುವ ರಹಾನೆ ರವಿವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 29 ಎಸೆತದಲ್ಲಿ 71 ರನ್ ಚಚ್ಚಿದರು.

ಅಜಿಂಕ್ಯ ರಹಾನೆ ಅವರು ಈ ಅಜೇಯ ಇನ್ನಿಂಗ್ಸ್ ನಲ್ಲಿ ಆರು ಬೌಂಡರಿ ಮತ್ತು ಐದು ಸಿಕ್ಸರ್ ಹೊಡೆದರು. ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಪಂದ್ಯದ ಬಳಿಕ ಮಾತನಾಡಿದ ಅವರು, ಆಡುವ ಸಮಯದಲ್ಲಿ ಸ್ಪಷ್ಟ ಮನಸ್ಥಿತಿಯನ್ನು ಹೊಂದಿದ್ದೆ. ನಿಮ್ಮ ಕಿವಿಗಳ ನಡುವಿನ ವಿಷಯ ಸರಿಯಾಗಿದ್ದರೆ ಮತ್ತು ನಿಮ್ಮ ಮನಸ್ಸು ಸರಿಯಾಗಿದ್ದರೆ ನೀವು ಚೆನ್ನಾಗಿರುತ್ತೀರಿ. ನಾನು ನನ್ನ ಆಟವನ್ನು ಆನಂದಿಸಲು ಪ್ರಯತ್ನಿಸುತ್ತಿದ್ದೇನೆ. ವಿಕೆಟ್ ಸ್ವಲ್ಪ ಜಿಗುಟಾಗಿತ್ತು, ನಾವು ಉತ್ತಮ ಆರಂಭವನ್ನು ಹೊಂದಿದ್ದೆವು, ಹೀಗಾಗಿ ನಂತರ ನಾನು ನನ್ನ ಹೊಡೆತಗಳನ್ನು ಆಡಲು ಮತ್ತು ಆವೇಗವನ್ನು ಉಳಿಸಿಕೊಂಡು ಆಡಿದೆ. ನಾನು ಇಲ್ಲಿಯವರೆಗೆ ನನ್ನ ಎಲ್ಲಾ ಇನ್ನಿಂಗ್ ಗಳನ್ನು ಆನಂದಿಸಿದ್ದೇನೆ, ಆದರೆ ಉತ್ತಮವಾದದ್ದು ಇನ್ನೂ ಬರಬೇಕಿದೆ ಎಂದು ನಾನು ಭಾವಿಸುತ್ತೇನೆ. ನಾನು ಹಲವು ವರ್ಷಗಳಿಂದ ಭಾರತಕ್ಕಾಗಿ ಮಹಿ ಭಾಯ್ (ಧೋನಿ) ಅಡಿಯಲ್ಲಿ ಆಡಿದ್ದೇನೆ ಮತ್ತು ಈಗ ಸಿಎಸ್ ಕೆ ನಲ್ಲಿಯೂ ಸಹ ಕಲಿಯುತ್ತಿದ್ದೇನೆ. ಅವರು ಹೇಳುವುದನ್ನು ನೀವು ಕೇಳಿದರೆ, ನೀವು ಪ್ರದರ್ಶನ ನೀಡದೆ ಇರಲಾಗುವುದಿಲ್ಲ” ಎಂದರು.

ಇದನ್ನೂ ಓದಿ:ಕೈ ಬಂಡಾಯ ಶಮನ; ಕಮಲ, ದಳಕ್ಕೆ ಬಿಸಿ ತುಪ್ಪ

ಈ ಬಾರಿ ಸಿಎಸ್ ಕೆ ಪರವಾಗಿ ಐದು ಪಂದ್ಯಗಳನ್ನು ಆಡಿರುವ ಅಜಿಂಕ್ಯ ರಹಾನೆ, 52.25ರ ಸರಾಸರಿಯಲ್ಲಿ 209 ರನ್ ಗಳಿಸಿದ್ದಾರೆ. ಗಮನಾರ್ಹವಾಗಿ ಅಜಿಂಕ್ಯ ರಹಾನೆ ಈ ಬಾರಿ 199.04ರ ಸ್ಟ್ರೈಕ್ ರೇಟ್ ನಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.