ಇವರು ಟೀಂ ಇಂಡಿಯಾ ಕಂಡ ಶ್ರೇಷ್ಠ ಫೀಲ್ಡರ್ ಗಳು: ಆರು ಜನರನ್ನು ಹೆಸರಿಸಿದ ಆಕಾಶ್ ಚೋಪ್ರಾ


Team Udayavani, Jul 12, 2020, 5:23 PM IST

ಇವರು ಟೀಂ ಇಂಡಿಯಾ ಕಂಡ ಶ್ರೇಷ್ಠ ಫೀಲ್ಡರ್ ಗಳು: ಆರು ಜನರನ್ನು ಹೆಸರಿಸಿದ ಆಕಾಶ್ ಚೋಪ್ರಾ

ಮುಂಬೈ: ಕ್ರಿಕೆಟ್ ನಲ್ಲಿ ಬ್ಯಾಟಿಂಗ್, ಬೌಲಿಂಗ್ ನಂತೆಯೇ ಫೀಲ್ಡಿಂಗ್ ಗೂ ಮಹತ್ವವಿದೆ. ಕಳೆದ ಕೆಲವು ವರ್ಷಗಳಲ್ಲಿ ಟೀಂ ಇಂಡಿಯಾದ ಫೀಲ್ಡಿಂಗ್ ಕೂಡಾ ಅತ್ಯುತ್ತಮ ಎನ್ನುವಂತೆ ಸುಧಾರಣೆ ಕಂಡಿದೆ. ಅಂತಹುದರಲ್ಲಿ ಭಾರತ ಕಂಡ ಶ್ರೇಷ್ಠ ಫೀಲ್ಡರ್ ಯಾರು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ ಮಾಜಿ ಆಟಗಾರ ಆಕಾಶ್ ಚೋಪ್ರಾ.

ತನ್ನ ಯೂಟ್ಯೂಬ್ ವಿಡಿಯೋದಲ್ಲಿ ಚೋಪ್ರಾ ಭಾರತದ ಆರು ಶ್ರೇಷ್ಠ ಫೀಲ್ಡರ್ ಗಳನ್ನು ಹೆಸರಿಸಿದ್ದಾರೆ. ಈ ಪಟ್ಟಿಯಲ್ಲಿ ಆರನೇ ಸ್ಥಾನವನ್ನು ಚೋಪ್ರಾ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಆಟಗಾರನಾಗಿ ಬೆಳೆದಂತೆಲ್ಲಾ ಆತನ ಫೀಲ್ಡಿಂಗ್ ಕೂಡಾ ಉತ್ತಮವಾಗಿದೆ. ಯಾವಾಗಲೂ ಚೆಂಡು ತನ್ನ ಬಳಿ ಬರಬೇಕು ಎಂದು ಆಶಿಸುತ್ತಾರೆ ಎನ್ನತ್ತಾರೆ ಚೋಪ್ರಾ.

ಐದನೇ ಸ್ಥಾನ ವಿಶ್ವಕಪ್ ಗೆದ್ದ ನಾಯಕ ಕಪಿಲ್ ದೇವ್. 1983ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿಂಡೀಸ್ ನ ವಿವಿಯನ್ ರಿಚರ್ಡ್ ಅವರ ಕ್ಯಾಚನ್ನು ಕಪಿಲ್ ದೇವ್ ಅದ್ಭುತವಾಗಿ ಹಿಡಿದಿದ್ದರು ಎಂದಿದ್ದಾರೆ.

ನಾಲ್ಕು ಮತ್ತು ಮೂರನೇ ಸ್ಥಾನವನ್ನು ಕ್ರಮವಾಗಿ ಯುವರಾಜ್ ಮತ್ತು ಕೈಫ್ ಗೆ ನೀಡಿದ್ದಾರೆ ಚೋಪ್ರಾ. ಈ ಇಬ್ಬರು ಫೀಲ್ಡರ್ ಗಳು ಟೀಂ ಇಂಡಿಯಾದದಲ್ಲಿ ಫೀಲ್ಡಿಂಗ್ ನ ಕ್ರೇಜ್ ಹುಟ್ಟು ಹಾಕಿದವರು. ಅನಾರೋಗ್ಯದ ನಂತರ ಯುವಿ ಫೀಲ್ಡಿಂಗ್ ಸ್ವಲ್ಪ ಕಳಪೆಯಾಯಿತು. ಅದಕ್ಕೆ ನಾಲ್ಕನೇ ಸ್ಥಾನ ಎಂದು ಚೋಪ್ರಾ ಹೇಳಿದ್ದಾರೆ.

ದ್ವಿತೀಯ ಸ್ಥಾನ ಸುರೇಶ್ ರೈನಾಗೆ. ಈತ ಮೈದಾನದ ಯಾವ ಮೂಲೆಯಲ್ಲಿ ಬೇಕಾದರೂ ಯಾವ ರೀತಿ ಬೇಕಾದರೂ ಫೀಲ್ಡಿಂಗ್ ಮಾಡಬಲ್ಲ ಎಂದು ಹೊಗಳಿದ್ದಾರೆ.

ಚೋಪ್ರಾ ಪ್ರಕಾರ ಭಾರತ ಕಂಡ ಶ್ರೇಷ್ಠ ಫೀಲ್ಡರ್ ರವೀಂದ್ರ ಜಡೇಜಾ. ಆತ ಚೆಂಡು ಎಸೆಯುವ ವೇಗ ರಾಕೆಟ್ ನಂತೆ. ಸದ್ಯದ ಮಟ್ಟಿಗೆ ಈತನಂತಹ ಫೀಲ್ಡರ್ ಇಲ್ಲ ಎಂದು ಆಕಾಶ್ ಹೇಳಿದ್ದಾರೆ.

ಟಾಪ್ ನ್ಯೂಸ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.