ಐಪಿಎಲ್ ನಿಂದ ಹೊರಬಿದ್ದ ಮುಕೇಶ್ ಚೌಧರಿ; ಹೊಸ ಬೌಲರ್ ಆಯ್ಕೆ ಮಾಡಿದ ಸಿಎಸ್ ಕೆ
Team Udayavani, Mar 31, 2023, 2:58 PM IST
ಅಹಮದಾಬಾದ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಐಪಿಎಲ್ ಸೀಸನ್ 16ನ ಆರಂಭಿಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಭಿಯಾನ ಆರಂಭಿಸಲಿದೆ.
ಇದೇ ವೇಳೆ ಸಿಎಸ್ ಕೆ ಫ್ರಾಂಚೈಸಿಗೆ ಗಾಯಾಳುಗಳ ಸಮಸ್ಯೆಯೂ ಕಾಡುತ್ತಿದೆ. ಎಡಗೈ ಸೀಮರ್ ಮುಕೇಶ್ ಚೌಧರಿ ಅವರು ಗಾಯದ ಕಾರಣದಿಂದ ಸಂಪೂರ್ಣ ಕೂಟದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಆಕಾಶ್ ಸಿಂಗ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
ಕಳೆದ ಋತುವಿನಲ್ಲಿ ಐಪಿಎಲ್ಗೆ ಪಾದಾರ್ಪಣೆ ಮಾಡಿ 16 ವಿಕೆಟ್ಗಳನ್ನು ಕಬಳಿಸಿದ್ದ ಮುಕೇಶ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮುಕೇಶ್ ಕಳೆದ ವರ್ಷದ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಲ್ಲಿ ಒಬ್ಬರಾಗಿದ್ದರು.
2020 ರಲ್ಲಿ ಭಾರತದ ಅಂಡರ್-19 ವಿಶ್ವಕಪ್ ತಂಡದ ಭಾಗವಾಗಿದ್ದ ಆಕಾಶ್ ಸಿಂಗ್ ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಎಡಗೈ ವೇಗಿ ಇದುವರೆಗೆ 9 ಲಿಸ್ಟ್ ಎ ಪಂದ್ಯಗಳು ಮತ್ತು ಐದು ಪ್ರಥಮ ದರ್ಜೆ ಪಂದ್ಯಗಳ ಜೊತೆಗೆ 9 ಟಿ 20 ಪಂದ್ಯಗಳನ್ನು ಆಡಿದ್ದಾರೆ ಮತ್ತು 31 ವಿಕೆಟ್ಗಳನ್ನು ಹೊಂದಿದ್ದಾರೆ. 20 ಲಕ್ಷಕ್ಕೆ ಮೂಲಬೆಲೆಗೆ ಆಕಾಶ ಸಿಎಸ್ ಕೆ ಸೇರಿದ್ದಾರೆ.
Charging up our pace cartel with all that young potential! Welcome to the pride, Akash! ⚡🦁#WhistlePodu #Yellove 💛 pic.twitter.com/vgd4CeKpGN
— Chennai Super Kings (@ChennaiIPL) March 30, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್