ಹಣಕ್ಕಾಗಿ ಜನ ಏನೆಲ್ಲ ಮಾಡುತ್ತಾರೆ?

ಕೊಹ್ಲಿ ಮೊಡವೆ ಜಾಹೀರಾತಿಗೆ ಹಾಜ್‌ ಟೀಕೆ

Team Udayavani, May 21, 2019, 8:34 PM IST

Vrat-Kohli-726

ಮುಂಬೈ: ಇತ್ತೀಚೆಗೆ ನ್ಯೂಜಿಲೆಂಡ್‌ ವೇಗದ ಬೌಲರ್‌ ಜಿಮ್ಮಿ ನೀಶಮ್‌, ಐಪಿಎಲ್‌ ಫೈನಲ್‌ನಲ್ಲಿ ಎಂ.ಎಸ್‌. ಧೋನಿ ಔಟಾದ ಕ್ರಮವನ್ನು ವಿಶ್ಲೇಷಿಸಿ, ಭಾರತೀಯ ಅಭಿಮಾನಿಗಳಿಂದ ಕಟು ಟೀಕೆ ಎದುರಿಸಿದ್ದರು.

ಈಗ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಬ್ರಾಡ್‌ ಹಾಜ್‌ ಸರದಿ. ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ಮೊಡವೆ ನಿವಾರಣೆ ಉತ್ಪನ್ನವೊಂದಕ್ಕೆ ಜಾಹೀರಾತು ನೀಡಿದ್ದನ್ನು ತಮ್ಮ ಟ್ವೀಟರ್‌ನಲ್ಲಿ ಹಾಕಿಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಹಾಜ್‌, ಹಣಕ್ಕಾಗಿ ಜನ ಏನೆಲ್ಲ ಮಾಡುತ್ತಾರೆ ಎಂದು ಟೀಕಿಸಿದ್ದರು. ಇದರ ಬೆನ್ನಲ್ಲೇ ಕೊಹ್ಲಿ ಅಭಿಮಾನಿಗಳು ಜೋರಾಗಿ ತಿರುಗಿಬಿದ್ದಿದ್ದಾರೆ. ಕಂಗಾಲಾದ ಹಾಜ್‌, ತನ್ನ ಹೇಳಿಕೆಯ ಅರ್ಥವೇ ಬೇರೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಆಗಿದ್ದೇನು?: ವಿರಾಟ್‌ ಕೊಹ್ಲಿ ಮತ್ತು ಭಾರತ ಕ್ರಿಕೆಟ್‌ನ ಹೊಸ ತಾರೆ ರಿಷಭ್‌ ಪಂತ್‌ ಹಿಮಾಲಯ ಮೆನ್‌ ಎಂಬ ಉತ್ಪನ್ನಕ್ಕೆ ಜಾಹೀರಾತು ನೀಡಿದ್ದರು. ಅದನ್ನು ಟ್ವೀಟ್‌ ಮಾಡಿದ್ದ ಕೊಹ್ಲಿ, ಇದನ್ನು ನೋಡಿ ಎಂದು ಅಭಿಮಾನಿಗಳಿಗೆ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಹಾಜ್‌, ಹಣಕ್ಕಾಗಿ ಜನ ಏನೇನೆಲ್ಲ ಮಾಡುತ್ತಾರೆಂದು ನೋಡಿ ಅಚ್ಚರಿಯಾಗುತ್ತದೆ ಎಂದಿದ್ದರು.

ಕೂಡಲೇ ಕೊಹ್ಲಿ ಅಭಿಮಾನಿಗಳು ಹಾಜ್‌ಗೆ ಕಟುವಾದ ಪ್ರತಿಕ್ರಿಯೆ ನೀಡಿದರು. ಗೆಲುವಿಗಾಗಿ ಕೆಲವರು ಏನೇನೆಲ್ಲ ಮಾಡುತ್ತಾರೆಂದು ಅಚ್ಚರಿಯಾಗುತ್ತದೆ ಎಂದು ಒಬ್ಬರು ಕುಟುಕಿದರು.

ಅದು ಕಳೆದ ವರ್ಷ ಆಸ್ಟ್ರೇಲಿಯದ ಮೂವರು ಕ್ರಿಕೆಟಿಗರಾದ ಸ್ಟೀವ್‌ ಸ್ಮಿತ್‌, ಡೇವಿಡ್‌ ವಾರ್ನರ್‌, ಕ್ಯಾಮರೂನ್‌ ಬ್ಯಾನ್‌ಕ್ರಾಫ್ಟ್, ದಕ್ಷಿಣ ಆಫ್ರಿಕಾದಲ್ಲಿ ಚೆಂಡು ವಿರೂಪ ಮಾಡಿ ನಿಷೇಧಕ್ಕೊಳಗಾಗಿದ್ದರ ಟೀಕೆಯಾಗಿತ್ತು. ಇನ್ನೊಬ್ಬರು ಆಸ್ಟ್ರೇಲಿಯದ ಮಾಜಿ ನಾಯಕ ಸ್ಟೀವ್‌ ಸ್ಮಿತ್‌ ಮತ್ತು ಇಂಗ್ಲೆಂಡ್‌ ಆಲ್‌ರೌಂಡರ್‌ ಬೆನ್‌ಸ್ಟೋಕ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡದ ಜಾಹೀರಾತೊಂದರಲ್ಲಿ ನರ್ತಿಸಿದ್ದನ್ನು ಟ್ವೀಟ್‌ ಮಾಡಿದ್ದಾರೆ.

ಅಷ್ಟು ಮಾತ್ರವಲ್ಲ ಆಸೀಸ್‌ ಕ್ರಿಕೆಟಿಗರು ಭಾರತೀಯರಿಗೆ ಸಂಬಂಧಿಸಿದ ಜಾಹೀರಾತಿನಲ್ಲಿ ಏಕೆ ಕುಣಿಯುತ್ತಾರೆಂದು ನನಗೆ ಅಚ್ಚರಿಯಾಗುತ್ತದೆ ಎಂದು ಟೀಕಿಸಿದ್ದಾರೆ. ಇದೆಲ್ಲ ಟೀಕೆಗಳಿಂದ ಬೆಚ್ಚಿಬಿದ್ದ ಹಾಜ್‌, ದಿಢೀರನೆ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ.

ಜನ ಪ್ರತಿಕ್ರಿಯೆ ನೀಡುವಾಗ ಎಷ್ಟು ಕ್ರೂರವಾಗಿರುತ್ತಾರೆಂದು ನೋಡಿ ನನಗೆ ಅಚ್ಚರಿಯಾಗಿದೆ. ಇದು ಬಹಳ ಋಣಾತ್ಮಕವಾಗಿದೆ. ನಾನು ಋಣಾತ್ಮಕ ಅರ್ಥದಲ್ಲಿ ಹೇಳಿಲ್ಲ. ನನಗೆ ಹಣ ನೀಡಿದರೂ, ಮಾಡುವುದು ಅದನ್ನೇ ಎಂದು ರಾಗ ಬದಲಿಸಿದ್ದಾರೆ.

ಯಾರು ಹಾಜ್‌?: ಬ್ರಾಡ್‌ ಹಾಜ್‌ ಆಸ್ಟ್ರೇಲಿಯದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌, ಅರೆಕಾಲಿಕ ಸ್ಪಿನ್ನರ್‌ ಕೂಡ ಹೌದು. ಈಗವರಿಗೆ 44 ವರ್ಷ. ಆಸ್ಟ್ರೇಲಿಯ ಪರ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಐಪಿಎಲ್‌ನಲ್ಲಿ ಕೋಲ್ಕತ ನೈಟ್‌ ರೈಡರ್ಸ್‌ ಪರ ಆಡಿದ್ದಾರೆ. ಕೆಲ ಐಪಿಎಲ್‌ ತಂಡಗಳಿಗೆ ತರಬೇತಿಯನ್ನೂ ನೀಡಿದ್ದಾರೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.