ಒಲಂಪಿಕ್ ಕ್ರೀಡೆಯಲ್ಲಿ ಭಾಗಿಯಾಗಿ ಚಿನ್ನ ಗೆದ್ದು ಬನ್ನಿ.. :ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

ಒಲಿಂಪಿಕ್ ಕ್ರೀಡೆಯಲ್ಲಿ ಭಾರತ ಮೊದಲ ಐದು ಸ್ಥಾನದೊಳಗೆ ಬರುವ ಆಶಯ

Team Udayavani, May 3, 2022, 7:57 PM IST

ಒಲಿಂಪಿಕ್ ಕ್ರೀಡೆಯಲ್ಲಿ ಭಾಗಿಯಾಗಿ ಚಿನ್ನ ಗೆದ್ದು ಬನ್ನಿ.. :ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

ಬೆಂಗಳೂರು : ಒಲಂಪಿಕ್ ಕ್ರೀಡೆಯಲ್ಲಿ ಭಾರತ ಮೊದಲ ಐದನೇ ಸ್ಥಾನದ ಒಳಗೆ ಬರಬೇಕು ಎಂಬ ಆಶಯ ನಮ್ಮದು, ಒಲಂಪಿಕ್ ಕ್ರೀಡೆಯಲ್ಲಿ ಭಾಗಿಯಾಗಿ ಚಿನ್ನ ಗೆದ್ದು ಬನ್ನಿ. ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಖೇಲೋ ಇಂಡಿಯಾ 2021 ರ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಎರಡನೇ ಖೇಲೋ ಇಂಡಿಯಾ ಕಾರ್ಯಕ್ರಮದಲ್ಲಿ ಮೂರು ಸಾವಿರ ಕ್ರೀಡಾಪಟುಗಳು ಭಾಗಿಯಾಗಿದ್ದಾರೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಕಾರ್ಯಕ್ರಮಕ್ಕೆ ಇಷ್ಟು ಜನ ಕ್ರೀಡಾಪಟುಗಳು ಆಗಮಿಸಿರುವುದು ಸಂತಸದ ವಿಚಾರ ಅಲ್ಲದೆ ಒಲಿಂಪಿಕ್ ನಲ್ಲಿ ಭಾರತದ ಕ್ರೀಡಾಪಟುಗಳ ಕೊರತೆ ಇದೆ. ಕ್ರಿಕೆಟ್ ಒಂದನ್ನು ಬಿಟ್ಟು ಉಳಿದೆಲ್ಲಾ ಕ್ರೀಡೆಯಲ್ಲಿ ಕ್ರೀಡಾಪಟುಗಳ ಕೊರತೆ ಕಾಣುತ್ತಿತ್ತು ಆದರೆ ಇನ್ನು ಮುಂದೆ ಈ ರೀತಿ ಆಗಬಾರದು ಒಲಿಂಪಿಕ್ ಸೇರಿದಂತೆ ಎಲ್ಲಾ ಕ್ರೀಡೆಗಳಲ್ಲಿ ಭಾರತೀಯ ಕ್ರೀಡಾಪಟುಗಳು ಭಾಗಿಯಾಗಬೇಕು. ಎಲ್ಲಾ ಕ್ರೀಡೆಗಳಲ್ಲಿ ಭಾಗಿಯಾಗೋ ಮೂಲಕ ಭಾರತದ ಹೆಸರನ್ನು ಉತ್ತುಂಗಕ್ಕೆ ಏರಿಸಬೇಕು ಎಂದು ಹೇಳಿದರು.

ಜೀವನದಲ್ಲಿ ಯಾರು ಸಫಲರಾಗಿಲ್ಲವೋ ಅವರು ಕ್ರೀಡೆಯ ಮೂಲಕ ಸಫಲರಾಗಿದ್ದಾರೆ. ಈಗ ಎಲ್ಲರಿಗೂ ಒಲಿಂಪಿಕ್ ಕ್ರೀಡೆಗಳಲ್ಲಿ ಭಾಗಿಯಾಗಿ ಗೆಲುವು ಸಾಧಿಸುವ ಕ್ಷಣ ಎದುರಾಗಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿ, ಉತ್ತಮ ಕ್ರೀಡೆಗಳನ್ನು ನೋಡಿ ಎಂದರು.

ಇದನ್ನೂ ಓದಿ : ಖೇಲೋ ಇಂಡಿಯಾ ಪ್ರಧಾನಿ ಮೋದಿ ಅವರ ಕನಸು : ಅನುರಾಗ್ ಠಾಕೂರ್

75ನೇ ವರ್ಷದ ಆಜಾದ್ ಕಿ ಅಮೃತ ಮಹೋತ್ಸವ ದಿನದಲ್ಲಿ. ಒಲಿಂಪಿಕ್ ಕ್ರೀಡೆಯಲ್ಲಿ ಭಾರತದ ಸ್ಥಾನ 5ನೇ ಸ್ಥಾನದ ಒಳಗೆ ಬರಬೇಕು ಅನ್ನೋ ಆಶಯ ಇದೆ ಅದೆಲ್ಲವನ್ನು ನೀವು ಈಡೇರಿಸುತ್ತೀರಿ ಎನ್ನುವ ನಂಬಿಕೆ ಇದೆ ಎಂದರು.

ಒಡಿಸ್ಸಾದಲ್ಲಿ ಮೊದಲ ಬಾರಿಗೆ ಖೇಲೋ ಇಂಡಿಯಾ ನಡೆದಾಗ 118 ವಿವಿಗಳು ಮಾತ್ರ ಭಾಗಿಯಾಗಿದ್ದವು. ಆದರೆ ಇಂದು 208 ವಿವಿಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದರು.

ಯೋಗ ಮತ್ತು ಮಲ್ಲಕಂಬವನ್ನು ಕೂಡ ಕ್ರೀಡೆಗೆ ಸೇರಿಸಲಾಗಿದೆ. ಅಲ್ಲದೆ ಗ್ರಾಮೀಣ ಆಟವನ್ನೂ ಕ್ರೀಡೆಗೆ ಸೇರಿಸಿ, ವಿಶ್ವದ ಗಮನ ಸೆಳೆದಿದ್ದೇವೆ.

ಕ್ರೀಡಾಕೊಟದಲ್ಲಿ ಗೆದ್ದ ಜೈನ್ ವಿವಿಗೆ ಅಭಿನಂದನೆ ಸಲ್ಲಿಸಿದ ಸಚಿವರು ವಿಶ್ವದಲ್ಲೇ ಅತಿ ಹೆಚ್ಚು ಯುವಕರನ್ನ ಹೊಂದಿರೋ‌ ದೇಶ ನಮ್ಮದು.
ಇದೇ ರೀತಿಯ ಕ್ರೀಡೆಗಳ ಮೂಲಕ, ಆಟಡ ಮೂಲಕ ಒಲಿಂಪಿಕ್ ಕ್ರೀಡೆಗಳಲ್ಲಿ ಭಾಗವಹಿಸಿ ಗೆಲ್ಲಲು ಸಾಧ್ಯ, ನಾನು ಚಿಕ್ಕವನಾಗಿದ್ದಾಗ ಗುರೂಜಿಯವರು ಒಂದು ಮಾತು ಹೇಳಿದ್ದರು ‘ಕಷ್ಟ ಪಟ್ಟವನಿಗೆ ಸುಖ ಸಿಗಲಿದೆ ಅಂತ. ಸೋಲು ಅನ್ನೋದನ್ನ ತಳ್ಳಿ, ಗೆಲ್ಲುವತ್ತ ಮನಸು ಮಾಡಬೇಕು ಎಂದು ಕ್ರೀಡಾಳುಗಳನ್ನು ಹುರಿದುಂಬಿಸಿದರು.

ಕರ್ನಾಟಕ ಸರ್ಕಾರ 75ಜನ ಕ್ರೀಡಾಪಟುಗಳನ್ನ ದತ್ತು ತೆಗೆದುಕೊಂಡಿದೆ. ಎಲ್ಲಾ ರಾಜ್ಯ ಸರ್ಕಾರಗಳು ಕೂಡ ದತ್ತು ತೆಗೆದುಕೊಂಡು ಕ್ರೀಡೆಗೆ ಪ್ರೋತ್ಸಾಹ ನೀಡಬೇಕು. ಭಾರತ ಮುಂದೆ ಒಲಿಂಪಿಕ್ ನಲ್ಲಿ ದೊಡ್ಡ ಸಾಧನೆ ಮಾಡಲಿದೆ, ಗೆಲುವು ಸಾಧಿಸೋ ಮೂಲಕ ಉನ್ನತ ಸ್ಥಾನಕ್ಕೆ ಹೋಗಲಿದೆ. ಬೆವರು ಹರಿಸೋ ಮೂಲಕ ಎಲ್ಲರೂ ಕ್ರೀಡೆಯಲ್ಲಿ ಭಾಗಿಯಾಗಿದ್ದಾರೆ. ಒಲಿಂಪಿಕ್ ನಲ್ಲಿ ಭಾಗಿಯಾಗಿ ಚಿನ್ನ ಗೆದ್ದು ಬನ್ನಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.