ನಾಲ್ಕು ದಿನಗಳ ಟೆಸ್ಟ್ ಗೆ ಕುಂಬ್ಳೆ ವಿರೋಧ
Team Udayavani, Feb 29, 2020, 5:05 AM IST
ಸಾಂದರ್ಭಿಕ ಚಿತ್ರ..
ಹೊಸದಿಲ್ಲಿ: ಭಾರತ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ ಇದೇ ಮೊದಲ ಬಾರಿ ನಾಲ್ಕು ದಿನಗಳ ಟೆಸ್ಟ್ ಕ್ರಿಕೆಟ್ ಆಲೋಚನೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಒಂದು ದಿನ ಕಡಿಮೆ ಮಾಡುವುದನ್ನು ತಾವು ವಿರೋಧಿಸುವುದಾಗಿ ಹೇಳಿದ್ದಾರೆ.
2023ರ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ವೇಳಾಪಟ್ಟಿಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ಟೆಸ್ಟ್ ಪಂದ್ಯಗಳನ್ನು 4 ದಿನಗಳಿಗೆ ಸೀಮಿತಗೊಳಿಸುವ ಪ್ರಸ್ತಾವವನ್ನು ಐಸಿಸಿ ಮುಂದಿಟ್ಟಿತ್ತು. ಇದರಿಂದ ಟೆಸ್ಟ್ ಕಡೆಗೆ ಹೆಚ್ಚು ಪ್ರೇಕ್ಷಕರನ್ನು ಆಕರ್ಷಿಸಲು ಸಾಧ್ಯವಾಗಲಿದೆ ಎಂದು ಹೇಳಿತ್ತು. ಈ ಬಗ್ಗೆ ಮಾತನಾಡಿರುವ ಕುಂಬ್ಳೆ ನನ್ನ ಅಭಿಪ್ರಾಯಕ್ಕಿಂತಲೂ ಆಟಗಾರರಿಗೂ ಕೂಡ 4 ದಿನಗಳ ಟೆಸ್ಟ್ ಆಡಲು ಇಷ್ಟವಿಲ್ಲ ಎಂಬುದು ಇಲ್ಲಿ ಮುಖ್ಯ. ಟೆಸ್ಟ್ಎಂದರೆ ಅದು 5 ದಿನಗಳ ಪಂದ್ಯ. ಐದು ದಿನಗಳ ಕಾಲ ಆಡುವುದರಿಂದಲೇ ಅದನ್ನು ಟೆಸ್ಟ್ ಎಂದು ಕರೆಯಲಾಗುತ್ತದೆ. ಈಗ ಅದನ್ನು ನಾಲ್ಕು ದಿನಕ್ಕೆ ಇಳಿಸಿದರೆ ಟೆಸ್ಟ್ ಆಗಿ ಉಳಿಯುವುದಿಲ್ಲ. ಇದು ನನ್ನ ಸ್ಪಷ್ಟ ನಿಲುವು ಎಂದು ಕುಂಬ್ಳೆ ಹೇಳಿದ್ದಾರೆ.
ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥ ಕೂಡ ಆಗಿರುವ ಕುಂಬ್ಳೆ, ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ನಾಲ್ಕು ದಿನಗಳಿಗೆ ಸೀಮಿತಗೊಳಿಸುವ ಬಗ್ಗೆ ಎರಡು ವರ್ಷಗಳ ಹಿಂದೆಯೇ ಚರ್ಚಿಸಲಾಗಿತ್ತು ಎಂದು ಹೇಳಿದ್ದಾರೆ.
ಎರಡು ವರ್ಷಗಳ ಹಿಂದೆ ಚರ್ಚೆ
ಎರಡು ವರ್ಷಗಳ ಹಿಂದೆಯೇ ಈ ಬಗ್ಗೆ ಚರ್ಚೆಯಾಗಿದೆ. ಆದರೆ, ನಾಲ್ಕು ದಿನದ ಟೆಸ್ಟ್ ಕಡ್ಡಾಯ ಮಾಡುವ ಕಡೆಗೆ ಯಾವುದೇ ದಿಟ್ಟ ಹೆಜ್ಜೆ ಇಡಲಾಗಿಲ್ಲ. ಇದನ್ನು ಮಾಡುವ ಅಗತ್ಯವಿದೆ ಎಂದು ನನಗನಿಸುತ್ತಿಲ್ಲ. ದಕ್ಷಿಣ ಆಫ್ರಿಕಾ-ಜಿಂಬಾಬ್ವೆ ಮತ್ತು ಇಂಗ್ಲೆಂಡ್-ಐಯರ್ಲ್ಯಾಂಡ್ ತಂಡಗಳ ನಡುವೆ 4 ದಿನಗಳ ಟೆಸ್ಟ್ ಪಂದ್ಯಗಳನ್ನು ಪ್ರಯೋಗಾರ್ಥವಾಗಿ ಆಡಿಸಲಾಗಿತ್ತು. ಆದರೆ, ಜಿಂಬಾಬ್ವೆ, ಐಯರ್ಲ್ಯಾಂಡ್ ಮತ್ತು ಅಫ್ಘಾನಿಸ್ಥಾನದಂತಹ ತಂಡಗಳ ಎದುರಷ್ಟೇ ಇದು ಸಾಧ್ಯ, ಎಂದು ಕುಂಬ್ಳೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ