ಟೀಂ ಇಂಡಿಯಾದ ನಾಲ್ಕನೇ ಕ್ರಮಾಂಕಕ್ಕೆ ಈತನೇ ಬೆಸ್ಟ್: ಅನಿಲ್ ಕುಂಬ್ಳೆ
Team Udayavani, Dec 13, 2019, 3:30 PM IST
ಚೆನ್ನೈ: ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾ ವಿಶ್ವ ಕ್ರಿಕೆಟ್ ನ ಅತ್ಯಂತ ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಸತತ ಸರಣಿಗಳನ್ನು ಜಯಿಸುತ್ತಿದ್ದರೂ ಭಾರತ ಏಕದಿನ ತಂಡದ ಆ ಒಂದು ಕೊರಗಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅದೇ ನಾಲ್ಕನೇ ಕ್ರಮಾಂಕ. ಸದ್ಯ ಭಾರತದ ಲೆಗ್ ಸ್ಪಿನ್ ಲೆಜೆಂಡ್ ಅನಿಲ್ ಕುಂಬ್ಳೆ ಈ ಸಮಸ್ಯೆಗೆ ಪರಿಹಾರ ಸೂಚಿಸಿದ್ದಾರೆ.
ಮುಂಬರುವ ವೆಸ್ಟ್ ಇಂಡೀಸ್ ಸರಣಿಯಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಾಳಾದ ಕಾರಣ ಕೆ ಎಲ್ ರಾಹುಲ್ ಇನ್ನಿಂಗ್ಸ್ ಓಪನ್ ಮಾಡಲಿದ್ದಾರೆ. ಹೀಗಾಗಿ ನಾಲ್ಕನೇ ಕ್ರಮಾಂಕದಲ್ಲಿ ಯುವ ಆಟಗಾರ ಶ್ರೇಯಸ್ ಅಯ್ಯರ್ ಮಾಡಬೇಕು ಎಂದು ಜಂಬೋ ಅನಿಲ್ ಕುಂಬ್ಳೆ ಹೇಳಿದ್ದಾರೆ.
ಯುವರಾಜ್ ಸಿಂಗ್ ತೆರೆಮರೆಗೆ ಸರಿದ ನಂತರ ನಾಲ್ಕನೇ ಕ್ರಮಾಂಕಕ್ಕೆ ಸರಿಯಾದ ಆಟಗಾರ ಹೊಂದಿಕೆಯಾಗಿಲ್ಲ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭಾರತ ಈ ಸಮಸ್ಯೆ ಎದುರಿಸುತ್ತಿದೆ.
ಇದುವರೆಗೆ ಭಾರತದ ಪರ ಒಟ್ಟು 9 ಏಕದಿನ ಪಂದ್ಯವಾಡಿರುವ ಅಯ್ಯರ್, 49ರ ಸರಾಸರಿಯಲ್ಲಿ 346 ರನ್ ಗಳಿಸಿದ್ದಾರೆ.
ಭಾರತ ವಿಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಡಿಸೆಂಬರ್ 15ರಂದು ಚೆನ್ನೈನಲ್ಲಿ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ