ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದ ವೇಗಿ ಆನ್ರಿಚ್ ನೋರ್ಜೆ
Team Udayavani, Dec 21, 2021, 4:50 PM IST
ಜೋಹಾನ್ಸ್ ಬರ್ಗ್: ಪ್ರವಾಸಿ ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನವೇ ದಕ್ಷಿಣ ಆಫ್ರಿಕಾಗೆ ಆಘಾತ ಎದುರಾಗಿದೆ. ಗಾಯದ ಕಾರಣದಿಂದ ಹರಿಣಗಳ ವೇಗದ ಬೌಲರ್ ಆನ್ರಿಚ್ ನೋರ್ಜೆ ಸರಣಿಯಿಂದ ಹೊರಬಿದ್ದಿದ್ದಾರೆ.
ಈ ಬಗ್ಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದೆ. ಗಾಯದಿಂದ ಆನ್ರಿಚ್ ನೋರ್ಜೆ ಇನ್ನೂ ಚೇತರಿಸಿಕೊಳ್ಳದ ಕಾರಣದಿಂದ ಅವರು ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ, ಅವರ ಬದಲಿಗೆ ಯಾವುದೇ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆದರಿಕೆಯೊಡ್ಡಿ ಅಪ್ರಾಪ್ರ ಬಾಲಕಿಯ ಅತ್ಯಾಚಾರ: ಪಾಕ್ ಕ್ರಿಕೆಟರ್ ವಿರುದ್ಧ ದೂರು ದಾಖಲು
ಡಿಸೆಂಬರ್ 26ರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಜ.19ರಿಂದ ಏಕದಿನ ಸರಣಿ ನಡೆಯಲಿದೆ. ಕೋವಿಡ್ ಕಾರಣದಿಂದ ಟೆಸ್ಟ್ ಪಂದ್ಯಗಳಲ್ಲಿ ಮೈದಾನಕ್ಕೆ ಪ್ರೇಕ್ಷಕರಿಗೆ ಬರಲು ಅನುಮತಿ ನಿರಾಕರಿಸಲಾಗಿದೆ.
ದಕ್ಷಿಣ ಆಫ್ರಿಕಾ ತಂಡ: ಡೀನ್ ಎಲ್ಗರ್ (ನಾಯಕ), ಟೆಂಬಾ ಬವುಮಾ (ಉಪನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕಗಿಸೊ ರಬಾಡ, ಸರೆಲ್ ಎರ್ವೀ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಐಡೆನ್ ಮಾರ್ಕ್ರಾಮ್, ವಿಯಾನ್ ಮಲ್ಡರ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ, ಮಾರ್ಕೊ ಜಾನ್ಸೆನ್, ಗ್ಲೆಂಟನ್ ಸ್ಟೌರ್ಮನ್, ಪ್ರೆನೆಲನ್ ಸುಬ್ರಾಯೆನ್, ಸಿಸಂಡಾ ಮಗಾಲಾ, ರಿಯಾನ್ ರಿಕೆಲ್ಟನ್, ಡುವಾನ್ನೆ ಒಲಿವಿಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ