ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ

ಕಡಿಮೆಪಕ್ಷ 2 ವರ್ಷ ತರಬೇತಿ ನೀಡಿರಬೇಕು

Team Udayavani, Jul 17, 2019, 5:41 AM IST

bcci

ಹೊಸದಿಲ್ಲಿ: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದ ಬಳಿಕ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಯು ತಂಡದ ಮುಖ್ಯ ಕೋಚ್‌ ಮತ್ತು ಬೆಂಬಲ ಸಿಬಂದಿಯನ್ನು ಬದಲಾಯಿಸಲು ಹೊರಟಿದೆ. ಕೆಲವೊಂದು ಷರತ್ತುಗಳೊಂದಿಗೆ ಮುಖ್ಯ ಕೋಚ್‌ ಮತ್ತು ಬೆಂಬಲ ಸಿಬಂದಿಗಳ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಬಲ ಸಿಬಂದಿಗಳ ಪಡೆಯಲ್ಲಿ
ಆಮೂಲಾಗ್ರ ಬದಲಾವಣೆ ತರಲು ಬಿಸಿಸಿಐ ಬಯಸಿದೆ. ಹಾಗಾಗಿ ಮುಖ್ಯ ಕೋಚ್‌, ಬ್ಯಾಟಿಂಗ್‌ ಕೋಚ್‌, ಬೌಲಿಂಗ್‌ ಕೋಚ್‌, ಫೀಲ್ಡಿಂಗ್‌ ಕೋಚ್‌, ಫಿಸಿಯೊಥೆರಪಿಸ್ಟ್‌ ಮತ್ತು ಆಡಳಿತ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಜುಲೈ 30ರ ಸಂಜೆ 5 ಗಂಟೆಯ ಮೊದಲು ಅರ್ಜಿ ಸಲ್ಲಿಸಬೇಕಾಗಿದೆ.

ರವಿಶಾಸ್ತ್ರಿ ಅವರನ್ನು 2017ರ ಜುಲೈಯಲ್ಲಿ ಮುಖ್ಯ ಕೋಚ್‌ ಆಗಿ ನೇಮಕ ಮಾಡುವ ಮೊದಲು ಬಿಸಿಸಿಐ 9 ಅಂಶಗಳ ಅರ್ಹತಾ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಹೆಚ್ಚಿನ ಗಮನ ಹರಿಸಿದಂತೆ ಕಾಣಲಿಲ್ಲ. ಈ ಬಾರಿ ಮುಖ್ಯ ಕೋಚ್‌ ಸಹಿತ ತರಬೇತಿ ನೀಡಲಿರುವ ಎಲ್ಲರಿಗೂ ಮೂರು ಅಂಶಗಳ ಅರ್ಹತಾ ಷರತ್ತು ವಿಧಿಸಲಾಗಿದೆ.

ಟೀಮ್‌ ಇಂಡಿಯಾದ ಹಾಲಿ ತರಬೇತಿ ಸಿಬಂದಿ ಆಯ್ಕೆ ಪ್ರಕ್ರಿಯೆಯಲ್ಲಿ ನೇರ ಪ್ರವೇಶ ಪಡೆಯಲಿದ್ದಾರೆ ಎಂದು ಬಿಸಿಸಿಐ ಪ್ರಕಟನೆಯಲ್ಲಿ ತಿಳಿಸಿದೆ.

45 ದಿನಗಳ ವಿಸ್ತರಣಾ ಅವಧಿ
ಹಾಲಿ ಬೆಂಬಲ ಸಿಬಂದಿಗಳಾದ ಶಾಸಿŒ, ಬೌಲಿಂಗ್‌ ಕೋಚ್‌ ಭರತ್‌ ಅರುಣ್‌, ಬ್ಯಾಟಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ಮತ್ತು ಫೀಲ್ಡಿಂಗ್‌ ಕೋಚ್‌ ಆರ್‌. ಶ್ರೀಧರ್‌ ಅವರಿಗೆ 45 ದಿನಗಳ ವಿಸ್ತರಣಾ ಅವಧಿ ನೀಡಲಾಗಿದೆ. ಅವರೆಲ್ಲರೂ ಆ. 3ರಿಂದ ಸೆ. 3ರವರೆಗೆ ನಡೆಯಲಿರುವ ವೆಸ್ಟ್‌ ಇಂಡೀಸ್‌ ಪ್ರವಾಸದವರೆಗೆ ಭಾರತೀಯ ತಂಡದ ಜತೆಗಿರಲಿದ್ದಾರೆ.

ಇವರೆಲ್ಲರೂ ಮತ್ತೆ ಅರ್ಜಿ ಸಲ್ಲಿಸಬಹುದು. ಆದರೆ ಟ್ರೈನರ್‌ ಮತ್ತು ಫಿಸಿಯೋ ಹುದ್ದೆಗೆ ಹೊಸಬರನ್ನು ಆಯ್ಕೆ ಮಾಡಬೇಕಾಗುತ್ತದೆ. ಭಾರತ ಸೆಮಿಫೈನಲ್‌ನಲ್ಲಿ ಸೋತ ಬಳಿಕ ಶಂಕರ್‌ ಬಾಬು ಮತ್ತು ಪ್ಯಾಟ್ರಿಕ್‌ ಫ‌ರ್ಹಾರ್ತ್‌ ಅವರು ಅನುಕ್ರಮವಾಗಿ ಟ್ರೈನರ್‌ ಮತ್ತು ಫಿಸಿಯೋ ಹುದ್ದೆಯನ್ನು ತ್ಯಜಿಸಿದ್ದರು.

ವೆಸ್ಟ್‌ಇಂಡೀಸ್‌ ಪ್ರವಾಸದ ಬಳಿಕ ಸೆ. 15ರಿಂದ ಭಾರತದ ತವರಿನ ಋತು ಆರಂಭವಾಗಲಿದೆ. ಮೊದಲ ಸರಣಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿದೆ. ಈ ವೇಳೆ ಎಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

2017ರಲ್ಲಿ ಶಾಸಿŒ ನೇಮಕ
ಅನಿಲ್‌ ಕುಂಬ್ಳೆ ವಿವಾದಾತ್ಮಕವಾಗಿ ಹುದ್ದೆ ತ್ಯಜಿಸಿದ ಬಳಿಕ ರವಿಶಾಸಿŒ ಅವರನ್ನು 2017ರಲ್ಲಿ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿತ್ತು. 57ರ ಹರೆಯದ ಅವರು ಆಗಸ್ಟ್‌ 2014ರಿಂದ ಜೂನ್‌ 2016ರ ವರೆಗೆ ಕ್ರಿಕೆಟ್‌ ನಿರ್ದೇಶಕರಾಗಿಯೂ

ಕರ್ತವ್ಯ ನಿರ್ವಹಿಸಿದ್ದರು. ಅವರು ಮುಖ್ಯ ಕೋಚ್‌ ಆಗಿದ್ದ ವೇಳೆ ಭಾರತೀಯ ತಂಡ ಐಸಿಸಿಯ ಪ್ರಮುಖ ಕೂಟಗಳಲ್ಲಿ ಪ್ರಶಸ್ತಿ ಗೆಲ್ಲಲಿಲ್ಲ. ಆದರೆ ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯದಲ್ಲಿ ಚೊಚ್ಚಲ ಬಾರಿ ಟೆಸ್ಟ್‌ ಸರಣಿ ಗೆದ್ದ ಸಾಧನೆ ಮಾಡಿತ್ತು.

ಮೂರು ಷರತ್ತುಗಳು
ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡಿಮೆಪಕ್ಷ ಎರಡು ವರ್ಷ ಟೆಸ್ಟ್‌ ಆಟವಾಡುವ ರಾಷ್ಟ್ರಕ್ಕೆ ತರಬೇತಿ ನೀಡಿರಬೇಕು ಅಥವಾ ಅಸೋಸಿಯೆಟ್‌ ಸದಸ್ಯ/ ಎ ತಂಡ/ ಐಪಿಎಲ್‌ ತಂಡಕ್ಕೆ ಮೂರು ವರ್ಷ ತರಬೇತಿ ನೀಡಿರಬೇಕು. ಅರ್ಜಿದಾರರು 30 ಟೆಸ್ಟ್‌ ಅಥವಾ 50 ಏಕದಿನ ಪಂದ್ಯಗಳನ್ನು ಆಡಿರಬೇಕು. ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಫೀಲ್ಡಿಂಗ್‌ ಕೋಚ್‌ಗಳಿಗೆ ಈ ಷರತ್ತು ಅನ್ವಯವಾಗಲಿದೆ. ಆದರೆ ಪಂದ್ಯ ಆಡಿದ ಸಂಖ್ಯೆಗಳಲ್ಲಿ ವ್ಯತ್ಯಾಸವಿರಲಿದೆ. ಈ ಮೂರು ಹುದ್ದೆಗಳಿಗೆ ಅರ್ಜಿ ಹಾಕುವವರು ಕಡಿಮೆಪಕ್ಷ 10 ಟೆಸ್ಟ್‌ ಅಥವಾ 25 ಏಕದಿನ ಆಡಿರಬೇಕು ಮತ್ತು 60 ವರ್ಷ ದಾಟಿರಬಾರದು.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.