ಐಪಿಎಲ್ ನಿಂದ ಹೊರಬಿದ್ದ ಅರ್ಜುನ್ ತೆಂಡೂಲ್ಕರ್: ಮುಂಬೈಗೆ ಬದಲಿ ಆಟಗಾರನ ಸೇರ್ಪಡೆ
Team Udayavani, Sep 30, 2021, 11:33 AM IST
ದುಬೈ: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಹಂತ ತಲುಪುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಲೀಗ್ ಹಂತ ಮುಕ್ತಾಯವಾಗುತ್ತಿದೆ. ಆದರೆ ಐಪಿಎಲ್ ನಲ್ಲಿ ಗಾಯಾಳುಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕೆಲ ದಿನಗಳ ಹಿಂದೆ ಕುಲದೀಪ್ ಯಾದವ್ ಗಾಯಗೊಂಡು ಭಾರತಕ್ಕೆ ವಾಪಾಸಾಗಿದ್ದರೆ, ಇದೀಗ ಅರ್ಜುನ್ ತೆಂಡೂಲ್ಕರ್ ಕೂಡಾ ಗಾಯಗೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡ ಬುಧವಾರ ಈ ಬಗ್ಗೆ ಘೋಷಣೆ ಮಾಡಿದೆ. ಅರ್ಜುನ್ ತೆಂಡೂಲ್ಕರ್ ಗಾಯಗೊಂಡಿರುವ ಕಾರಣ ಅವರು ಐಪಿಎಲ್ ನಿಂದ ಹೊರಬಿದ್ದಿದ್ದಾರೆ. ಅವರ ಬದಲು ದೆಹಲಿ ಮೂಲದ ವೇಗಿ ಸಿಮರ್ಜೀತ್ ಸಿಂಗ್ ಮುಂಬೈ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ಮತ್ತೆ ಒಡಕು: ಕೊಹ್ಲಿ ವಿರುದ್ಧ ದೂರು ನೀಡಿದ ಮತ್ತಿಬ್ಬರು ಆಟಗಾರರು
ಬಲಗೈ ವೇಗಿಯಾಗಿರುವ ಸಿಮರ್ಜೀತ್ ಸಿಂಗ್ ಅವರು ಕಡ್ಡಾಯ ಕ್ವಾರಂಟೈನ್ ಮುಗಿಸಿ ತಂಡವನ್ನು ಕೂಡಿಕೊಂಡಿದ್ದಾರೆ. ಅವರು ತಂಡದೊಂದಿಗೆ ಅಭ್ಯಾಸ ನಡೆಸುತ್ತಿದ್ದಾರೆ ಎಂದು ತಂಡದ ಪ್ರಕಟಣೆ ತಿಳಿಸಿದೆ.
? Squad Update ?
Right-arm medium pacer Simarjeet Singh will be replacing Arjun Tendulkar for the remainder of #IPL2021
? Read all the details ?#OneFamily #MumbaiIndians https://t.co/AcfBJsYf2w
— Mumbai Indians (@mipaltan) September 29, 2021
ಎಡಗೈ ವೇಗಿಯಾಗಿರುವ ಅರ್ಜುನ್ ತೆಂಡೂಲ್ಕರ್ ರನ್ನು ಮುಂಬೈ ಇಂಡಿಯನ್ಸ್ ತಂಡ 20 ಲಕ್ಷ ರೂ. ಗೆ ಖರೀದಿ ಮಾಡಿತ್ತು. ಆದರೆ ಅವರು ಒಂದೇ ಒಂದು ಪಂದ್ಯವಾಡುವ ಅವಕಾಶ ಇದುವರೆಗೆ ಪಡೆದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ