ಅರ್ಜುನ ಪ್ರಶಸ್ತಿ ಕ್ರಿಕೆಟ್, ಫುಟ್ಬಾಲಿಗರ ಹೆಸರು ಶಿಫಾರಸು
Team Udayavani, Apr 28, 2019, 9:59 AM IST
ಹೊಸದಿಲ್ಲಿ: ಪ್ರತಿಷ್ಠಿತ “ಅರ್ಜುನ ಪ್ರಶಸ್ತಿ’ಗೆ 4 ಮಂದಿ ಕ್ರಿಕೆಟ್ ಆಟಗಾರರ ಹೆಸರನ್ನು ಬಿಸಿಸಿಐ ಶಿಫಾರಸು ಮಾಡಿದೆ.
ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಜತೆಗೆ ವನಿತಾ ತಂಡದ ಪೂನಮ್ ಯಾದವ್ ಅವರ ಹೆಸರನ್ನು ಬಿಸಿಸಿಐ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.
2018ರಲ್ಲಿ ಭಾರತದ ವನಿತಾ ಟಿ20 ತಂಡದ ಉಪನಾಯಕಿ ಸ್ಮತಿ ಮಂಧನಾ ಈ ಪ್ರಶಸ್ತಿಗೆ ಪಾತ್ರರಾದ ಏಕೈಕ ಕ್ರಿಕೆಟ್ ಆಟಗಾರ್ತಿ.
1961ರಿಂದ ಇಲ್ಲಿಯ ವರೆಗೆ ಭಾರತ ಸರಕಾರದಿಂದ 53 ಕ್ರಿಕೆಟಿಗರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇಬ್ಬರು ಫುಟ್ಬಾಲಿಗರು
ಗೋಲ್ಕೀಪರ್ ಗುರ್ಪ್ರೀತ್ ಸಿಂಗ್ ಸಂಧು ಮತ್ತು ಸ್ಟ್ರೈಕರ್ ಜೇಜೆ ಲಾಲ್ಪೆಖುÉವ ಅವರ ಹೆಸರನ್ನು ಅಖೀಲ ಭಾರತ ಫುಟ್ಬಾಲ್ ಫೆಡರೇಶನ್ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.
ಎಐಎಫ್ಎಫ್ ಇವರಿಬ್ಬರ ಹೆಸರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡುತ್ತಿರುವುದು ಇದು ಎರಡನೇ ಸಲ. 2017ರಲ್ಲಿ ಗುರ್ಪ್ರೀತ್ ಮತ್ತು ಜೆಜೆ ಹೆಸರನ್ನು ವನಿತಾ ತಂಡದ ನಾಯಕಿ ಬೆಂಬೆಮ್ ದೇವಿ ಅವರೊಂದಿಗೆ ಶಿಫಾರಸು ಮಾಡಲಾಗಿತ್ತು. ಅಂದು ಬೆಂಬೆಮ್ ದೇವಿ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದರು.
ಸುನೀಲ್ ಚೆಟ್ರಿ ಅನಂತರ ಇವರಿಬ್ಬರು ರಾಷ್ಟ್ರೀಯ ತಂಡದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಆಟಗಾರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ