ಆ್ಯಶಸ್‌: ಇಂಗ್ಲೆಂಡ್‌ ದಿಟ್ಟ ಉತ್ತರ


Team Udayavani, Aug 3, 2019, 5:48 AM IST

AP8_2_2019_000197A

ಎಜ್‌ಬಾಸ್ಟನ್: ಆ್ಯಶಸ್‌ ಸರಣಿಯ ಆರಂಭಿಕ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ದಿಟ್ಟ ಉತ್ತರ ನೀಡಿದೆ. ಆಸ್ಟ್ರೇಲಿಯ ತಂಡವನ್ನು 284 ರನ್ನಿಗೆ ನಿಯಂತ್ರಿಸಲು ಯಶಸ್ವಿಯಾದ ಇಂಗ್ಲೆಂಡ್‌ ಆಬಳಿಕ ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವಹಣೆ ದಾಖಲಿಸಿದೆ. ಎರಡನೇ ದಿನದ ಟೀ ವಿರಾಮದ ವೇಳೆ ತಂಡವು ಎರಡು ವಿಕೆಟ್‌ ಕಳೆದುಕೊಂಡಿದ್ದು 170 ರನ್‌ ಗಳಿಸಿದೆ. ಮೊದಲ ಇನ್ನಿಂಗ್ಸ್‌ ನಲ್ಲಿ ಮುನ್ನಡೆ ಸಾಧಿಸಲು ಆತಿಥೇಯ ತಂಡ 114 ರನ್‌ ಗಳಿಸಬೇಕಾಗಿದೆ.

ಜಾಸನ್‌ ರಾಯ್‌ ಅವರನ್ನು ಬೇಗನೇ ಕಳೆದುಕೊಂಡ ಬಳಿಕ ನಾಯಕ ಜೋ ರೂಟ್‌ ಮತ್ತು ರೋರಿ ಬರ್ನ್ಸ್ ತಂಡವನ್ನು ಆಧರಿಸಿದರು. ದ್ವಿತೀಯ ವಿಕೆಟಿಗೆ 132 ರನ್ನುಗಳ ಜತೆಯಾಟ ನಡೆಸಿ ತಂಡವನ್ನು ಅಪಾಯದಿಂದ ಪಾರು ಮಾಡಿ ದರು. ಈ ಜೋಡಿಯನ್ನು ಪೀಟರ್‌ ಸಿಡ್ಲ್ ಮುರಿದರು. 57 ರನ್‌ ಗಳಿಸಿದ ರೂಟ್‌ ಅವರು ಸಿಡ್ಲ್ಗೆ ಬಲಿಯಾದರು. ಬರ್ನ್ಸ್ 82 ರನ್ನುಗಳಿಂದ ಆಡುತ್ತಿದ್ದಾರೆ.

ಸ್ಮಿತ್‌ ಏಕಾಂಗಿ ಹೋರಾಟ
ಸ್ಟುವರ್ಟ್‌ ಬ್ರಾಡ್‌ ಸಹಿತ ಇಂಗ್ಲೆಂಡಿನ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯ ಆಗಾಗ್ಗೆ ವಿಕೆಟ್‌ ಕಳೆದುಕೊಳ್ಳುತ್ತ ಹೋಯಿತು. 122 ರನ್‌ ತಲುಪಿದಾಗ ತಂಡ 8 ವಿಕೆಟ್‌ ಕಳೆದುಕೊಂಡು ಸಂಕಷ್ಟ ಅನುಭವಿಸಿತ್ತು. ಈ ಹಂತದಲ್ಲಿ ಸ್ಟೀವನ್‌ ಸ್ಮಿತ್‌ ಅವರಿಗೆ ಹೆಗಲು ಕೊಟ್ಟವರು ಪೀಟರ್‌ ಸಿಡ್ಲ್. 9ನೇ ವಿಕೆಟಿಗೆ ಅವರಿಬ್ಬರೂ 88 ರನ್ನುಗಳ ಜತೆಯಾಟ ನಡೆಸಿದ್ದರಿಂದ ತಂಡ ಸಾಧಾರಣ ಮೊತ್ತ ಪೇರಿಸುವಂತಾಯಿತು. ಸ್ಮಿತ್‌ ಅಂತಿಮ ವಿಕೆಟಿಗೆ ನಥನ್‌ ಲಿಯೋನ್‌ ಜೆಎ 74 ರನ್‌ ಪೇರಿಸಿದರು. ಕೊನೆಯವರಾಗಿ ಔಟಾಗುವ ಮೊದಲು ಸ್ಮಿತ್‌ 144 ರನ್‌ ಹೊಡೆದಿದ್ದರು. ಅವರು 16 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದ್ದರು.

ಸಂಕ್ಷಿಪ್ತ ಸ್ಕೋರು: ಆಸ್ಟ್ರೇಲಿಯ 284 (ಸ್ಟೀವನ್‌ ಸ್ಮಿತ್‌ 144, ಸಿಡ್ಲ್ 44, ಬ್ರಾಡ್‌ 86ಕ್ಕೆ 5, ವೋಕ್ಸ್‌ 58ಕ್ಕೆ 3); ಇಂಗ್ಲೆಂಡ್‌ 2 ವಿಕೆಟಿಗೆ 170 (ಎರಡನೇ ದಿನದ ಟಿ ವಿರಾಮದ ವೇಳೆಗೆ).

ಕೊಹ್ಲಿ ದಾಖಲೆ ಮುರಿದ ಸ್ಮಿತ್‌
ಇಂಗ್ಲೆಂಡ್‌ ವಿರುದ್ಧದ ಆ್ಯಶಸ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಸ್ಟೀವನ್‌ ಸ್ಮಿತ್‌ ಅವರು ವಿರಾಟ್‌ ಕೊಹ್ಲಿ ಅವರ ಅತೀ ವೇಗದ 24ನೇ ಶತಕ ದಾಖಲೆಯನ್ನು ಮುರಿದಿದ್ದಾರೆ.

ಸ್ಮಿತ್‌ ಅವರು ಇದೀಗ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತೀ ವೇಗದ 24ನೇ ಶತಕ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯದವರೇ ಆದ ಸರ್‌ ಡಾನ್‌ ಬ್ರಾಡ್ಮನ್‌ ಕೇವಲ 66 ಇನ್ನಿಂಗ್ಸ್‌ ಗಳಲ್ಲಿ ಈ ಸಾಧನೆ ಮಾಡಿದ್ದರು.

ವಿರಾಟ್‌ ಕೊಹ್ಲಿ 123 ಇನ್ನಿಂಗ್ಸ್‌ಗಳಲ್ಲಿ 24ನೇ ಶತಕ ಸಿಡಿಸಿ ದಾಖಲೆ ಮಾಡಿದ್ದರು. ಈ ದಾಖಲೆಯನ್ನು ಇದೀಗ ಸ್ಮಿತ್‌ ಅಳಿಸಿ ಹಾಕಿದ್ದಾರೆ. ಸ್ಮಿತ್‌ ಕೇವಲ 118 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಪೂರ್ತಿಗೊಳಿಸಿದರು. ಸಚಿನ್‌ ತಂಡುಲ್ಕರ್‌ ಈ ಸಾಧನೆ ಮಾಡಲು 125 ಇನ್ನಿಂಗ್ಸ್‌ ತೆಗೆದುಕೊಂಡಿದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.