ನೆಹ್ರಾ ಮೇಲೆ ನಂಬಿಕೆ: ಟಿ-20 ಸರಣಿ: ಟೀಮ್‌ ಇಂಡಿಯಾ ಪ್ರಕಟ


Team Udayavani, Oct 3, 2017, 6:20 AM IST

ashish-nehra-02.jpg

ಹೊಸದಿಲ್ಲಿ: ಆಸ್ಟ್ರೇಲಿಯ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟಿ-20 ಸರಣಿಗಾಗಿ ಹಿರಿಯ ಎಡಗೈ ಪೇಸ್‌ ಬೌಲರ್‌ ಆಶಿಷ್‌ ನೆಹ್ರಾ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಏಕದಿನ ಸರಣಿಯಿಂದ ದೂರ ಉಳಿದಿದ್ದ ಸ್ಪಿನ್‌ದ್ವಯರಾದ ಆರ್‌. ಅಶ್ವಿ‌ನ್‌ ಮತ್ತು ರವೀಂದ್ರ ಜಡೇಜ ಅವರನ್ನು ಟಿ-ಟ್ವೆಂಟಿಗೂ ಕಡೆಗಣಿಸಲಾಗಿದೆ. 

ಆಸೀಸ್‌ ವಿರುದ್ಧದ ಏಕದಿನ ಸರಣಿಯಲ್ಲಿ ಸತತ 4 ಅರ್ಧ ಶತಕ ಬಾರಿಸಿದ್ದ ಅಜಿಂಕ್ಯ ರಹಾನೆ, ಟೆಸ್ಟ್‌ ಸ್ಪೆಷಲಿಸ್ಟ್‌ ಬೌಲರ್ ಎಂದೇ ಪರಿಗಣಿಸಲ್ಪಟ್ಟಿರುವ ಉಮೇಶ್‌ ಯಾದವ್‌, ಮೊಹಮ್ಮದ್‌ ಶಮಿ ಅವರನ್ನೂ ಕೈಬಿಡಲಾಗಿದೆ.

ಕೌಟುಂಬಿಕ ಕಾರಣಗಳಿಂದ ಏಕದಿನ ಸರಣಿಯಿಂದ ಬೇರ್ಪಟ್ಟಿದ್ದ ಎಡಗೈ ಆರಂಭಕಾರ ಶಿಖರ್‌ ಧವನ್‌ ಮರಳಿ ತಂಡವನ್ನು ಕೂಡಿಕೊಂಡಿದ್ದಾರೆ. ಯುವ ಕೀಪರ್‌ ರಿಷಬ್‌ ಪಂತ್‌ ಅವರನ್ನು ಮೀರಿಸಿ ಅನುಭವಿ ದಿನೇಶ್‌ ಕಾರ್ತಿಕ್‌ ಅವಕಾಶ ಸಂಪಾದಿಸಿದ್ದೊಂದು ಅಚ್ಚರಿ. ಧೋನಿ ಪ್ರಧಾನ ಕೀಪರ್‌ ಆಗಿರುವುದರಿಂದ ಕಾರ್ತಿಕ್‌ ಅವರನ್ನು ಕೇವಲ ಬ್ಯಾಟ್ಸ್‌ಮನ್‌ ಆಗಿ ಪರಿಗಣಿಸುವ ಸಾಧ್ಯತೆ ಹೆಚ್ಚು. ಈ ಸರಣಿಯ ವೇಳೆ ರಿಷಬ್‌ ಪಂತ್‌ ನ್ಯೂಜಿಲ್ಯಾಂಡ್‌ “ಎ’ ಎದುರಿನ 5 ಪಂದ್ಯಗಳ ಲಿಸ್ಟ್‌ ಎ ಸರಣಿಯಲ್ಲಿ ಆಡುವುದರಿಂದ ಟೀಮ್‌ ಇಂಡಿಯಾಕ್ಕೆ ಆಯ್ಕೆಯಾಗಿಲ್ಲ ಎಂದು ತೀರ್ಮಾನಿಸಬಹುದಾಗಿದೆ.

ನೆಹ್ರಾ ಆಯ್ಕೆ ಸಮರ್ಥನೆ
38ರ ಹರೆಯದ ಆಶಿಷ್‌ ನೆಹ್ರಾ ಅವರನ್ನು ತಂಡಕ್ಕೆ ಸೇರಿಸಿಕೊಂಡದ್ದು ಅನೇಕರಿಗೆ ಆಶ್ಚರ್ಯವಾಗಿ ಕಂಡಿದೆ. ಆದರೆ ಬಿಸಿಸಿಐ ಅಧಿಕಾರಿಯೊಬ್ಬರು ನೆಹ್ರಾ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನೆಹ್ರಾ ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಟಿ-20 ಸರಣಿಯ ಎಲ್ಲ ಪಂದ್ಯಗಳಲ್ಲಿ ಆಡಿದ್ದರು. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗೂ ನೆಹ್ರಾ ಆಯ್ಕೆಯಾಗುವ ಸಾಧ್ಯತೆ ಇತ್ತು. ಆದರೆ ಐಪಿಎಲ್‌ ವೇಳೆ ಗಾಯಾಳಾದ್ದರಿಂದ ಅವರಿಗೆ ಈ ಅವಕಾಶ ತಪ್ಪಿತು. ಭಾರತ ತನ್ನ ಕಳೆದ ಟಿ-20 ಸರಣಿಯಲ್ಲಿ ವೆಸ್ಟ್‌ ಇಂಡೀಸ್‌ ಮತ್ತು ಶ್ರೀಲಂಕಾ ವಿರುದ್ಧ ಒಂದೊಂದೇ ಪಂದ್ಯವನ್ನಾಡಿತ್ತು. ಹೀಗಾಗಿ ನೆಹ್ರಾ ಅವರನ್ನು ಆರಿಸಿರಲಿಲ್ಲ’ ಎಂದು ಅವರು ಹೇಳಿದ್ದಾರೆ. 

“ನೆಹ್ರಾ ಅವರ ದಾಖಲೆಗಳನ್ನೇ ಗಮನಿಸಿ, ಫಿಟ್‌ನೆಸ್‌ ಹಾಗೂ ಫಾರ್ಮ್ ಕೊರತೆಯಿಂದ ಅವರನ್ನೆಂದೂ ತಂಡ ದಿಂದ ಕೈಬಿಟ್ಟ ಉದಾಹರಣೆ ಇಲ್ಲ’ ಎಂದೂ ಬಿಸಿಸಿಐ ಅಧಿಕಾರಿ ಹೇಳಿದರು. ನೆಹ್ರಾ ಈವರೆಗೆ 25 ಟಿ-20 ಅಂತಾ ರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 34 ವಿಕೆಟ್‌ ಉರುಳಿಸಿದ್ದಾರೆ.

ಅನುಭವಿ ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಮತ್ತು ರವೀಂದ್ರ ಜಡೇಜ ಅವರನ್ನು ಮತ್ತೆ ಕಡೆಗಣಿಸಿದ್ದು ಕೂಡ ಚರ್ಚೆ ಯನ್ನು ಹುಟ್ಟುಹಾಕಿದೆ. ತಂಡದ ಉಳಿದ ಸ್ಪಿನ್ನರ್‌ಗಳಾದ ಯಜುವೇಂದ್ರ ಚಾಹಲ್‌, ಕುಲದೀಪ್‌ ಯಾದವ್‌ ಮತ್ತು ಅಕ್ಷರ್‌ ಪಟೇಲ್‌ ಗಮನಾರ್ಹ ನಿರ್ವಹಣೆ ತೋರುತ್ತಿರು ವುದು ಇದಕ್ಕೆ ಮುಖ್ಯ ಕಾರಣ ಆಗಿರಬಹುದು. ಇದನ್ನು ಗಮನಿಸಿದಾಗ ಅಶ್ವಿ‌ನ್‌-ಜಡೇಜ ಜೋಡಿ ಟೆಸ್ಟ್‌ ಪಂದ್ಯಗಳಿ ಗಷ್ಟೇ ಮೀಸಲಾಗುವ ಸಾಧ್ಯತೆಯೊಂದು ಗೋಚರಿಸುತ್ತಿದೆ. ಅಶ್ವಿ‌ನ್‌ ಇತ್ತೀಚೆಗಷ್ಟೇ ಇಂಗ್ಲಿಷ್‌ ಕೌಂಟಿಯಲ್ಲಿ ವೂರ್ಸೆಸ್ಟರ್‌ಶೈರ್‌ ಪರ 4 ಪಂದ್ಯಗಳನ್ನಾಡಿದ್ದು, 28 ವಿಕೆಟ್‌ ಹಾಗೂ ಇನ್ನೂರಕ್ಕೂ ಹೆಚ್ಚು ರನ್‌ ಸಂಪಾದಿಸಿ ಮಿಂಚಿದ್ದರು. ಆದರೆ ಆಯ್ಕೆ ಸಮಿತಿ ಇದನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ.

ಟಿ-20 ಪಂದ್ಯಗಳು ರಾಂಚಿ (ಅ. 7), ಗುವಾಹಟಿ (ಅ. 10) ಮತ್ತು ಹೈದರಾಬಾದ್‌ನಲ್ಲಿ (ಅ. 13) ನಡೆಯಲಿವೆ.

ಭಾರತ ತಂಡ: 
ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮ, ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ಕೇದಾರ್‌ ಜಾಧವ್‌, ಹಾರ್ದಿಕ್‌ ಪಾಂಡ್ಯ, ಮನೀಷ್‌ ಪಾಂಡೆ, ಮಹೇಂದ್ರ ಸಿಂಗ್‌ ಧೋನಿ, ಕುಲದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ಭುವನೇಶ್ವರ್‌ ಕುಮಾರ್‌, ಜಸ್‌ಪ್ರೀತ್‌ ಬುಮ್ರಾ, ಆಶಿಷ್‌ ನೆಹ್ರಾ, ದಿನೇಶ್‌ ಕಾರ್ತಿಕ್‌, ಅಕ್ಷರ್‌ ಪಟೇಲ್‌.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.