ನೆಹ್ರ ವೀಕ್ಷಕ ವಿವರಣೆಕಾರ


Team Udayavani, Nov 16, 2017, 6:15 AM IST

Ashish-Nehra-800.jpg

ಕೋಲ್ಕತಾ: ನ್ಯೂಜಿಲ್ಯಾಂಡ್‌ ವಿರುದ್ಧ ದಿಲ್ಲಿಯಲ್ಲಿ ನ. 1ರಂದು ನಡೆದ ಮೊದಲ ಟ್ವೆಂಟಿ20 ಪಂದ್ಯದ ಬಳಿಕ ಎಲ್ಲ ಮಾದರಿಯ ಕ್ರಿಕೆಟಿನಿಂದ ನಿವೃತ್ತಿಯಾದ ವೇಗಿ ಆಶಿಷ್‌ ನೆಹ್ರ ಗುರುವಾರದಿಂದ ಹೊಸ ಇನ್ನಿಂಗ್ಸ್‌ ಆರಂಭಸಲಿದ್ದಾರೆ. 

ಇಲ್ಲಿನ ಈಡನ್‌ ಗಾರ್ಡನ್ಸ್‌ನಲ್ಲಿ ಗುರುವಾರದಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ವೇಳೆ ಅವರು ವೀಕ್ಷಕವಿವರಣೆಕಾರರಾಗಿ ಪಾದಾರ್ಪಣೆಗೈಯಲಿದ್ದಾರೆ.

ಹೊಸ ಇನ್ನಿಂಗ್ಸ್‌ ಆರಂಭಿಸಲಿರುವ ನೆಹ್ರ ಅವರನ್ನು ವೀರೇಂದ್ರ ಸೆಹವಾಗ್‌ ಟ್ವೀಟ್‌ ಮೂಲಕ ಸ್ವಾಗತಿಸಿದ್ದಾರೆ. 

ವೀಕ್ಷಕವಿವರಣೆಕಾರರಾಗಿ ಕಾರ್ಯ ನಿರ್ವಹಿಸಲಿರುವ ನೆಹ್ರ ಅವರನ್ನು ನಿಮ್ಮದೇ ರೀತಿಯಲ್ಲಿ ಸಂಭ್ರಮದಿಂದ ಸ್ವಾಗತಿಸಿ ಎಂದು ಸೆಹವಾಗ್‌ ಟ್ವೀಟ್‌ ಮಾಡಿದ್ದಾರೆ.

ಕುಟುಂಬದ ಜತೆ ನಾನು ಸಮಯ ಕಳೆಯಬೇಕಾಗಿದೆ. ಆದರೆ ಕ್ರಿಕೆಟ್‌ಗೆ ಸಂಬಂಧಿಸಿ ಏನಾದರೂ ಕೆಲಸ ಮಾಡುವ ಮನಸ್ಸಿದೆ. ಯಾಕೆಂದರೆ ಕಳೆದ 25 ವರ್ಷಗಳಿಂದ ಆನು ಕ್ರಿಕೆಟ್‌ ಆಟವನ್ನು ಆನಂದಿಸಿದ್ದೇನೆ. ಆದರೆ ಯಾವ ರೀತಿಯ ಕೆಲಸವೆಂದು ತೀರ್ಮಾನಿಸಿಲ್ಲ. ಇದು ಕೋಚಿಂಗ್‌ ಅಥವಾ ವೀಕ್ಷಕವಿವರಣೆಕಾರರಾಗಿ ಇರಬಹುದು. ಕಲವೇ ದಿನಗಳಲ್ಲಿ ಇದು ನಿಮಗೆ ತಿಳಿಯಲಿದೆ ಎಂದು ನೆಹ್ರ ನಿವೃತ್ತಿಯಾದ ತತ್‌ಕ್ಷಣ ಪ್ರತಿಕ್ರಿಯೆ ನೀಡಿದ್ದರು.

2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯ ಅವರ ಸ್ಮರಣೀಯ ಪಂದ್ಯಗಳಲ್ಲಿ ಒಂದಾಗಿದೆ. ಈ ಪಂದ್ಯದಲ್ಲಿ ಅವರು ತನ್ನ ಶ್ರೇಷ್ಠ ನಿರ್ವಹಣೆ 23 ರನ್ನಿಗೆ 6 ವಿಕೆಟ್‌ ಕಿತ್ತು ಭಾರತದ ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡಿದ್ದರು.

199ರಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೋದಲ್ಲಿ ನಡೆದ ಟೆಸ್ಟ್‌ನಲ್ಲಿ ಆಡುವ ಮೂಲಕ ನೆಹ್ರ ಟೆಸ್ಟ್‌ಗೆ ಪಾದಾರ್ಪಣೆಗೈದಿದ್ದರು. ಭಾರತ ಪರ 17 ಟೆಸ್ಟ್‌ ಆಡಿರುವ ಅವರು 44 ವಿಕೆಟ್‌ ಉರುಳಿಸಿದ್ದಾರೆ. 2001ರಲ್ಲಿ ಏಕದಿನ ಕ್ರಿಕೆಟಿಗೆ ಪಾದಾರ್ಪಣೆಗೆದಿದ್ದ ಅವರು 120 ಏಕದಿನ ಪಂದ್ಯವನ್ನಾಡಿ 157 ವಿಕೆಟ್‌ ಹಾರಿಸಿದ್ದಾರೆ. ನೆಹ್ರ 27 ಟ್ವೆಂಟಿ20 ಪಂದ್ಯ ಆಡಿದ್ದು34 ವಿಕೆಟ್‌ ಪಡೆದಿದ್ದಾರೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.