ಬಾಂಗ್ಲಾ ಬೇಟೆಯಾಡಿದ ಬರ್ತ್‌ಡೇ ಬಾಯ್‌ ರಶೀದ್‌


Team Udayavani, Sep 22, 2018, 6:00 AM IST

c-25.jpg

ಅಬುಧಾಬಿ: ರಶೀದ್‌ ಖಾನ್‌ ತಮ್ಮ 20ನೇ ಹುಟ್ಟುಹಬ್ಬವನ್ನು ಸ್ಮರಣೀಯಗೊಳಿಸಿದ್ದಾರೆ. ಏಶ್ಯ ಕಪ್‌ ಕೂಟದ ಬಾಂಗ್ಲಾದೇಶ ವಿರುದ್ಧದ ಅಂತಿಮ ಗ್ರೂಪ್‌ ಪಂದ್ಯದಲ್ಲಿ ಅಮೋಘ ಆಲ್‌ರೌಂಡ್‌ ಪ್ರದರ್ಶನವಿತ್ತ ಅವರು ಆಫ್ಘಾನಿಸ್ಥಾನದ 136 ರನ್ನುಗಳ ಭರ್ಜರಿ ಗೆಲುವಿನ ರೂವಾರಿಯಾಗಿ ಮೂಡಿಬಂದರು.

ಗುರುವಾರ ರಾತ್ರಿ ಅಬು ಧಾಬಿಯಲ್ಲಿ ನಡೆದ “ಬಿ’ ವಿಭಾಗದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ಥಾನ 7 ವಿಕೆಟಿಗೆ 255 ರನ್‌ ಗಳಿಸಿದರೆ, ಬಾಂಗ್ಲಾದೇಶ 42.1 ಓವರ್‌ಗಳಲ್ಲಿ 119ಕ್ಕೆ ಕುಸಿಯಿತು. ರಶೀದ್‌ ಖಾನ್‌ 32 ಎಸೆತಗಳಿಂದ 57 ರನ್‌ (8 ಬೌಂಡರಿ, 1 ಸಿಕ್ಸರ್‌) ಬಾರಿಸಿದ ಬಳಿಕ ಕೇವಲ 13 ರನ್ನಿತ್ತು 2 ವಿಕೆಟ್‌ ಉಡಾಯಿಸಿದರು. 9 ಓವರ್‌ಗಳ “ಟೈಟ್‌ ಸ್ಪೆಲ್‌’ನಲ್ಲಿ 3 ಓವರ್‌ಗಳನ್ನು ಮೇಡನ್‌ ಮಾಡಿದ್ದರು. ಬಾಂಗ್ಲಾ ಆಟಗಾರ ಅಬು ಹೈದರ್‌ ಅವರನ್ನು ರನೌಟ್‌ ಮಾಡುವ ಮೂಲಕವೂ ಗಮನ ಸೆಳೆದರು. ಅವರ ಈ ಆಲ್‌ರೌಂಡ್‌ ಪ್ರದರ್ಶನಕ್ಕೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದು ಬಂತು.

ಈ ಜಯದೊಂದಿಗೆ ಅಫ್ಘಾನಿಸ್ಥಾನ “ಬಿ’ ವಿಭಾಗದ ಅಗ್ರಸ್ಥಾನಿ ಎನಿಸಿಕೊಂಡಿತು. ಇದಕ್ಕೂ ಮುನ್ನ ಅದು ಶ್ರೀಲಂಕಾವನ್ನು 91 ರನ್ನುಗಳಿಂದ ಮಣಿಸಿತ್ತು.

ಕುಸಿಯುತ್ತ ಹೋದ ಬಾಂಗ್ಲಾ
ಚೇಸಿಂಗ್‌ ವೇಳೆ ಭಾರೀ ಕುಸಿತ ಅನುಭವಿಸಿದ ಬಾಂಗ್ಲಾದೇಶ 17 ರನ್‌ ಆಗುವಷ್ಟರಲ್ಲಿ ಆರಂಭಿಕರಿಬ್ಬ ರನ್ನು ಕಳೆದುಕೊಂಡಿತು. ಈ ಆಘಾತ ದಿಂದ ಹೊರಬರಲು ಬಾಂಗ್ಲಾಕ್ಕೆ ಸಾಧ್ಯ ವಾಗಲೇ ಇಲ್ಲ. 

ಶಕಿಬ್‌ 4 ವಿಕೆಟ್‌, 32 ರನ್‌
4 ವಿಕೆಟ್‌ ಕಿತ್ತು ಮಿಂಚಿದ ಶಕಿಬ್‌ ಅಲ್‌ ಹಸನ್‌ ಬ್ಯಾಟಿಂಗಿನಲ್ಲೂ ಸಣ್ಣದೊಂದು ಹೋರಾಟ ಪ್ರದರ್ಶಿಸಿ ಸರ್ವಾಧಿಕ 32 ರನ್‌ ಮಾಡಿದರು. ಮಹಮದುಲ್ಲ 27, ಮೊಸದೆಕ್‌ ಹೊಸೇನ್‌ 26 ರನ್‌ ಗಳಿಸಿದರು. ಈ ಮೂವರನ್ನು ಹೊರತುಪಡಿಸಿದರೆ ಉಳಿದವರ್ಯಾರೂ ಎರಡಂಕೆಯ ಸ್ಕೋರ್‌ ದಾಖಲಿಸಲಿಲ್ಲ.

ಸಂಕ್ಷಿಪ್ತ ಸ್ಕೋರ್‌ ಅಫ್ಘಾನಿಸ್ಥಾನ-7 ವಿಕೆಟಿಗೆ 255 (ಶಾಹಿದಿ 58, ರಶೀದ್‌ ಔಟಾಗದೆ  57, ನೈಬ್‌ 42, ಶಕಿಬ್‌ 42ಕ್ಕೆ 4, ಹೈದರ್‌ 50ಕ್ಕೆ 2). ಬಾಂಗ್ಲಾದೇಶ-42.1 ಓವರ್‌ಗಳಲ್ಲಿ 119 (ಶಕಿಬ್‌ 32, ಮಹಮದುಲ್ಲ 27, ಮೊಸದೆಕ್‌ ಔಟಾಗದೆ 26, ರಶೀದ್‌ 13ಕ್ಕೆ 2, ಮುಜೀಬ್‌ 22ಕ್ಕೆ 2, ನೈಬ್‌ 30ಕ್ಕೆ 2). 
ಪಂದ್ಯಶ್ರೇಷ್ಠ: ರಶೀದ್‌ ಖಾನ್‌

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.