ಲಂಕೆಯಲ್ಲಿ ನಡೆದೀತೇ ಏಷ್ಯಾ ಕಪ್‌ ಕ್ರಿಕೆಟ್‌?ಬಾಂಗ್ಲಾ ಮೀಸಲು ತಾಣ


Team Udayavani, Jul 13, 2022, 6:45 AM IST

ಲಂಕೆಯಲ್ಲಿ ನಡೆದೀತೇ ಏಷ್ಯಾ ಕಪ್‌ ಕ್ರಿಕೆಟ್‌?ಬಾಂಗ್ಲಾ ಮೀಸಲು ತಾಣ

ಕೊಲಂಬೊ: ಆಗಸ್ಟ್‌ ನಲ್ಲಿ ನಡೆಯುವ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಆತಿಥ್ಯಕ್ಕೆ ತಾನು ಸಿದ್ಧ ಎನ್ನುತ್ತಿದೆ ಶ್ರೀಲಂಕಾ. ಆದರೆ ಅಲ್ಲಿನ ಹದಗೆಟ್ಟ ಆರ್ಥಿಕ ಸ್ಥಿತಿ, ಇತ್ತೀಚಿನ ಸಾರ್ವಜನಿಕ ದಂಗೆಯನ್ನೆಲ್ಲ ಗಮನಿಸಿದಾಗ ಸಹಜವಾಗಿಯೇ ಈ ಕ್ರಿಕೆಟ್‌ ಕೂಟ ದ್ವೀಪರಾಷ್ಟ್ರದಲ್ಲಿ ನಡೆದೀತೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ “ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌’ (ಎಸಿಸಿ) ಬಾಂಗ್ಲಾದೇಶವನ್ನು ಮೀಸಲು ತಾಣವಾಗಿ ಇರಿಸಿರುವ ಬಗ್ಗೆ ವರದಿಯಾಗಿದೆ.

ಶ್ರೀಲಂಕಾ ಆತಿಥ್ಯದ ವಿಷಯದಲ್ಲಿ ಎಸಿಸಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧವಿಲ್ಲ; ಹೀಗಾಗಿ ಪರಿಸ್ಥಿತಿಯನ್ನು ಮತ್ತೆ ಅವಲೋಕಿಸಿ ಈ ತಿಂಗಳ ಅಂತ್ಯದಲ್ಲಿ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಆತಿಥ್ಯಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದೆ ಎನ್ನಲಾಗಿದೆ.

ಕ್ರಿಕೆಟ್‌ಗೆ ಧಕ್ಕೆ ಇಲ್ಲ…
ಆದರೆ ದೇಶವೇ ದಿವಾಳಿಯೆದ್ದು ಹೋದರೂ ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಪ್ರವಾಸಿ ಆಸ್ಟ್ರೇಲಿಯ ಎದುರಿನ ಕ್ರಿಕೆಟ್‌ ಸರಣಿಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ್ದನ್ನು ಮರೆಯುವಂತಿಲ್ಲ. ಇದು 3 ಟಿ20, 5 ಏಕದಿನ ಹಾಗೂ 2 ಟೆಸ್ಟ್‌ ಪಂದ್ಯಗಳನ್ನೊಳಗೊಂಡ ಪೂರ್ಣ ಪ್ರಮಾಣದ ಸರಣಿಯಾಗಿತ್ತು. ಆದರೆ ಅಂತಿಮ ಟೆಸ್ಟ್‌ ಪಂದ್ಯದ ವೇಳೆ ಪ್ರತಿಭಟನ ಕಾರರು ಗಾಲೆ ಸ್ಟೇಡಿಯಂಗೂ ಲಗ್ಗೆ ಇರಿಸಿದ್ದನ್ನು ಕಡೆಗಣಿಸುವಂತಿಲ್ಲ. ಈ ಘಟನೆಯನ್ನು ಎಸಿಸಿ ತುಸು ಗಂಭೀರವಾಗಿಯೇ ಪರಿಗಣಿಸಿದೆ.

ಇಲ್ಲಿ ಗಮನಿಸಬೇಕಾದ ಇನ್ನೂ ಒಂದು ಅಂಶವಿದೆ. ಇಂಥ ಕಠಿನ ಸ್ಥಿತಿಯಲ್ಲೂ ಇಲ್ಲಿಗೆ ಬಂದು ಕ್ರಿಕೆಟ್‌ ಸರಣಿ ಆಡಿದ ಆಸ್ಟ್ರೇಲಿಯಕ್ಕೆ ಲಂಕಾ ಜನತೆ ಕೃತಜ್ಞತೆ ಸಲ್ಲಿಸಿದ್ದಾರೆ. ಹೀಗಾಗಿ ಲಂಕೆಯಲ್ಲಿ ಯಾವುದೇ ಸ್ಥಿತಿ ಇದ್ದರೂ ಕ್ರಿಕೆಟ್‌ ಪಂದ್ಯಾವಳಿಗೇನೂ ಆತಂಕ ಇಲ್ಲ ಎಂಬ ಸೂಚನೆಯೊಂದು ರವಾನಿಸಲ್ಪಟ್ಟಿದೆ. ಆದರೆ ಇದನ್ನು ಸಂಘಟಿಸುವುದು ಎಸಿಸಿಯಾದ್ದರಿಂದ ಅದು ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ.

6 ತಂಡಗಳ ಪಂದ್ಯಾವಳಿ
ಇದು 6 ತಂಡಗಳ ನಡುವಿನ ಟಿ20 ಮಾದರಿ ಪಂದ್ಯಾವಳಿ. ಶ್ರೀಲಂಕಾ, ಭಾರತ, ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶದೊಂದಿಗೆ ಅರ್ಹತಾ ತಂಡವೊಂದು ಪಾಲ್ಗೊಳ್ಳಲಿದೆ. ಯುಎಇ, ಕುವೈಟ್‌, ಸಿಂಗಾಪುರ ಮತ್ತು ಹಾಂಕಾಂಗ್‌ ಅರ್ಹತಾ ಪಂದ್ಯಾವಳಿಯಲ್ಲಿ ಸ್ಪರ್ಧಿಸಲಿವೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.