Asia Cup; ಭಾರತಕ್ಕೆ ಇಂದು ಬಾಂಗ್ಲಾ ಸವಾಲು

ಫೈನಲ್‌ ಮೊದಲು ಟೀಮ್‌ ಇಂಡಿಯಾಕ್ಕೊಂದು ಅಭ್ಯಾಸ ಪಂದ್ಯ

Team Udayavani, Sep 15, 2023, 7:00 AM IST

1-sadsadsa

ಕೊಲಂಬೊ: ಸತತ ಎರಡು ಗೆಲುವಿನೊಂದಿಗೆ ಈಗಾಗಲೇ ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಫೈನಲ್‌ ಹಂತಕ್ಕೇರಿರುವ ಭಾರತ ತಂಡವು ಶುಕ್ರವಾರ ನಡೆಯುವ ಸೂಪರ್‌ ಫೋರ್‌ ಹಂತದ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಸತತ ಎರಡು ಪಂದ್ಯಗಳಲ್ಲಿ ಸೋತಿರುವ ಬಾಂಗ್ಲಾದೇಶ ಈ ಪಂದ್ಯವನ್ನು ಗೆದ್ದು ಸಮಾಧಾನಪಟ್ಟುಕೊಳ್ಳಲು ಬಯಸಿದೆ.

ರವಿವಾರದ ಪ್ರಶಸ್ತಿ ಸಮರಕ್ಕೆ ಸಿದ್ಧತೆ ನಡೆಸಿಕೊಳ್ಳಲು ಇದು ಭಾರತಕ್ಕೆ ಲಭಿಸಿದ ಅಭ್ಯಾಸ ಪಂದ್ಯವಾಗಿದೆ. ಈ ಪಂದ್ಯದಲ್ಲಿ ರೋಹಿತ್‌ ಪಡೆಯು ತನ್ನ ಮೊದಲ ಆಯ್ಕೆಯ ತಂಡಕ್ಕೆ ಸಾಧ್ಯವಾದಷ್ಟು ಅಭ್ಯಾಸ ನಡೆಸಲು ಅಥವಾ ಮುಂಬರುವ ವಿಶ್ವಕಪ್‌ ಮುಂಚಿತವಾಗಿ ತನ್ನ ಮೀಸಲು ಆಟಗಾರರಿಗೆ ಇನ್ನೊಂದು ಅವಕಾಶ ನೀಡಬೇಕೆ ಎಂಬುದರ ಬಗ್ಗೆ ಅಲೋಚಿಸುತ್ತಿದೆ. ಬೌಲರ್‌ಗಳಿಗೆ ಹೆಚ್ಚಿನ ಅಭ್ಯಾಸ ಕಲ್ಪಿಸಲು ತಂಡ ವ್ಯವಸ್ಥಾಪಕರು ಯೋಚಿಸುತ್ತಿದ್ದಾರೆ.

ಜಸ್‌ಪ್ರೀತ್‌ ಬುಮ್ರಾ ಏಷ್ಯಾ ಕಪ್‌ನಲ್ಲಿ ಕೇವಲ 12 ಓವರ್‌ ಎಸೆದಿದ್ದಾರೆ. ಪಾಕಿಸ್ಥಾನ ವಿರುದ್ಧ ಐದು ಮತ್ತು ಶ್ರೀಲಂಕಾ ವಿರುದ್ಧ ಏಳು ಓವರ್‌ ಎಸೆದಿದ್ದರು. ಆದರೆ ನೇಪಾಳ ವಿರುದ್ಧ ಅವರು ಆಡಿರಲಿಲ್ಲ. ಈ ಕಾರಣಕ್ಕಾಗಿ ಬುಮ್ರಾ ಅವರನ್ನು ಫೈನಲ್‌ ಮೊದಲು ಬಾಂಗ್ಲಾ ವಿರುದ್ಧ ಆಡಿಸಲು ಚಿಂತನೆ ಮಾಡಲಾಗುತ್ತಿದೆ.

ರಾಹುಲ್‌ಗೆ ಅವಕಾಶ
ಕೆಎಲ್‌ ರಾಹುಲ್‌ ಪರಿಪೂರ್ಣ ಫಿಟ್‌ನೆಸ್‌ಗೆ ಮರಳಿರುವುದು ತಂಡ ವ್ಯವಸ್ಥಾಪಕರಿಗೆ ಸಮಾಧಾನ ತಂಡಿದೆ. ಚುರುಕಿನ ಬ್ಯಾಟಿಂಗ್‌ ಮತ್ತು ವಿಕೆಟ್‌ ಹಿಂದುಗಡೆ ಉತ್ತಮ ಕೀಪಿಂಗ್‌ ನಡೆಸಿದ ರಾಹುಲ್‌ ತಂಡದ ಪ್ರಮುಖ ವಿಕೆಟ್‌ಕೀಪರ್‌ ತಥಾ ಬ್ಯಾಟ್ಸ್‌ಮನ್‌ ಎಂದೆನಿಸಿಕೊಂಡಿದ್ದಾರೆ. ಹೀಗಾಗಿ ಅವರು ಬಾಂಗ್ಲಾ ವಿರುದ್ಧ ತನ್ನ ಕರ್ತವ್ಯವನ್ನು ಮುಂದುವರಿಸುವುದು ಖಚಿತವಾಗಿದೆ. ಬೆನ್ನು ನೋವಿನಿಂದಾಗಿ ಪಾಕಿಸ್ಥಾನ ಮತ್ತು ಶ್ರೀಲಂಕಾ ವಿರುದ್ಧದ ಸೂಪರ್‌ ಫೋರ್‌ ಪಂದ್ಯದಿಂದ ಹೊರಗಿದ್ದ ಶ್ರೇಯಸ್‌ ಅಯ್ಯರ್‌ ಅವರ ಫಿಟ್‌ನೆಸ್‌ ಬಗ್ಗೆ ಗಮನ ಹರಿಸಬೇಕಾಗಿದೆ.

ಮುಶ್ಫಿಕರ್‌ ರಹೀಂ ಇಲ್ಲ
ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಗಿರುವ ಮುಶ್ಫಿಕರ್‌ ರಹೀಂ ಅವರು ಭಾರತ ವಿರುದ್ಧದ ಪಂದ್ಯದಲ್ಲಿ ಆಡುವುದಿಲ್ಲ. ಶ್ರೀಲಂಕಾ ವಿರುದ್ಧದ ಸೂಪರ್‌ ಫೋರ್‌ ಪಂದ್ಯದ ಬಳಿಕ ಅವರು ತವರಿಗೆ ಮರಳಿದ್ದಾರೆ. ರಹೀಂ ಅವರ ಅನುಪಸ್ಥಿತಿಯಲ್ಲಿ ಲಿಟನ್‌ ದಾಸ್‌ ವಿಕೆಟ್‌ ಹಿಂದುಗಡೆ ಕರ್ತವ್ಯ ನಿಭಾಯಿಸುವ ನಿರೀಕ್ಷೆಯಿದೆ. ಇದೇ ವೇಳೆ ನಾಯಕ ಶಕಿಬ್‌ ಅಲ್‌ ಹಸನ್‌ ತಂಡವನ್ನು ಸೇರಿಕೊಂಡಿದ್ದು ಭಾರತ ವಿರುದ್ಧ ಆಡಲಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.