ವನಿತಾ ಏಷ್ಯಾ ಕಪ್‌ ಕ್ರಿಕೆಟ್‌; ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಭಾರತ


Team Udayavani, Oct 5, 2022, 4:52 PM IST

ವನಿತಾ ಏಷ್ಯಾ ಕಪ್‌ ಕ್ರಿಕೆಟ್‌; ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಭಾರತ

ಬಾಂಗ್ಲಾದೇಶ: ವನಿತಾ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ಹ್ಯಾಟ್ರಿಕ್‌ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

ಮೂರನೇ ಮುಖಾಮುಖಿಯಲ್ಲಿ ಮಂಧನಾ ಬಳಗ ಯುಎಇಯನ್ನು 104 ರನ್ನುಗಳ ಭಾರೀ ಅಂತರದಿಂದ ಕೆಡವಿತು.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 5 ವಿಕೆಟಿಗೆ 178 ರನ್‌ ಪೇರಿಸಿತು. ಜವಾಬಿತ್ತ ಯುಎಇ ಟೆಸ್ಟ್‌ ಶೈಲಿಯಲ್ಲಿ ಆಡಿತು; 20 ಓವರ್‌ಗಳಲ್ಲಿ ಗಳಿಸಿದ್ದು 4 ವಿಕೆಟಿಗೆ 74 ರನ್‌ ಮಾತ್ರ.

ಭಾರತದ ಅಜೇಯ ಓಟ
ಇದರೊಂದಿಗೆ ಭಾರತ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ ಬಾಗಿಲಿನ ಸಮೀಪ ನಿಂತಿದೆ. ಮೊದಲೆರಡು ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಮಲೇಷ್ಯಾವನ್ನು ಮಣಿಸಿತ್ತು. ಭಾರತದ ಮುಂದಿನ ಎದುರಾಳಿ ಪಾಕಿಸ್ಥಾನ. ಈ ಪಂದ್ಯ ಶುಕ್ರವಾರ ನಡೆಯಲಿದೆ.

ಭಾರತ ಆರಂಭಿಕ ಜೋಡಿಯಲ್ಲಿ ಮತ್ತೆ ಬದಲಾವಣೆ ಮಾಡಿತು. ಎಸ್‌. ಮೇಘನಾ ಜತೆ ರಿಚಾ ಘೋಷ್‌ ಆಡಳಿಳಿದರು. ಆದರೆ ಗೋಲ್ಡನ್‌ ಡಕ್‌ ಆಗಿ ತೆರಳಿದರು. ಮೇಘನಾ ಗಳಿಕೆ 10 ರನ್‌ ಮಾತ್ರ. ಡಿ. ಹೇಮಲತಾ 2 ರನ್‌ ಮಾಡಿ ರನೌಟ್‌ ಆದರು. 19 ರನ್ನಿಗೆ ಭಾರತದ 3 ವಿಕೆಟ್‌ ಬಿತ್ತು.

ವನ್‌ಡೌನ್‌ನಲ್ಲಿ ಬಂದ ದೀಪ್ತಿ ಶರ್ಮ, 5ನೇ ಕ್ರಮಾಂಕದಲ್ಲಿ ಆಡಳಿಲಿದ ಜೆಮಿಮಾ ರೋಡ್ರಿಗಸ್‌ ಬಿರುಸಿನ ಆಟಕ್ಕಿಳಿದರು. 4ನೇ ವಿಕೆಟಿಗೆ 129 ರನ್‌ ಹರಿದು ಬಂತು. ಲಂಕಾ ವಿರುದ್ಧ ಸಿಡಿದು ನಿಂತಿದ್ದ ಜೆಮಿಮಾ ಇಲ್ಲಿ 45 ಎಸೆತಗಳಿಂದ 75 ರನ್‌ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಒಳಗೊಂಡಿತ್ತು. ದೀಪ್ತಿ ಶರ್ಮ 49 ಎಸೆತ ಎದುರಿಸಿ 64 ರನ್‌ ಹೊಡೆದರು (5 ಬೌಂಡರಿ, 2 ಸಿಕ್ಸರ್‌).

ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಈ ಪಂದ್ಯದಿಂದ ಹೊರಗುಳಿದರು. ಸ್ಮೃತಿ ಮಂಧನಾ ತಂಡವನ್ನು ಮುನ್ನಡೆಸಿದರು. ಆದರೆ ಬ್ಯಾಟಿಂಗ್‌ಗೆ ಇಳಿಯಲಿಲ್ಲ.

ಯುಎಇ ಆಮೆಗತಿಯಾಟ
ಯುಎಇ ಎರಡು ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಸಂಕಟಕ್ಕೆ ಸಿಲುಕಿತು. ತೀರ್ಥ ಸತೀಶ್‌ (1), ಇಶಾ ರೋಹಿತ್‌ ಓಜಾ (4), ನತಾಶಾ ಶೆರಿಯತ್‌ (0) ಬೇಗನೇ ಪೆವಿಲಿಯನ್‌ ಸೇರಿಕೊಂಡರು. ಆಗ ಸ್ಕೋರ್‌ಬೋರ್ಡ್‌ ಕೇವಲ 5 ರನ್‌ ದಾಖಲಿಸುತ್ತಿತ್ತು.

ಮುಂದಿನದು ಕವಿಶಾ ಮತ್ತು ಖುಷಿ ಶರ್ಮ ಅವರ ಆಮೆಗತಿಯ ಆಟ. 15.1 ಓವರ್‌ ನಿಭಾಯಿಸಿದ ಇವರು ಒಟ್ಟುಗೂಡಿಸಿದ್ದು 58 ರನ್‌ ಮಾತ್ರ!

ಸಂಕ್ಷಿಪ್ತ ಸ್ಕೋರ್‌: ಭಾರತ-5 ವಿಕೆಟಿಗೆ 178 (ಜೆಮಿಮಾ ಔಟಾಗದೆ 75, ದೀಪ್ತಿ 64). ಯುಎಇ-4 ವಿಕೆಟಿಗೆ 74 (ಕವಿಶಾ ಔಟಾಗದೆ 30, ಖುಷಿ 29, ರಾಜೇಶ್ವರಿ 29ಕ್ಕೆ 2).

ಪಂದ್ಯಶ್ರೇಷ್ಠ: ಜೆಮಿಮಾ ರೋಡ್ರಿಗಸ್‌.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.