Asia Cup: ಶ್ರೀಲಂಕಾದ ಮಿಸ್ಟರಿ ಸ್ಪಿನ್ನರ್ ಮಹೀಶ ತೀಕ್ಷಣ ಗಾಯಾಳು
Team Udayavani, Sep 16, 2023, 2:20 AM IST
ಕೊಲಂಬೊ: ಏಷ್ಯಾ ಕಪ್ ಫೈನಲ್ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡ ಆಘಾತವೊಂದಕ್ಕೆ ಸಿಲುಕಿದೆ. ಮಿಸ್ಟರಿ ಸ್ಪಿನ್ನರ್ ಮಹೀಶ ತೀಕ್ಷಣ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ.
ಪಾಕಿಸ್ಥಾನ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಕ್ಷೇತ್ರರಕ್ಷಣೆ ನಡೆಸುತ್ತಿದ್ದಾಗ ತೀಕ್ಷಣ ಬಲ ಸ್ನಾಯು ಸೆಳೆತಕ್ಕೊಳಗಾದರು. ಸ್ಕ್ಯಾನಿಂಗ್ ನಡೆಸಲಾಗಿದೆ. ಇದರ ವರದಿಯನ್ನು ಕಾಯಲಾಗುತ್ತಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಶ್ರೀಲಂಕಾದ ಬೌಲಿಂಗ್ ವೇಳೆ ತೀಕ್ಷಣ ಒಂದೆರಡು ಸಲ ಮೈದಾನ ತೊರೆ ದಿದ್ದರು. ಆದರೆ ತಮ್ಮ 9 ಓವರ್ಗಳ ಕೋಟಾವನ್ನು ಪೂರ್ತಿ ಗೊಳಿಸಿದ್ದರು.
ಶ್ರೀಲಂಕಾ ಈಗಾಗಲೇ ವನಿಂದು ಹಸರಂಗ, ದುಷ್ಮಂತ ಚಮೀರ, ಲಹಿರು ಕುಮಾರ, ಮಧುಶಂಕ ಮೊದಲಾದ ಪ್ರಮುಖ ಬೌಲರ್ಗಳ ಸೇವೆಯಿಂದ ವಂಚಿತವಾಗಿದೆ. ಒಂದು ವೇಳೆ ಭಾರತದೆದುರಿನ ಫೈನಲ್ನಲ್ಲಿ ತೀಕ್ಷಣ ಆಡದೇ ಹೋದರೆ ಅದು ಶ್ರೀಲಂಕಾಕ್ಕೆ ದೊಡ್ಡ ಹಿನ್ನಡೆಯಾಗುವುದರಲ್ಲಿ ಅನುಮಾನವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್!