ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌4ನೇ ಸ್ಥಾನದೊಂದಿಗೆ ಕೂಟ ಮುಗಿಸಿದ ಭಾರತ


Team Udayavani, Apr 26, 2019, 6:10 AM IST

PU-CHitra

ದೋಹಾ: ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಕೊನೆಯ ದಿನ ಭಾರತ ಒಂದು ಚಿನ್ನ, 2 ಬೆಳ್ಳಿ ಮತ್ತು ಒಂದು ಕಂಚಿನ ಪದಕ ಜಯಿಸುವುದರೊಂದಿಗೆ 4ನೇ ಸ್ಥಾನಿಯಾಗಿ ಕೂಟವನ್ನು ಕೊನೆಗೊಳಿಸಿದೆ.

ಅಂತಿಮ ದಿನವಾದ ಬುಧವಾರ 200 ಮೀ. ಓಟದಲ್ಲಿ ದ್ಯುತಿ ಚಂದ್‌ ಕಂಚಿನ ಪದಕ ಗೆದ್ದು ಭಾರತದ ಪದಕ ಬೇಟೆ ಆರಂಭಿಸಿದರು. ಅನಂತರ ಕೆಲವೇ ಕ್ಷಣಗಳಲ್ಲಿ ವನಿತೆಯರ 1,500 ಮೀ. ಓಟದಲ್ಲಿ ಪಿ.ಯು. ಚಿತ್ರಾ ಕೂಟದ ಚಿನ್ನವನ್ನು ತಮ್ಮಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. 2017ರ ಆವೃತ್ತಿಯಲ್ಲೂ ಚಿತ್ರಾ ಬಂಗಾರ ಜಯಿಸಿದ್ದರು.

ಚಿತ್ರಾರಿಂದ ಸ್ಫೂರ್ತಿ ಪಡೆದ ಅಜಯ್‌ ಕುಮಾರ್‌ ಸರೋಜ್‌ ಪುರುಷರ 1,500 ಮೀ. ಓಟವನ್ನು 3 ನಿಮಿಷ, 42.85 ಸೆಕೆಂಡ್‌ಗಳಲ್ಲಿ ಕ್ರಮಿಸಿ ಬೆಳ್ಳಿ ಪದಕ ಗೆದ್ದರು. 2017ರ ಆವೃತ್ತಿಯಲ್ಲಿ ಅಜಯ್‌ ಚಿನ್ನ ಜಯಿಸಿದ್ದರು. ಬಹ್ರೈನ್‌, ಕತಾರ್‌ ಕ್ರಮವಾಗಿ ಚಿನ್ನ ಮತ್ತು ಕಂಚು ಸಂಪಾದಿಸಿತು.

ಪೂವಮ್ಮ ತಂಡಕ್ಕೆ ಮತ್ತೆ ಬೆಳ್ಳಿ
ವನಿತೆಯರ 4/400 ಮೀ. ರಿಲೇ ಸ್ಪರ್ಧೆಯಲ್ಲಿ ಪ್ರಾಚಿ, ಎಂ.ಆರ್‌. ಪೂವಮ್ಮ, ಸರಿತಾಬೆನ್‌ ಗಾಯಕ್ವಾಡ್‌ ಮತ್ತು ವಿ.ಕೆ. ವಿಸ್ಮಯಾ ಅವರನ್ನೊಳಗೊಂಡ ಭಾರತ ತಂಡ 3 ನಿಮಿಷ, 32.21 ಸೆಕೆಂಡ್‌ಗಳಲ್ಲಿ ಓಟ ಮುಗಿಸಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿತು. ಬಹ್ರೈನ್‌ ಚಿನ್ನ, ಜಪಾನ್‌ ಕಂಚಿನ ಪದಕ ಗೆದ್ದಿತು.

ಪುರುಷರ ರಿಲೇ ತಂಡ ಅನರ್ಹ
ಪುರುಷರ 4/400 ಮೀ. ರಿಲೇ ಸ್ಪರ್ಧೆಯೂ ನಾಟಕೀಯ ರೀತಿಯಲ್ಲಿ ಕೊನೆಗೊಂಡಿದೆ. ಆರಂಭದಲ್ಲಿ ಕೆ. ಮೊಹಮ್ಮದ್‌, ಕೆ.ಎಸ್‌. ಜೀವನ್‌, ಮೊಹಮ್ಮದ್‌ ಅನಾಸ್‌ ಮತ್ತು ಅರೋಕಿಯಾ ರಾಜೀವ್‌ ಅವರನ್ನು ಒಳಗೊಂಡ ಭಾರತದ ತಂಡ 3 ನಿಮಿಷ, 03.28 ಸೆಕೆಂಡ್‌ಗಳಲ್ಲಿ ಓಟ ಮುಗಿಸಿ ಬೆಳ್ಳಿ ಪದಕ ಜಯಿಸಿತ್ತು. ಜಪಾನ್‌ ಮತ್ತು ಚೀನಕ್ಕೆ ಚಿನ್ನ, ಕಂಚು ಒಲಿದಿತ್ತು. ಆದರೆ ಭಾರತದ ಕ್ರೀಡಾಪಟುಗಳು ತನ್ನ ಸ್ಪರ್ಧಿಯನ್ನು ತಡೆದಿದ್ದಾರೆ ಎಂದು ಚೀನ ಪ್ರತಿಭಟನೆ ಮಾಡಿದ ಕಾರಣ ಭಾರತದ ಕ್ರೀಡಾಪಟುಗಳನ್ನು 163.2 ನಿಯಮದಂತೆ ಅನರ್ಹ ಎಂದು ಪರಿಗಣಿಸಲಾಯಿತು. ಆರಂಭದಲ್ಲಿ ಕಂಚು ಗೆದ್ದಿದ್ದ ಚೀನ ಬೆಳ್ಳಿ ಪದಕ ಮತ್ತು ಕತಾರ್‌ ತಂಡಕ್ಕೆ ಕಂಚಿನ ಪದಕ ನೀಡಲಾಯಿತು. ಭಾರತ ಇದನ್ನು ಪ್ರತಿಭಟಿಸಿ ಮನವಿ ಮಾಡಿಕೊಂಡರೂ ಇದು ತಿರಸ್ಕರಿಸಲ್ಪಟ್ಟಿತು.

17 ಪದಕ ಗೆದ್ದ ಭಾರತ
ಸ್ಟಾರ್‌ ಆ್ಯತ್ಲೀಟ್‌ಗಳ ಅನುಪಸ್ಥಿತಿಯಲ್ಲೂ ಭಾರತೀಯ ಕ್ರೀಡಾಪಟುಗಳು ಈ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. 3 ಚಿನ್ನ, 7 ಬೆಳ್ಳಿ ಮತ್ತು 7 ಕಂಚಿನ ಪದಕ ಗೆದ್ದಿರುವ ಭಾರತ ಒಟ್ಟು 17 ಪದಕಗಳೊಂದಿಗೆ 4ನೇ ಸ್ಥಾನ ಪಡೆಯಿತು. ಗೋಮತಿ ಮಾರಿಮುತ್ತು, ತೇಜಿಂದರ್‌ ಪಾಲ್‌ ಸಿಂಗ್‌ ತೂರ್‌ ಮತ್ತು ಪಿ.ಯು. ಚಿತ್ರಾ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟರು. 2017ರ ತವರಿನ ಕೂಟದಲ್ಲಿ ಭಾರತ ಒಟ್ಟು 29 ಪದಕಗಳನ್ನು ಗೆದ್ದು ಮೊದಲ ಬಾರಿಗೆ ಅಗ್ರಸ್ಥಾನ ಅಲಂಕರಿಸಿತ್ತು.

ಈ ಬಾರಿ ಬಹ್ರೈನ್‌ ಮೊದಲ ಸ್ಥಾನ, ಚೀನ ದ್ವಿತೀಯ ಮತ್ತು ಜಪಾನ್‌ ತೃತೀಯ ಸ್ಥಾನ ಪಡೆದಿವೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.