ಏಶ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ವಿಶ್ವ ವಿಜೇತನನ್ನು ಕೆಡವಿದ ಕವಿಂದರ್‌


Team Udayavani, Apr 23, 2019, 11:51 AM IST

KAVINDER-SINGH-BISHT-1

ಬ್ಯಾಂಕಾಕ್‌: ಹಾಲಿ ವಿಶ್ವ ಚಾಂಪಿಯನ್‌, ಕಜಾಕ್‌ಸ್ಥಾನದ ಕೈರತ್‌ ಯೆರಲಿಯೇವ್‌ ಅವರನ್ನು ಮಣಿಸುವ ಮೂಲಕ “ಏಶ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌’ನಲ್ಲಿ ಭಾರತದ ಕವಿಂದರ್‌ ಸಿಂಗ್‌ ಬಿಷ್ಟ್ (56 ಕೆಜಿ) ಮೊದಲ ಏಶ್ಯನ್‌ ಪದಕದ ಹಾದಿಯನ್ನು ಸುಗಮಗೊಳಿಸಿದ್ದಾರೆ.

ಮೂಲತಃ ಉತ್ತರಾಖಂಡ್‌ನ‌ವರಾದ ಕವಿಂದರ್‌, ಫಿನ್ಲಂಡ್‌ನ‌ಲ್ಲಿ ನಡೆದ ಗೀಬೀ ಟೂರ್ನಿಯಲ್ಲಿ ಬಂಗಾರ ಗೆದ್ದ ಹೆಗ್ಗಳಿಕೆ ಹೊಂದಿದ್ದಾರೆ. ಆದರೆ ಯೆರಲಿಯೇವ್‌ ಈವರೆಗೆ ಏಶ್ಯನ್‌ ಬಾಕ್ಸಿಂಗ್‌ನಲ್ಲಿ 2 ಕಂಚಿನ ಪದಕಗಳನ್ನಷ್ಟೇ ಜಯಿಸಿದ್ದಾರೆ. ಕಳೆದ ಏಶ್ಯನ್‌ ಗೇಮ್ಸ್‌ನಲ್ಲೂ ಅವರು ಕಂಚನ್ನೇ ಗೆದ್ದಿದ್ದರು.

ಪಂಘಲ್‌ ಪದಕ ಖಾತ್ರಿ
52 ಕೆಜಿ ವಿಭಾಗದಲ್ಲಿ ಸ್ಪರ್ಧೆಗಿಳಿದಿರುವ ಅಮಿತ್‌ ಪಂಘಲ್‌, ಒಲಿಂಪಿಕ್‌ ಚಾಂಪಿಯನ್‌ ಹಸನ್‌ಬಾಯ್‌ ದುಸ್ಮತೋವ್‌ ಅವರನ್ನು 3-2ರಿಂದ ಸೋಲಿಸಿ ಪದಕವನ್ನು ಖಾತ್ರಿಪಡಿಸಿದ್ದಾರೆ. 2015ರ ಕೂಟದಲ್ಲಿ ಪಂಘಲ್‌ ಕಂಚಿನ ಪದಕ ಜಯಿಸಿದ್ದರು. ಉಜ್ಬೆಕಿಸ್ಥಾನದ ದುಸ್ಮತೋವ್‌ ಕಳೆದ ಏಶ್ಯನ್‌ ಗೇಮ್ಸ್‌ ಫೈನಲ್‌ನಲ್ಲಿ ಪಂಘಲ್‌ ವಿರುದ್ಧ ಸೋಲನುಭವಿಸಿ ಚಿನ್ನ ಕಳೆದುಕೊಂಡಿದ್ದರು.
ರಾಷ್ಟ್ರೀಯ ಚಾಂಪಿಯನ್‌ ದೀಪಕ್‌ ಸಿಂಗ್‌ (49 ಕೆಜಿ) ಕೂಡ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಅಫ್ಘಾನಿಸ್ಥಾನದ ರಮಿಶ್‌ ರೆಹಮಾನಿ ಗಾಯಾಳಾದ್ದರಿಂದ ದೀಪಕ್‌ಗೆ ವಾಕ್‌ಓವರ್‌ ಲಭಿಸಿತು. ರೋಹಿತ್‌ ತೋಕಾಸ್‌ (64 ಕೆಜಿ) ಮಂಗೋಲಿಯಾದ ಚಿಂಜೋರಿಗ್‌ ಬಾತರ್ಸುಕ್‌ ವಿರುದ್ಧ ದಿಟ್ಟ ಹೋರಾಟ ನೀಡಿಯೂ ಕ್ವಾರ್ಟರ್‌ ಫೈನಲ್‌ನಲ್ಲಿ 2-3 ಅಂತರದಿಂದ ಎಡವಿದರು.

ಸೆಮಿಫೈನಲ್‌ಗೆ ಸೋನಿಯಾ
ವನಿತಾ ವಿಭಾಗದ ಸ್ಪರ್ಧೆಯಲ್ಲಿ ಸೋನಿಯಾ ಚಾಹಲ್‌ (57 ಕೆಜಿ) ಸೆಮಿಫೈನಲ್‌ ತಲುಪಿದ್ದಾರೆ. ಅವರು ಕೊರಿಯಾದ ಜೊ ಸನ್‌ ಹ್ವಾ ವಿರುದ್ಧ ಜಯ ಸಾಧಿಸಿದರು.
ಆದರೆ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಲೊವಿÉನಾ ಬೊರ್ಗೊಹೈನ್‌ (69 ಕೆಜಿ) ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್‌, ತೈವಾನ್‌ನ ಚೆನ್‌ ನೀನ್‌ ಚಿನ್‌ ವಿರುದ್ಧ 5-0 ಅಂತರದಿಂದ ಪರಾಭವಗೊಂಡರು.
ವನಿತೆಯರ ಮತ್ತೂಂದು ಸ್ಪರ್ಧೆಯಲ್ಲಿ ಸೀಮಾ ಪೂನಿಯ (+81 ಕೆಜಿ) ಚೀನದ ಯಾಂಗ್‌ ಕ್ಸಿಯೋಲಿ ವಿರುದ್ಧ 0-5 ಅಂತರದಿಂದ ಪರಾಭವಗೊಂಡರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.