ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಪಾಕಿಸ್ಥಾನವನ್ನು ಕೆಡವಿ ಕಂಚು ಗೆದ್ದ ಭಾರತ


Team Udayavani, Dec 23, 2021, 5:20 AM IST

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಪಾಕಿಸ್ಥಾನವನ್ನು ಕೆಡವಿ ಕಂಚು ಗೆದ್ದ ಭಾರತ

ಢಾಕಾ: ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 4-3 ಗೋಲುಗಳಿಂದ ಕೆಡವಿದ ಭಾರತ ಕಂಚಿನ ಪದಕ ಜಯಿಸಿದೆ. ಈ ಎರಡೂ ತಂಡಗಳು ಕಳೆದ ಸಲದ ಜಂಟಿ ಚಾಂಪಿಯನ್‌ಗಳಾಗಿದ್ದವು.

ಭಾರತ, ಪಾಕಿಸ್ಥಾನಗಳೆರಡೂ ಸೆಮಿಫೈನಲ್‌ನಲ್ಲಿ ಸೋತು ಬುಧವಾರ 3ನೇ ಸ್ಥಾನದ ಸ್ಪರ್ಧೆಗೆ ಇಳಿದಿದ್ದವು. ಪಂದ್ಯದ್ದುಕ್ಕೂ ಸಮಬಲದ ಹೋರಾಟ ಕಂಡುಬಂತು. ಪೆನಾಲ್ಟಿ ಕಾರ್ನರ್‌ಗಳ ಪ್ರವಾಹವೇ ಹರಿದು ಬಂತು. ಅದೃಷ್ಟ ಭಾರತದ ಕೋಟೆಯಲ್ಲಿ ಅವಿತಿತ್ತು. ಇದು ಈ ಕೂಟದಲ್ಲಿ ಪಾಕ್‌ ಎದುರು ಮನ್‌ಪ್ರೀತ್‌ ಸಿಂಗ್‌ ಪಡೆ ಸಾಧಿಸಿದ 2ನೇ ಗೆಲುವು. ಲೀಗ್‌ ಹಂತದಲ್ಲಿ ಭಾರತ 3-1 ಅಂತರದಿಂದ ಗೆದ್ದು ಬಂದಿತ್ತು.

ಮೊದಲ ನಿಮಿಷದಲ್ಲೇ ಗೋಲ್‌
ಭಾರತ ಮೊದಲ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ಗಳಿಸಿತು. ಉಪನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಖಾತೆ ತೆರೆದರು. 10ನೇ ನಿಮಿಷದಲ್ಲಿ ಪಾಕಿಸ್ಥಾನ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ಅಫ್ರಾಜ್‌ ಅವರಿಂದ ಈ ಗೋಲು ದಾಖಲಾಯಿತು. ಅರ್ಧ ಹಾದಿ ಕ್ರಮಿಸುವಾಗ ಇತ್ತಂಡಗಳು 1-1 ಸಮಬಲದಲ್ಲಿದ್ದವು.

3ನೇ ಕ್ವಾರ್ಟರ್‌ನ 3ನೇ ನಿಮಿಷದಲ್ಲಿ ಅಬ್ದುಲ್‌ ರಾಣಾ ಸಿಡಿಸಿದ ಗೋಲಿನಿಂದ ಪಾಕಿಸ್ಥಾನ ಮುನ್ನಡೆ ಸಾಧಿಸಿತು. ಭಾರತ ಒತ್ತಡಕ್ಕೆ ಸಿಲುಕಿತು. ಈ ಹಂತ ಮುಗಿಯಲು ಕೆಲವೇ ಸೆಕೆಂಡ್‌ಗಳಿರುವಾಗ ಸುಮಿತ್‌ ಸಿಡಿಸಿದ ಗೋಲಿನಿಂದ ಪಂದ್ಯ ಮತ್ತೆ ಸಮಬಲಕ್ಕೆ ಬಂತು.

ಇದನ್ನೂ ಓದಿ:ಪ್ರೊ ಕಬಡ್ಡಿ: ಬುಲ್ಸ್‌ ಗೆ ತಿವಿದ ಯು ಮುಂಬಾ

ಅಂತಿಮ ಹಂತದ ಪೈಪೋಟಿ
ಅಂತಿಮ ಕ್ವಾರ್ಟರ್‌ನಲ್ಲಿ ಪೈಪೋಟಿ ತೀವ್ರ ಗೊಂಡಿತು. 53ನೇ ನಿಮಿಷದಲ್ಲಿ ವರುಣ್‌ ಕುಮಾರ್‌, 57ನೇ ನಿಮಿಷದಲ್ಲಿ ಆಕಾಶ್‌ದೀಪ್‌ ಸಿಂಗ್‌ ಸೇರಿಕೊಂಡು ಭಾರತಕ್ಕೆ 4-2 ಮುನ್ನಡೆ ಕೊಡಿಸುವಲ್ಲಿ ಯಶಸ್ವಿಯಾದರು.
ಮರು ಗಳಿಗೆಯಲ್ಲೇ ಪಾಕ್‌ ತಿರುಗಿ ಬಿತ್ತು. 57ನೇ ನಿಮಿಷದಲ್ಲೇ ಅಹ್ಮದ್‌ ನದೀಮ್‌ 3ನೇ ಗೋಲು ಬಾರಿಸಿದರು. ಉಳಿದ 3 ನಿಮಿಷಗಳನ್ನು ಎಚ್ಚರಿಕೆಯಿಂದ ಕಳೆದ ಭಾರತ ಕಂಚು ಗೆಲ್ಲುವಲ್ಲಿ ಯಶಸ್ವಿಯಾಯಿತು. ಕೊನೆಯ ಕೆಲವು ನಿಮಿಷಗಳಲ್ಲಿ ಭಾರತ ಹತ್ತೇ ಆಟಗಾರರೊಂದಿಗೆ ಹೋರಾಟ ಸಂಘಟಿಸಬೇಕಾಯಿತು. ಹಾರ್ದಿಕ್‌ ಸಿಂಗ್‌, ಸುಮಿತ್‌ ಅವರಿಗೆ ಹಳದಿ ಕಾರ್ಡ್‌ ನೀಡಲಾಗಿತ್ತು.

ದಕ್ಷಿಣ ಕೊರಿಯಾ ಚಾಂಪಿಯನ್‌
ಭಾರೀ ಪೈಪೋಟಿಯೊಡ್ಡಿದ ಜಪಾನ್‌ ತಂಡವನ್ನು ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಮಣಿಸಿದ ದಕ್ಷಿಣ ಕೊರಿಯಾ ನೂತನ ಏಶ್ಯನ್‌ ಹಾಕಿ ಚಾಂಪಿಯನ್‌ ಎನಿಸಿತು. ನಿಗದಿತ ವೇಳೆಯಲ್ಲಿ ಇತ್ತಂಡಗಳು 3-3 ಸಮಬಲ ಸಾಧಿಸಿದ್ದವು.

ಭಾರತ, ಪಾಕಿಸ್ಥಾನ ಹೊರತುಪಡಿಸಿ 3ನೇ ತಂಡವೊಂದು ಇಲ್ಲಿ ಚಾಂಪಿಯನ್‌ ಆಗಿ ಮೂಡಿಬಂದ ಮೊದಲ ನಿದರ್ಶನ ಇದಾಗಿದೆ. ಕೊರಿಯಾ ಫೈನಲ್‌ ಪ್ರವೇಶಿಸಿದ್ದು ಕೂಡ ಇದೇ ಮೊದಲು. ಜಪಾನ್‌ 2013ರಲ್ಲಿ ಫೈನಲ್‌ ಪ್ರವೇಶಿಸಿ ಪಾಕಿಸ್ಥಾನಕ್ಕೆ ಶರಣಾಗಿತ್ತು.

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.