Asian Champions Trophy ಹಾಕಿ ಸೆಮಿಫೈನಲ್ಸ್‌ ; ಇಂದು ಭಾರತಕ್ಕೆ ಜಪಾನ್‌ ಸವಾಲು

ಮಲೇಷ್ಯಾಕ್ಕೆ ಹಾಲಿ ಚಾಂಪಿಯನ್‌ ದ. ಕೊರಿಯ ಎದುರಾಳಿ

Team Udayavani, Aug 11, 2023, 7:00 AM IST

1-sadad

ಚೆನ್ನೈ: ಅಜೇಯ ಭಾರತ ತಂಡವು ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಕೂಟದಲ್ಲಿ ಶುಕ್ರವಾರ ನಡೆಯುವ ಎರಡನೇ ಸೆಮಿಫೈನಲ್‌ ಹೋರಾಟದಲ್ಲಿ ಜಪಾನ್‌ ತಂಡವನ್ನು ಎದುರಿಸಲಿದೆ.

ಇಲ್ಲಿನ ಮೇಯರ್‌ ರಾಧಾಕೃಷ್ಣನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೋರಾಟದಲ್ಲಿ ಭಾರತವೇ ಫೇವರಿಟ್‌ ತಂಡವಾಗಿದ್ದರೂ ಎದುರಾಳಿಯನ್ನು ಹಗುರವಾಗಿ ಕಾಣುವ ಸಾಧ್ಯತೆಯಿಲ್ಲ. ಲೀಗ್‌ ಹಂತದಲ್ಲಿ ಆಡಿದ ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿರುವ ಭಾರತವು ಇನ್ನೊಂದು ಪಂದ್ಯದಲ್ಲಿ ಡ್ರಾ ಸಾಧಿಸಿ ಅಜೇಯ ಸಾಧನೆ ಮಾಡಿದೆಯಲ್ಲದೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಭಾರತವು ದಾಖಲೆ ನಾಲ್ಕನೇ ಬಾರಿ ಈ ಪ್ರಶಸ್ತಿ ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಈ ಮೊದಲು ನಡೆಯುವ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಮಲೇಷ್ಯಾ ತಂಡವು ಹಾಲಿ ಚಾಂಪಿಯನ್‌ ದಕ್ಷಿಣ ಕೊರಿಯವನ್ನು ಎದುರಿಸಲಿದೆ. ಇದಕ್ಕಿಂತ ಮೊದಲು ಐದು ಮತ್ತು ಆರನೇ ಸ್ಥಾನಕ್ಕಾಗ ನಡೆಯುವ ಪಂದ್ಯದಲ್ಲಿ ಪಾಕಿಸ್ಥಾನವು ಚೀನಾ ತಂಡವನ್ನು ಎದುರಿಸಲಿದೆ.

ವಿಶ್ವ ರ್‍ಯಾಂಕಿಂಗ್‌ ಅನ್ನು ಗಮನಿಸಿದರೆ ಭಾರತವೇ ಬಲಿಷ್ಠ ತಂಡವೆಂದು ಹೇಳಬಹುದು. ಆದರೆ ಜಪಾನ್‌ ಈ ಹಿಂದೆ ಭಾರತವನ್ನು ಸೋಲಿಸಿದ ನಿದರ್ಶನವಿರುವ ಕಾರಣ ಈ ಪಂದ್ಯದಲ್ಲಿ ಭಾರತ ಎಚ್ಚರಿಕೆಯಿಂದ ಆಡುವ ಅಗತ್ಯವಿದೆ. ರ್‍ಯಾಂಕಿಂಗ್‌ನಲ್ಲಿ ಭಾರತ ಸದ್ಯ ನಾಲ್ಕನೇ ಸ್ಥಾನದಲ್ಲಿದ್ದರೆ ಜಪಾನ್‌ 19ನೇ ಸ್ಥಾನದಲ್ಲಿದೆ.

ಲೀಗ್‌ ಹಂತದಲ್ಲಿ ಭಾರತ ಅಮೋಘ ಆಟದ ಪ್ರದರ್ಶನ ನೀಡಿದೆ. ಆದರೆ ಜಪಾನ್‌ ತಂಡದ ವಿರುದ್ಧ ಮಾತ್ರ ಡ್ರಾ (1-1) ಸಾಧಿಸಿತ್ತು. ಭಾರತ ಈ ಹಿಂದೆ ಢಾಕಾದಲ್ಲಿ ನಡೆದ 2021ರ ಆವೃತ್ತಿಯ ಸೆಮಿಫೈನಲ್‌ನಲ್ಲಿ ಜಪಾನ್‌ಗೆ 3-5 ಗೋಲುಗಳಿಂದ ಸೋತಿತ್ತು. ಹೀಗಾಗಿ ಭಾರತ ಬಹಳಷ್ಟು ಎಚ್ಚರಿಕೆ ವಹಿಸಿ ಆಡಿ ಗೆಲ್ಲಲು ಪ್ರಯತ್ನಿಸಬೇಕಾಗಿದೆ. ಇದಕ್ಕಾಗಿ 60 ನಿಮಿಷಗಳ ಆಟದುದ್ದಕ್ಕೂ ಆಕ್ರಮಣಕಾರಿ ಆಟವನ್ನು ಮುಂದು ವರಿಸಿಕೊಂಡು ಹೋಗಲು ಮತ್ತು ಸ್ಥಿರ ನಿರ್ವಹಣೆ ನೀಡಲು ಭಾರತ ಪ್ರಯತ್ನಿಸಬೇಕಾಗಿದೆ.

ಲೀಗ್‌ ಹಂತದಲ್ಲಿ ಭಾರತ ಒಟ್ಟಾರೆ 20 ಗೋಲುಗಳನ್ನು ದಾಖಲಿಸಿದೆ. ಆದರೆ ಜಪಾನ್‌ ವಿರುದ್ಧ ಗೋಲು ದಾಖಲಿಸುವ ಹಲವು ಅವಕಾಶವನ್ನು ಕಳೆದುಕೊಂಡಿತ್ತು. ಕ್ರೆಗ್‌ ಫ‌ುಲ್ಟನ್‌ ನಾಯಕತ್ವದ ತಂಡವು ಜಪಾನ್‌ ವಿರುದ್ಧ 15 ಪೆನಾಲ್ಟಿ ಕಾರ್ನರ್‌ ಅವಕಾಶ ಪಡೆದಿದ್ದರೂ ಒಮ್ಮೆ ಮಾತ್ರ ಗೋಲು ದಾಖಲಿಸಲು ಯಶಸ್ವಿಯಾಗಿತ್ತು. ಇದೀಗ ತಂಡವು ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಗೋಲು ದಾಖಲಿಸಲು ಪ್ರಯತ್ನಿಸಬೇಕಾಗಿದೆ.
ಬುಧವಾರ ನಡೆದ ಪಂದ್ಯದಲ್ಲಿ ಪಾಕಿಸ್ಥಾನವನ್ನು 4-0 ಗೋಲುಗ ಳಿಂದ ಸೋಲಿಸಿರುವುದು ಭಾರತದ ಉತ್ಸಾಹವನ್ನು ಹೆಚ್ಚಿಸಿದೆ. ಪಂದ್ಯದ 4 ಕ್ವಾರ್ಟರ್‌ ಹಂತದಲ್ಲಿ ಸ್ಥಿರ ನಿರ್ವಹಣೆ ನೀಡಿ ಭಾರತ ಮೇಲುಗೈ ಸಾಧಿಸಿತ್ತು. ಅದೇ ಉತ್ಸಾಹದಲ್ಲಿ ಭಾರತವು ಜಪಾನ್‌ ವಿರುದ್ಧ ಆಡಬೇಕಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.