Asia Cup 2023; ‘ಈ ಆಟಗಾರ ಅದೃಷ್ಟದಿಂದಲೇ ತಂಡದಲ್ಲಿರುವುದು..’: ಟಾಮ್ ಮೂಡಿ ಅಭಿಪ್ರಾಯ


Team Udayavani, Aug 22, 2023, 1:04 PM IST

Asia Cup 2023; ‘ಈ ಆಟಗಾರ ಅದೃಷ್ಟದಿಂದಲೇ ತಂಡದಲ್ಲಿರುವುದು..’: ಟಾಮ್ ಮೂಡಿ ಅಭಿಪ್ರಾಯ

ಹೊಸದಿಲ್ಲಿ: ಮುಂಬರುವ ಏಷ್ಯಾಕಪ್ ಕೂಟಕ್ಕೆ ಬಿಸಿಸಿಐ ಸೋಮವಾರ ಭಾರತ ತಂಡವನ್ನು ಪ್ರಕಟಿಸಿದೆ. ನಾಯಕ ರೋಹಿತ್ ಶರ್ಮಾ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಪತ್ರಿಕಾಗೋಷ್ಠಿ ನಡೆಸಿ 17 ಮಂದಿ ಆಟಗಾರರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಐಪಿಎಲ್ ಕೋಚಿಂಗ್ ಮಾಡಿ ಅನುಭವವಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಟಾಮ್ ಮೂಡಿ ಅವರು ತಂಡದ ಬಗ್ಗೆ ಮಾತನಾಡಿದ್ದು, ಸೂರ್ಯಕುಮಾರ್ ಅವರು ಸ್ಥಾನ ಪಡೆದಿರುವುದಕ್ಕೆ ಅದೃಷ್ಟವಂತರು ಎಂದು ಅಭಿಪ್ರಾಯಪಟ್ಟಿದ್ದಾರೆ.

“ಆ ತಂಡದಲ್ಲಿರಲು ನಾನು ಅದೃಷ್ಟಶಾಲಿ ಎಂದು ಭಾವಿಸುವ ಆಟಗಾರನೆಂದರೆ ಸೂರ್ಯಕುಮಾರ್ ಯಾದವ್. ಅವರು ನಾವೆಲ್ಲರೂ ವೀಕ್ಷಿಸಲು ಇಷ್ಟಪಡುವ ಆಟಗಾರ ಎಂದು ನನಗೆ ತಿಳಿದಿದೆ, ಆದರೆ ಅವರು ಇನ್ನೂ 50-ಓವರ್ ಗಳ ಆಟವನ್ನು ನಿಜವಾಗಿಯೂ ಕರಗತ ಮಾಡಿಕೊಂಡಿಲ್ಲ. ಅವರು 20 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಆದರೆ ಸಾಧಾರಣ ಪ್ರದರ್ಶನ ತೋರಿದ್ದಾರೆ. ಅವರು ಟಿ20 ಕ್ರಿಕೆಟ್‌ ನಲ್ಲಿ ಪ್ರತಿಭಾವಂತರಾಗಿದ್ದಾರೆ. ಆದರೆ 50-ಓವರ್‌ಗಳ ಕ್ರಿಕೆಟ್ ಸಂಪೂರ್ಣವಾಗಿ ವಿಭಿನ್ನ ಸ್ವರೂಪವಾಗಿದೆ. ಅದರ ಕೋಡ್ ಅನ್ನು ಅವರು ಇನ್ನೂ ಭೇದಿಸಿಲ್ಲ” ಎಂದು ಸ್ಟಾರ್ ಸ್ಪೋರ್ಟ್ಸ್‌ ನಲ್ಲಿ ಮೂಡಿ ಹೇಳಿದರು.

ಇದನ್ನೂ ಓದಿ:Raju Punjabi: ಜೀವ ತೆಗೆದ ಜಾಂಡೀಸ್; 40 ಹರೆಯದಲ್ಲಿ ಕೊನೆಯುಸಿರೆಳೆದ ಜನಪ್ರಿಯ ಗಾಯಕ

ಏಷ್ಯಾ ಕಪ್ ತಂಡದಲ್ಲಿ ಸೂರ್ಯಕುಮಾರ್ ಬದಲಿಗೆ ಜೈಸ್ವಾಲ್‌ ನಂತಹ ಕಿರಿಯ ಯಾರನ್ನಾದರೂ ಅಥವಾ ಹೆಚ್ಚುವರಿ ಸ್ಪಿನ್ನರ್‌ ನನ್ನು ತೆಗೆದುಕೊಳ್ಳ ಬಹುದಾಗಿತ್ತು ಎಂದು ಮೂಡಿ ಸಲಹೆ ನೀಡಿದರು.

ಇಲ್ಲಿಯವರೆಗೆ, ಸೂರ್ಯಕುಮಾರ್ ಯಾದವ್ 26 ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. 24 ಇನ್ನಿಂಗ್ಸ್‌ ಗಳಲ್ಲಿ ಅವರು ಸರಾಸರಿ 24.33ಯಲ್ಲಿ ಒಟ್ಟು 511 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.