ಏಶ್ಯಾಡ್‌ ಚಾಂಪಿಯನ್‌ಗೆ ಅಘಾತವಿಕ್ಕಿದ ಭಾರತ


Team Udayavani, Oct 23, 2018, 6:00 AM IST

25.jpg

ಮಸ್ಕತ್‌: ಏಶ್ಯನ್‌ ಚಾಂಪಿಯನ್‌ ಟ್ರೋಫಿ ಹಾಕಿ ರೌಂಡ್‌ ರಾಬಿನ್‌ ಲೀಗ್‌ ಸುತ್ತಿನಲ್ಲಿ ಭಾರತ ಏಶ್ಯಾಡ್‌ ಚಾಂಪಿಯನ್‌ ಜಪಾನ್‌ ವಿರುದ್ಧ ಜಬರ್ದಸ್ತ್ ಪ್ರದರ್ಶನ ನೀಡಿ 9-0 ಗೋಲುಗಳ ಜಯ ದಾಖಲಿಸಿದೆ. ಇದು ಕೂಟದಲ್ಲಿ ಭಾರತಕ್ಕೊಲಿದ ಹ್ಯಾಟ್ರಿಕ್‌ ಗೆಲುವಾಗಿದೆ. ರವಿವಾರ ರಾತ್ರಿ ನಡೆದ ಪಂದ್ಯದಲ್ಲಿ ಪ್ರಾಬಲ್ಯ ಮೆರೆದ ಭಾರತ, ಎದುರಾಳಿ ಜಪಾನ್‌ಗೆ ತಲೆ ಎತ್ತಲಾಗದಂತೆ ಮಾಡಿ ಏಶ್ಯಾಡ್‌ನ‌ಲ್ಲಿ ನೀಡಿದ ಕಳಪೆ ಪ್ರದರ್ಶನವನ್ನು ಮರೆ ಮಾಚಿದೆ. ಭಾರತವೀಗ 6 ತಂಡಗಳ ಗುಂಪಿನಲ್ಲಿ 9 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಮಲೇಶ್ಯ 6 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಏಶ್ಯನ್‌ ಗೇಮ್ಸ್‌ನ ಗುಂಪು ಹಂತದ ಪಂದ್ಯ ದಲ್ಲೂ ಭಾರತ ಜಪಾನ್‌ ವಿರುದ್ಧ 8-0 ಗೋಲು ಗಳಿಂದ ಗೆಲುವು ದಾಖಲಿಸಿತ್ತು. 

ಸತತ ಆಕ್ರಮಣ
ವಿಶ್ವದ 5ನೇ ಶ್ರೇಯಾಂಕಿತ ಭಾರತ ಏಶ್ಯನ್‌ ಗೇಮ್ಸ್‌ ಚಾಂಪಿಯನ್‌ಗೆ ಒಂದೇ ಒಂದು ಗೋಲು ಹೊಡೆಯುವ ಅವಕಾಶ ನೀಡಲಿಲ್ಲ. ಭಾರತದ ಪರಮನ್‌ದೀಪ್‌ ಸಿಂಗ್‌ 3 ಗೋಲು (4ನೇ ನಿಮಿಷ, 49ನೇ ನಿಮಿಷ, 57ನೇ ನಿಮಿ ಷ), ಹರ್ಮನ್‌ ಪ್ರೀತ್‌ ಸಿಂಗ್‌ 2 ಗೋಲು (17ನೇ ನಿಮಿಷ, 21ನೇ ನಿಮಿಷ), ಗುರ್ಜಂತ್‌ ಸಿಂಗ್‌,  ಆಕಾಶ್‌ದೀಪ್‌ ಸಿಂಗ್‌, ಸುಮೀತ್‌, ಲಲಿತ್‌ ಉಪಾಧ್ಯಾಯ ತಲಾ ಒಂದು ಗೋಲು ಹೊಡೆದು ಗೆಲುವಿನ ರೂವಾರಿಗಳಾದರು.

ಪಾಕಿಸ್ಥಾನ ವಿರುದ್ಧ ಗೆಲುವಿನ ಬಳಿಕ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡ ಉತ್ತಮ ಆರಂಭವನ್ನೇ ಪಡೆಯಿತು. 4ನೇ ನಿಮಿಷದಲ್ಲೇ ಮನ್‌ದೀಪ್‌ ಸಿಂಗ್‌ ಮೊದಲ ಗೋಲು ಹೊಡೆದು ಮುನ್ನಡೆ ತಂದು ಕೊಟ್ಟರು. ಅನಂತರ ಭಾರತ ಹಿಂದಿರುಗಿ ನೋಡಲೇ ಇಲ್ಲ. ಮೊದಲಾರ್ಧ ಜಪಾನ್‌ಗೆ ಸಾಕಷ್ಟು ಕಠಿನವಾಗಿ ಪರಿಣಮಿಸಿತು. ಭಾರತ ಮೊದಲ ಕ್ವಾರ್ಟರ್‌ನಲ್ಲಿ 2-0 ಮುನ್ನಡೆ ಕಾಯ್ದುಕೊಂಡಿತು. ದ್ವಿತೀಯ ಕ್ವಾರ್ಟರ್‌ನಲ್ಲಿ ಮತ್ತೆರಡು ಗೋಲು ಸಿಡಿಸಿತು.

ಮಂಕಾದ ಜಪಾನ್‌
ದ್ವಿತೀಯಾರ್ಧದಲ್ಲಿ ಜಪಾನ್‌ ಆತ್ಮವಿಶ್ವಾಸದಿಂದಲೇ ಕಣಕ್ಕಿಳಿದರೂ ಭಾರತೀಯರ ಆಟದ ಎದುರು ಮಂಕಾಯಿತು. ಪ್ರಾರಂಭದಲ್ಲೇ ಆಕಾಶ್‌ ದೀಪ್‌ ಸಿಂಗ್‌ 5ನೇ ಗೋಲು ಬಾರಿಸಿದರು.  ಇದಾದ ಕೆಲವೇ ಕ್ಷಣಗಳಲ್ಲಿ ಭಾರತ 10 ಆಟಗಾರರೊಂದಿಗೆ ಆಡಬೇಕಾಯಿತು. ಜಪಾನ್‌ ಆಟಗಾರನನ್ನು ತಳ್ಳಿದ ಕಾರಣ ದಿಲ್‌ಪ್ರೀತ್‌ ಸಿಂಗ್‌ ಹೊರನಡೆದರು. ಆದರೂ ಆಕ್ರಮಣಕಾರಿ ಆಟವಾಡಿದ ಸುಮೀತ್‌, ಲಲಿತ್‌  ಒಂದೊಂದು ಗೋಲು ಹೊಡೆದು  ಮುನ್ನಡೆ ತಂದಿಟ್ಟರು. 

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.