ದೆಹಲಿ ಸಾಯ್‌ನಲ್ಲಿ ಯುವ ಅಥ್ಲೀಟ್‌ ಪಲಿಂದರ್‌ ಆತ್ಮಹತ್ಯೆ


Team Udayavani, Nov 15, 2018, 6:35 AM IST

athlete-committed-suicide.jpg

ನವದೆಹಲಿ: ಭಾರತದ ಕ್ರೀಡಾರಂಗದಲ್ಲಿ ಮತ್ತೂಂದು ದುರಂತ ಸಂಭವಿಸಿದೆ. 18 ವರ್ಷದ ಅಂತಾರಾಷ್ಟ್ರೀಯ ಯುವ ಅಥ್ಲೀಟ್‌, ಉತ್ತರಪ್ರದೇಶದ ಅಲಿಗಢಕ್ಕೆ ಸೇರಿದ ಪಲಿಂದರ್‌ ಚೌಧರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಮಂಗಳವಾರ ಸಂಜೆ ಫ್ಯಾನ್‌ಗೆ ನೇಣು ಬಿಗಿದುಕೊಂಡ ಪಲಿಂದರ್‌ರನ್ನು ಆಸ್ಪತ್ರೆಗೆ ಸಾಗಿಸಿದರೂ, ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ದೆಹಲಿಯ ಸಫ‌ªರ್‌ಜಂಗ್‌ ಆಸ್ಪತ್ರೆಗೆ ಸಾಗಿಸುವಾಗಲೇ ಅಥ್ಲೀಟ್‌ ಮೆದುಳು ನಿಷ್ಕ್ರಿಯವಾಗಿತ್ತು. ಆದ್ದರಿಂದ ಬದುಕಿಸಿಕೊಳ್ಳಲು ಮಾಡಿದ ಎಲ್ಲ ಪ್ರಯತ್ನಗಳೂ ವಿಫ‌ಲವಾದವು. ಅಚ್ಚರಿಯೆಂದರೆ ಮಂಗಳವಾರ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರೂ ಎಲ್ಲಿಯೂ ನೋವನ್ನಾಗಲೀ, ಇನ್ಯಾವುದೇ ರೀತಿಯ ಭಾವನೆಗಳನ್ನಾಗಲೀ ಪಲಿಂದರ್‌ ತೋರ್ಪಡಿಸಿಕೊಂಡಿರಲಿಲ್ಲ. ಸಂಜೆ ಮಾತ್ರ ದಿಢೀರೆಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆಗಿದ್ದೇನು?: ಘಟನೆಯ ಬಗ್ಗೆ ಸಾಯ್‌ ಅಧಿಕಾರಿಗಳು ಪ್ರತಿಕ್ರಿಯೆ ನೀಡಿ, ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಮಗೆ ಗೊತ್ತಿಲ್ಲ. ಮೃತನ ಕೊಠಡಿಯಲ್ಲಿ ಯಾವುದೇ ಪತ್ರಗಳೂ ದೊರೆತಿಲ್ಲ ಎಂದು ತಿಳಿಸಿದ್ದಾರೆ. ಸಾಯ್‌ನ ಪ್ರಧಾನ ಕಾರ್ಯದರ್ಶಿ ನೀಲಂ ಕಪೂರ್‌ ಪ್ರತಿಕ್ರಿಯಿಸಿ, ಘಟನೆ ನಮ್ಮ ಸಂಸ್ಥೆ ಆವರಣದಲ್ಲಿ ನಡೆದಿದೆ. ಇನ್ನೊಂದು ವಾರದೊಳಗೆ ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲಾಗುವುದು ಎಂದಿದ್ದಾರೆ.

ಮಂಗಳವಾರ ಬೆಳಗ್ಗೆ ಪಲಿಂದರ್‌ ತಮ್ಮ ತಂದೆ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಆ ವೇಳೆ ಹಣಕಾಸಿಗೆ ಸಂಬಂಧಿಸಿದಂತೆ ಏನೋ ವಾಗ್ವಾದಗಳಾಗಿವೆ. ಇದಾದ ನಂತರ ಸಂಜೆಯಷ್ಟೊತ್ತಿಗೆ ಪಲಿಂದರ್‌ರನ್ನು ಭೇಟಿ ಮಾಡಲು ಸಂಜೆ ಸಹೋದರಿ ಆಗಮಿಸಿದ್ದರು. ಆ ಸಂದರ್ಭದಲ್ಲಿ ಸಹೋದರಿಯೆದುರಿಗೇ ಆತ್ಮಹತ್ಯೆ ಮುಂದಾದರು. ತಕ್ಷಣ ಕೂಗಿಕೊಂಡು ಹೊರಬಂದ ಸಹೋದರಿ, ಘಟನೆಯ ಬಗ್ಗೆ ಮಾಹಿತಿ ನೀಡಿದರು. ತಕ್ಷಣ ಸಾಯ್‌ ಸಿಬ್ಬಂದಿ ಬಂದು ಪಲಿಂದರ್‌ರನ್ನು ಫ್ಯಾನ್‌ಗೆ ಬಿಗಿದುಕೊಂಡಿದ್ದ ನೇಣಿನಿಂದ ಕೆಳಗಿಳಿಸಿದರು. ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೆದುಳು ನಿಷ್ಕ್ರಿಯವಾಗಿತ್ತು.

ಪಲಿಂದರ್‌ ಸಾಧನೆ: ಪಲಿಂದರ್‌ 2016ರಿಂದ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದ ದೆಹಲಿ ಶಾಖೆಯಲ್ಲಿ ತರಬೇತಿ ನಡೆಸುತ್ತಿದ್ದರು. ಜವಾಹರ್‌ಲಾಲ್‌ ನೆಹರೂ ಕ್ರೀಡಾಂಗಣದಲ್ಲಿರುವ ಸಾಯ್‌ ನಿವಾಸದ 69ನೇ ಸಂಖ್ಯೆಯ ಕೊಠಡಿಯಲ್ಲಿದ್ದರು. 100 ಮೀ., 200 ಮೀ. ಓಟದಲ್ಲಿ ಅಭ್ಯಾಸ ನಡೆಸುತ್ತಿದ್ದರು. 2017ರಲ್ಲಿ ಏಷ್ಯಾ ಯುವ ಕೂಟದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಜುಲೈನಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಪಾಲ್ಗೊಂಡಿದ್ದರು.

ಸಾಯ್‌ನಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆಗಳು
ಸಾಯ್‌ ವ್ಯಾಪ್ತಿಯಲ್ಲಿ ಕಳೆದ ಕೆಲ ವರ್ಷಗಳಿಂದ ಪದೇ ಪದೇ ಆತ್ಮಹತ್ಯೆಗಳು ಸಂಭವಿಸುತ್ತಿವೆ. ಮೊನ್ನೆ ಅಕ್ಟೋಬರ್‌ನಲ್ಲಿ ಕರ್ನಾಟಕ ಸಾಯ್‌ನಲ್ಲಿ ಕಬಡ್ಡಿ ತರಬೇತುದಾರರಾಗಿದ್ದ ರುದ್ರಪ್ಪ ಹೊಸಮನಿ, ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದರು. 

2015ರಲ್ಲಿ ಕೇರಳದ ಅಲಪ್ಪುಳದಲ್ಲಿ ಅನಾಹುತಕಾರಿ ಪ್ರಕರಣವೊಂದು ಸಂಭವಿಸಿತ್ತು. ಇಲ್ಲಿನ ಸಾಯ್‌ ಆವರಣದಲ್ಲಿ ನಾಲ್ವರು ಯುವತಿಯರು ಸಾಯ್‌ನ ತರಬೇತುದಾರರೊಬ್ಬರು ಕಿರುಕುಳ ನೀಡುತ್ತಿದ್ದಾರೆಂಬ ಬೇಸರದಲ್ಲಿ ವಿಷಪೂರಿತ ಹಣ್ಣು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅದರಲ್ಲಿ ಒಬ್ಬ ಯುವತಿ ತೀರಿಕೊಂಡಿದ್ದರೆ, ಉಳಿದ ಮೂವರು ಬಚಾವಾಗಿದ್ದರು. ಪ್ರಕರಣ ಇಡೀ ರಾಷ್ಟ್ರಾದ್ಯಂತ ಸುದ್ದಿಯಾಗಿತ್ತು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.