ಎಟಿಪಿ ಫೈನಲ್ಸ್‌: ಟ್ರೋಫಿ ಎತ್ತಿದ ಸಿಸಿಪಸ್‌


Team Udayavani, Nov 19, 2019, 12:29 AM IST

cc-pas

ಲಂಡನ್‌: ಗ್ರೀಕ್‌ನ ಯುವ ಟೆನಿಸಿಗ ಸ್ಟೆಫ‌ನೆಸ್‌ಸಿಸಿಪಸ್‌ ವರ್ಷಾಂತ್ಯದ ಎಟಿಪಿ ಫೈನಲ್ಸ್‌ ಟೆನಿಸ್‌ ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದಾರೆ. ರವಿವಾರ ರಾತ್ರಿಯ ಫೈನಲ್‌ನಲ್ಲಿ ಅವರು ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ವಿರುದ್ಧ 6-7 (6-8), 6-2, 7-6 (7-4) ಅಂತರದ ಕಠಿನ ಗೆಲುವು ಸಾಧಿಸಿದರು.

ಇದು ಸಿಸಿಪಸ್‌ ಮತ್ತು ಥೀಮ್‌ ಇಬ್ಬರಿಗೂ ಮೊದಲ “ಎಟಿಪಿ ಫೈನಲ್ಸ್‌’ ಪ್ರಶಸ್ತಿ ಸಮರವಾಗಿತ್ತು. ಹೀಗಾಗಿ ಯಾರೇ ಗೆದ್ದರೂ ಇಲ್ಲಿ ಮೊದಲ ಸಲ ಚಾಂಪಿಯನ್‌ ಆಗುತ್ತಿದ್ದರು. ತೀವ್ರ ಪೈಪೋಟಿಯ ಈ ಹೋರಾಟದಲ್ಲಿ ಅದೃಷ್ಟ ಸಿಸಿಪಸ್‌ ಪಾಲಾಯಿತು. ಗ್ರೀಕ್‌ ಆಟಗಾರನೊಬ್ಬನಿಗೆ ಮೊದಲ ಸಲ ಈ ಪ್ರಶಸ್ತಿ ಒಲಿಯಿತು. ಅಷ್ಟೇ ಅಲ್ಲ, ಗ್ರೀಕ್‌ ಟೆನಿಸಿಗನೊಬ್ಬ ಈ ಕೂಟಕ್ಕೆ ಅರ್ಹತೆ ಪಡೆದದ್ದು ಇದೇ ಮೊದಲ ಸಲವಾಗಿತ್ತು.

ಕಿರಿಯ ಟೆನಿಸ್‌ ಸಾಧಕ
21ರ ಹರೆಯದ ಸಿಸಿಪಸ್‌ ಈ ಕೂಟದ 8 ಮಂದಿ ಸ್ಪರ್ಧಿಗಳಲ್ಲೇ ಅತ್ಯಂತ ಕಿರಿಯ ಆಟಗಾರನಾಗಿದ್ದರು. ಇದರೊಂದಿಗೆ 2001ರ ಬಳಿಕ ಈ ಪ್ರಶಸ್ತಿ ಎತ್ತಿದ ಕಿರಿಯ ಟೆನಿಸಿಗನೆಂಬ ಹಿರಿಮೆಗೆ ಪಾತ್ರರಾದರು. ಅಂದು ಲೇಟನ್‌ ಹೆವಿಟ್‌ ಈ ಸಾಧನೆ ಮಾಡಿದ್ದರು. ಹಾಗೆಯೇ 1991ರ ಬಳಿಕ ಪದಾರ್ಪಣ ಕೂಟದಲ್ಲೇ ಫೈನಲ್‌ ಪ್ರವೇಶಿಸಿದ ಕಿರಿಯ ಆಟಗಾರನಾಗಿಯೂ ಸಿಸಿಪಸ್‌ ಮೂಡಿಬಂದಿದ್ದರು. ಅಂದಿನ ಸಾಧಕ ಜಿಮ್‌ ಕೊರಿಯರ್‌.

“ಮೊದಲ ಸೆಟ್‌ ಬಹಳ ಕಠಿನವಾಗಿತ್ತು. ಆದರೆ 2ನೇ ಸೆಟ್‌ ವೇಳೆ ಉತ್ತಮ ಪ್ರದರ್ಶನ ನೀಡಲು ಹೇಗೆ ಸಾಧ್ಯವಾಯಿತು ಎಂಬುದೇ ತಿಳಿಯುತ್ತಿಲ್ಲ. ಇಂಥ ದೊಡ್ಡ ಕೂಟದಲ್ಲಿ ಆಡುವಾಗ ಸಹಜವಾಗಿಯೇ ನಾನು ನರ್ವಸ್‌ ಆಗುತ್ತೇನೆ. ಆದರೆ ಇಂದು ಹೋರಾಟ ನೀಡುವಲ್ಲಿ ಯಶಸ್ವಿಯಾದೆ’ ಎಂದು ವಿಶ್ವದ 6ನೇ ರ್‍ಯಾಂಕಿಂಗ್‌ ಆಟಗಾರ ಸಿಸಿಪಸ್‌ ಪ್ರತಿಕ್ರಿಯಿಸಿದ್ದಾರೆ.

ರಫೆಲ್‌ ನಡಾಲ್‌ ಎದುರಿನ ಗ್ರೂಪ್‌ ಹಂತದ ಪಂದ್ಯದಲ್ಲಷ್ಟೇ ಪರಾಭವಗೊಂಡ ಸಿಸಿಪಸ್‌, ಸತತ 3 ದಿನವೂ ಪಂದ್ಯವಾಡಿ ಪ್ರಶಸ್ತಿ ಗೆದ್ದದ್ದು ವಿಶೇಷ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.