ಆಸೀಸ್‌-ಕಿವೀಸ್‌ ಏಕದಿನ ಕ್ರಿಕೆಟ್‌ ಸರಣಿಯೂ ರದ್ದು

ಒಂದೇ ಪಂದ್ಯಕ್ಕೆ ಮುಗಿದ ಸರಣಿ; 1-0 ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯ

Team Udayavani, Mar 14, 2020, 11:40 PM IST

ಆಸೀಸ್‌-ಕಿವೀಸ್‌ ಏಕದಿನ ಕ್ರಿಕೆಟ್‌ ಸರಣಿಯೂ ರದ್ದು

ಮೆಲ್ಬರ್ನ್: ಕೊರೊನಾ ವೈರಸ್‌ ಕಾರಣದಿಂದ ಆಸ್ಟ್ರೇಲಿಯನ್ಯೂಜಿಲ್ಯಾಂಡ್‌ ನಡುವಿನ ಏಕದಿನ ಸರಣಿಯನ್ನು ಶನಿವಾರ ರದ್ದುಗೊಳಿಸಲಾಯಿತು. ಹೀಗಾಗಿ 3 ಪಂದ್ಯಗಳ ಈ ಸರಣಿ ಕೇವಲ ಒಂದು ಪಂದ್ಯಕ್ಕೆ ಸೀಮಿತಗೊಂಡಿತು.

ನ್ಯೂಜಿಲ್ಯಾಂಡ್‌ ಸರಕಾರ ರೂಪಿಸಿದ ನೂತನ ನಿಯಮಾನುಸಾರ, ಆಸ್ಟ್ರೇಲಿಯ ಪ್ರವಾಸದಲ್ಲಿರುವ ಕ್ರಿಕೆಟಿಗರು ಕೂಡಲೇ ತವರಿಗೆ ಮರಳಬೇಕಿದೆ ಎಂಬುದಾಗಿ “ಕ್ರಿಕೆಟ್‌ ಆಸ್ಟ್ರೇಲಿಯ’ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಹಾಗೆಯೇ ಕ್ರಿಕೆಟ್‌ ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ಮಂಡಳಿಗಳು ಸೇರಿ ಈ ಸರಣಿಯನ್ನು ಯಾವಾಗ ಮುಂದುವರಿಸಬೇಕೆಂದು ತೀರ್ಮಾನಿಸಲಿವೆ ಎಂದೂ ಹೇಳಿದೆ.

ನ್ಯೂಜಿಲ್ಯಾಂಡ್‌ ನೂತನ ನಿಯಮ
ನ್ಯೂಜಿಲ್ಯಾಂಡ್‌ ಸರಕಾರ ರೂಪಿಸಿದ ನೂತನ ನಿಯಮದಂತೆ, ಆಸ್ಟ್ರೇಲಿಯದಿಂದ ನೆರೆಯ ನ್ಯೂಜಿಲ್ಯಾಂಡಿಗೆ ಬರುವವರೆಲ್ಲ 14 ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿ ಇರಬೇಕಾಗುತ್ತದೆ. ಈ ನಿಯಮ ರವಿವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ. ಈ ಕಾರಣಕ್ಕಾಗಿ ನ್ಯೂಜಿಲ್ಯಾಂಡ್‌ ಕ್ರಿಕೆಟಿಗರು ಸರಣಿಯನ್ನು ಮೊಟಕುಗೊಳಿಸಿ ಕೂಡಲೇ ತವರಿಗೆ ವಾಪಸಾಗುವ ಯೋಜನೆ ಹಾಕಿಕೊಂಡರು.

“ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ಮಂಡಳಿ ಸರಕಾರದ ನಿಯಮವನ್ನು ಪಾಲಿಸಲಿದೆ. ಯಾವುದೇ ಕಾರಣಕ್ಕೂ ಅನಗತ್ಯ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ. ಆಟಗಾರರ ಆರೋಗ್ಯ ನಮಗೆ ಬಹಳ ಮುಖ್ಯ’ ಎಂಬುದಾಗಿ ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಸಿಡ್ನಿಯದೇ ಕೊನೆಯ ಪಂದ್ಯ
ಇದರೊಂದಿಗೆ ಪ್ರಸ್ತುತ ಜಾಗತಿಕ ಕ್ರಿಕೆಟ್‌ನಲ್ಲಿ ನಡೆಯಬೇಕಿರುವ ಎಲ್ಲ ಕ್ರಿಕೆಟ್‌ ಸರಣಿಗಳೂ ರದ್ದುಗೊಂಡಂತಾಗಿದೆ. ಕೆಲವನ್ನು ಅನಿರ್ದಿಷ್ಟ ಕಾಲ ಮುಂದೂಡಲಾಗಿದೆ.

ಶುಕ್ರವಾರ “ಸಿಡ್ನಿ ಕ್ರಿಕೆಟ್‌ ಗ್ರೌಂಡ್‌’ನಲ್ಲಿ ಪ್ರೇಕ್ಷಕರಿಗೆ ನಿರ್ಬಂಧ ವಿಧಿಸಿ ನಡೆಸಲಾದ ಆಸ್ಟ್ರೇಲಿಯ-ನ್ಯೂಜಿಲ್ಯಾಂಡ್‌ ನಡುವಿನ “ಚಾಪೆಲ್‌-ಹ್ಯಾಡ್ಲಿ ಸರಣಿಯ’ ಮೊದಲ ಏಕದಿನ ಪಂದ್ಯವೇ ಸದ್ಯದ ಸ್ಥಿತಿಯಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯವೆನಿಸಿತು.

ಈ ಪಂದ್ಯವನ್ನು ಆಸ್ಟ್ರೇಲಿಯ 71 ರನ್ನುಗಳಿಂದ ಜಯಿಸಿತ್ತು. ಸರಣಿಯ ಮುಂದಿನೆರಡು ಪಂದ್ಯ ಮಾ. 15 (ಸಿಡ್ನಿ) ಮತ್ತು ಮಾ. 20ರಂದು (ಹೋಬರ್ಟ್‌) ನಡೆಯಬೇಕಿತ್ತು.

ಇದಕ್ಕೂ ಮೊದಲು ಭಾರತ-ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯನ್ನೂ ರದ್ದುಗೊಳಿಸಲಾಗಿತ್ತು. ಇಂಗ್ಲೆಂಡ್‌ ಕ್ರಿಕೆಟ್‌ ತಂಡ ಶ್ರೀಲಂಕಾ ಪ್ರವಾಸದಿಂದಲೂ ಹಿಂದೆ ಸರಿದಿತ್ತು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.