ಕ್ರಿಕೆಟ್‌ಗೆ ಬ್ರೇಕ್‌’ ನೀಡಲು ನಿರ್ಧರಿಸಿದ ಆಸ್ಟ್ರೇಲಿಯದ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌


Team Udayavani, Aug 10, 2022, 11:26 PM IST

ಕ್ರಿಕೆಟ್‌ಗೆ ಬ್ರೇಕ್‌’ ನೀಡಲು ನಿರ್ಧರಿಸಿದ ಆಸ್ಟ್ರೇಲಿಯದ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌

ಸಿಡ್ನಿ: ಆಸ್ಟ್ರೇಲಿಯದ ವಿಶ್ವಕಪ್‌ ವಿಜೇತ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ “ಕ್ರಿಕೆಟ್‌ ಬ್ರೇಕ್‌’ ಪಡೆಯಲು ನಿರ್ಧರಿಸಿದ್ದಾರೆ. “ನಾನು ನನಗಾಗಿಯೇ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂಬುದಾಗಿ ಅವರು ಹೇಳಿದ್ದಾರೆ. ಆದರೆ ನಿವೃತ್ತಿ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

ಬರ್ಮಿಂಗ್‌ಹ್ಯಾಮ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಆಸ್ಟ್ರೇಲಿಯ ಚಿನ್ನದ ಪದಕ ಗೆದ್ದ ಎರಡೇ ದಿನಗಳಲ್ಲಿ ಮೆಗ್‌ ಲ್ಯಾನಿಂಗ್‌ ಅವರಿಂದ ಈ ನಿರ್ಧಾರ ಪ್ರಕಟಗೊಂಡಿದೆ. ಇಲ್ಲಿ ಲ್ಯಾನಿಂಗ್‌ ನಾಯಕತ್ವದಲ್ಲೇ ಆಸ್ಟ್ರೇಲಿಯ ತಂಡ ಚಾಂಪಿಯನ್‌ ಆಗಿ ಮೂಡಿಬಂದಿತ್ತು.

ಈ ನಿರ್ಧಾರದಿಂದಾಗಿ ಮುಂಬರುವ ಭಾರತ ಪ್ರವಾಸದ ವೇಳೆ ಮೆಗ್‌ ಲ್ಯಾನಿಂಗ್‌ ಆಸ್ಟ್ರೇಲಿಯ ತಂಡ ವನ್ನು ಮುನ್ನಡೆಸುವ ಸಾಧ್ಯತೆ ಇಲ್ಲ. ಆಸೀಸ್‌ ತಂಡ ಡಿಸೆಂಬರ್‌ನಲ್ಲಿ ಭಾರತಕ್ಕೆ ಆಗಮಿಸಿ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ.

“ಕಳೆದ ಒಂದೆರಡು ವರ್ಷಗಳಿಂದ ನಾನು ಬಿಡುವಿಲ್ಲದಷ್ಟು ಕ್ರಿಕೆಟ್‌ ಪಂದ್ಯಗಳನ್ನು ಆಡುತ್ತ ಬಂದಿದ್ದೇನೆ. ಹೀಗಾಗಿ ನನ್ನ ಮೇಲೆಯೇ ನಾನು ಗಮನವನ್ನು ಕೇಂದ್ರೀಕರಿಸಬೇಕಿದೆ. ನನ್ನ ಈ ಖಾಸಗಿತನವನ್ನು ಗೌರವಿ ಸಿದ ಕ್ರಿಕೆಟ್‌ ಆಸ್ಟ್ರೇಲಿಯಕ್ಕೆ, ಸಹ ಆಟಗಾರ್ತಿಯ ರಿಗೆ, ಕ್ರಿಕೆಟ್‌ ಪ್ರೇಮಿಗಳಿಗೆ ಈ ಸಂದರ್ಭದಲ್ಲಿ ಕೃತಜ್ಞತೆಗಳು’ ಎಂಬು ದಾಗಿ ಮೆಗ್‌ ಲ್ಯಾನಿಂಗ್‌ ಹೇಳಿದರು.

ಕ್ರಿಕೆಟ್‌ ಆಸ್ಟ್ರೇಲಿಯ ಕೂಡ ಮೆಗ್‌ ಲ್ಯಾನಿಂಗ್‌ ಅವರ ಈ ನಿರ್ಧಾರವನ್ನು ಸಮ್ಮತಿಸಿದೆ. “ಆಸ್ಟ್ರೇಲಿಯದ ಕ್ರಿಕೆಟಿಗೆ ಮೆಗ್‌ ಲ್ಯಾನಿಂಗ್‌ ನೀಡಿದ ಕೊಡುಗೆ ಅಸಾಮಾನ್ಯ. ಯುವ ಆಟಗಾರ್ತಿ ಯರ ಪಾಲಿಗೆ ಅವರೊಂದು ರೋಲ್‌ ಮಾಡೆಲ್‌ ಆಗಿದ್ದಾರೆ’ ಎಂದು ಆಸ್ಟ್ರೇಲಿಯನ್‌ ಕ್ರಿಕೆಟ್‌ ಮಂಡಳಿಯ ಅಧಿಕಾರಿ ಶಾನ್‌ ಫ್ಲೆಗ್ಲರ್‌ ಹೇಳಿದರು.

ಲ್ಯಾನಿಂಗ್‌ ಹೆಗ್ಗಳಿಕೆ
30 ವರ್ಷದ ಮೆಗ್‌ ಲ್ಯಾನಿಂಗ್‌ 2010 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಪದಾರ್ಪಣೆ ಮಾಡಿದ್ದರು. 2014ರಲ್ಲಿ ನಾಯಕತ್ವ ಒಲಿದು ಬಂದು. 171 ಅಂತಾ ರಾಷ್ಟ್ರೀಯ ಪಂದ್ಯಗಳಲ್ಲಿ ಅವರು ಆಸ್ಟ್ರೇಲಿಯವನ್ನು ಮುನ್ನಡೆಸಿದ ಹೆಗ್ಗಳಿಕೆ ಹೊಂದಿದ್ದಾರೆ. ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಜತೆಗೆ ಆ್ಯಶಸ್‌ ಗೆದ್ದಿರುವುದು ಲ್ಯಾನಿಂಗ್‌ ನಾಯಕತ್ವದ ಮಹತ್ಸಾಧನೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.