ಆಸೀಸ್‌, ಇಂಗ್ಲೆಂಡ್‌, ಪಾಕ್‌ ಕ್ರಿಕೆಟ್‌ ತಂಡಗಳಿಂದ ಫಿಕ್ಸಿಂಗ್‌!


Team Udayavani, Oct 23, 2018, 6:00 AM IST

26.jpg

ದೋಹಾ: ಈ ವರ್ಷಾರಂಭದಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆದ ಕ್ರಿಕೆಟ್‌ ಪಂದ್ಯಗಳಲ್ಲಿ ಫಿಕ್ಸಿಂಗ್‌ ಆರೋಪ ಮಾಡಿ ಸಂಚಲನ ಸೃಷ್ಟಿಸಿದ್ದ “ಅಲ್‌ಜಜೀರಾ’ ವಾಹಿನಿ ಈಗ ಮತ್ತೂಂದು ಆರೋಪ ಮಾಡಿದೆ. ಆಸ್ಟ್ರೇಲಿಯ, ಇಂಗ್ಲೆಂಡ್‌ ಮತ್ತು ಪಾಕಿಸ್ಥಾನಿ ಕ್ರಿಕೆಟಿಗರು 2011-12ರ ಅವಧಿಯಲ್ಲಿ ನಡೆದ 15 ಪಂದ್ಯಗಳಲ್ಲಿ 26 ಬಾರಿ ಸ್ಪಾಟ್‌ ಫಿಕ್ಸಿಂಗ್‌ ಮಾಡಿದ್ದಾರೆಂದು ಅದು ಹೇಳಿದೆ. ಅಲ್ಲದೇ ಗುರುತಿಗೆ ಸಿಗದ ಇನ್ನೊಂದು ತಂಡವೂ ಫಿಕ್ಸಿಂಗ್‌ ಮಾಡಿದೆ ಎಂದು ವಾಹಿನಿ ಹೇಳಿಕೊಂಡಿದೆ. ಈ ಆರೋಪವನ್ನು ಆಸ್ಟ್ರೇಲಿಯ, ಇಂಗ್ಲೆಂಡ್‌ ಮಂಡಳಿಗಳು ಪೂರ್ಣವಾಗಿ ಅಲ್ಲಗಳೆದಿವೆ.

ಈ ವರ್ಷಾರಂಭದಲ್ಲಿ ಹಲವಾರು ಬುಕ್ಕಿಗಳನ್ನು ರಹಸ್ಯ ಕಾರ್ಯಾಚರಣೆಯಲ್ಲಿ ಮಾತನಾಡಿಸಿ ಆರೋಪ ಮಾಡಿದ್ದ ಅಲ್‌ಜಜೀರಾ, ಭಾರತ ಮತ್ತು ಶ್ರೀಲಂಕಾದಲ್ಲಿ ನಡೆದ ಪಂದ್ಯಗಳಲ್ಲಿ ಫಿಕ್ಸಿಂಗ್‌ ನಡೆದಿದೆ. ಆ ಪಂದ್ಯಗಳಲ್ಲಿ ಇಂಗ್ಲೆಂಡ್‌, ಆಸ್ಟ್ರೇಲಿಯಗಳು ಭಾಗವಹಿಸಿದ್ದವು ಎಂದು ಹೇಳಿತ್ತು. ಇದಕ್ಕೆ ಸಂಬಂಧಪಟ್ಟಂತೆ ಹಲವು ವೀಡಿಯೋಗಳನ್ನು ಬಿಡುಗಡೆ ಮಾಡಿತ್ತು. ಈ ಸಂಬಂಧ ಈಗಾಗಲೇ ಐಸಿಸಿ ವಿಚಾರಣೆ ನಡೆಸುತ್ತಿದ್ದು, ಕೆಲವು ಆರೋಪಗಳಲ್ಲಿ ಸತ್ಯವಿಲ್ಲ ಎಂದೂ ಹೇಳಿದೆ.  ಅಷ್ಟರಲ್ಲೇ ಜಜೀರಾ ಇನ್ನೊಂದು ಆರೋಪ ಮಾಡಿದೆ. ಕೆಲವು ಪ್ರಕರಣಗಳಲ್ಲಿ ಎರಡೂ ತಂಡಗಳು ಕೂಡಿಕೊಂಡೇ ಫಿಕ್ಸ್‌ ಮಾಡಿದ್ದು ಗಮನಕ್ಕೆ ಬಂದಿದೆ ಎಂದಿರುವ ವಾಹಿನಿ, ಇದಕ್ಕೆ ಸಂಬಂಧಪಟ್ಟಂತೆ ಕೆಲವು ದಾಖಲೆ ಬಿಡುಗಡೆ ಮಾಡಿದೆ. ಅದರಲ್ಲಿ ಪಂದ್ಯ ಫಿಕ್ಸ್‌ ಮಾಡಿದ್ದ ವ್ಯಕ್ತಿ ಭಾರತದ ಕುಖ್ಯಾತ ಬುಕ್‌ವೆುಕರ್‌ರೊಂದಿಗೆ ಮಾತನಾಡಿರುವ ಧ್ವನಿಮುದ್ರಣವಿದೆ.

ಯಾವ್ಯಾವ ಪಂದ್ಯಗಳು ಫಿಕ್ಸ್‌?
ಲಾರ್ಡ್ಸ್‌ನಲ್ಲಿ ಭಾರತ-ಇಂಗ್ಲೆಂಡ್‌ ನಡುವೆ ನಡೆದ ಪಂದ್ಯ, ಕೇಪ್‌ಟೌನ್‌ನಲ್ಲಿ ಆಸ್ಟ್ರೇಲಿಯ-ದಕ್ಷಿಣ ಆಫ್ರಿಕಾ ನಡುವೆ ನಡೆದ ಪಂದ್ಯ ಹಾಗೂ ಯುಎಇಯಲ್ಲಿ ಪಾಕಿಸ್ಥಾನ-ಇಂಗ್ಲೆಂಡ್‌ ನಡುವೆ ನಡೆದ ಹಲವು ಪಂದ್ಯಗಳಲ್ಲಿ ಫಿಕ್ಸಿಂಗ್‌ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಐಸಿಸಿ ನಾವು ತನಿಖೆ ನಡೆಸುತ್ತೇವೆ, ಯಾವುದೇ ಆರೋಪಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದಿದೆ.

ಆದರೆ ಕ್ರಿಕೆಟ್‌ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿಗಳು ಸಂಪೂರ್ಣವಾಗಿ ಆರೋಪವನ್ನು ನಿರಾಕರಿಸಿವೆ. ಅಲ್‌ಜಜೀರಾ ವಾಹಿನಿ ಪೂರ್ಣಪ್ರಮಾಣದ ಸಾಕ್ಷಿ ನೀಡಿಲ್ಲ. ಆರೋಪಗಳಿಗೆ ಸರಿಯಾದ ಸಾಕ್ಷ್ಯವಿಲ್ಲ. ದಾಖಲೆಗಳನ್ನು ಸರಿಯಾಗಿ ಸಿದ್ಧಪಡಿಸಿಲ್ಲ, ಸ್ಪಷ್ಟತೆಯೂ ಇಲ್ಲ ಎಂದು ಹೇಳಿವೆ. ತಮ್ಮ ಆಟಗಾರರ ಬಗ್ಗೆ ಪೂರ್ಣ ನಿಗಾ ಇಟ್ಟಿದ್ದೇವೆ. ಅಂತಹ ಯಾವುದೇ ಬೆಳವಣಿಗೆಗಳು ಕಾಣಿಸಿಲ್ಲ ಎಂದು ಎರಡೂ ಮಂಡಳಿಗಳು ಸಮರ್ಥಿಸಿಕೊಂಡಿವೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.