ಪರ್ತ್‌ ಟೆಸ್ಟ್‌: ನಥನ್‌ ಲಿಯಾನ್‌ ಮಾರಕ ದಾಳಿ; ಆಸ್ಟ್ರೇಲಿಯಕ್ಕೆ 164 ರನ್‌ ಜಯಭೇರಿ

ಅಂತಿಮ ದಿನ 333 ರನ್ನಿಗೆ ಆಲೌಟಾದ ವೆಸ್ಟ್‌ಇಂಡೀಸ್‌

Team Udayavani, Dec 4, 2022, 10:15 PM IST

1-dADSADSD

ಪರ್ತ್‌: ಆಫ್ ಸ್ಪಿನ್ನರ್‌ ನಥನ್‌ ಲಿಯಾನ್‌ ಅವರ ಅದ್ಭುತ ನಿರ್ವಹಣೆಯಿಂದಾಗಿ ಆಸ್ಟ್ರೇಲಿಯ ತಂಡವು ವೆಸ್ಟ್‌ಇಂಡೀಸ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ 164 ರನ್‌ ಅಂತರದ ಗೆಲುವು ಸಾಧಿಸಿದೆ. ಈ ಗೆಲುವಿನಿಂದ ಆಸ್ಟ್ರೇಲಿಯ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತಲ್ಲದೇ ಫ್ರ್ಯಾಂಕ್‌ ವೊರೆಲ್‌ ಟ್ರೋಫಿಯನ್ನು ತನ್ನಲ್ಲಿ ಉಳಿಸಿಕೊಂಡಿತು.

ಲಿಯಾನ್‌ 128 ರನ್ನಿಗೆ 6 ವಿಕೆಟ್‌ ಉರುಳಿಸಿದ್ದರಿಂದ ವೆಸ್ಟ್‌ಇಂಡೀಸ್‌ ತಂಡವು ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೆಸ್ಟ್‌ನ ಅಂತಿಮ ದಿನ 333 ರನ್ನಿಗೆ ಆಲೌಟಾಯಿತು. 111ನೇ ಟೆಸ್ಟ್‌ ಆಡುತ್ತಿರುವ ಲಿಯಾನ್‌ ಈ ಮೂಲಕ ಐದು ಪ್ಲಸ್‌ ವಿಕೆಟ್‌ ಗೊಂಚಲನ್ನು 21ನೇ ಬಾರಿ ಪಡೆದರು.

ಲಿಯಾನ್‌ ಟೆಸ್ಟ್‌ನಲ್ಲಿ ಒಟ್ಟಾರೆ 446 ವಿಕೆಟ್‌ ಪಡೆದಿದ್ದು ಸಾರ್ವಕಾಲಿಕ ಗರಿಷ್ಠ ವಿಕೆಟ್‌ ಪಡೆದವರಲ್ಲಿ ಎಂಟನೇ ಸ್ಥಾನ ಪಡೆದಿದ್ದಾರೆ. ಅವರು ಆಸ್ಟ್ರೇಲಿಯ ಪರ ಶೇನ್‌ ವಾರ್ನ್ (145 ಟೆಸ್ಟ್‌ನಲ್ಲಿ 708 ವಿಕೆಟ್‌) ಮತ್ತು ಗ್ಲೆನ್‌ ಮೆಕ್‌ಗ್ರಾಥ್‌ (124 ಟೆಸ್ಟ್‌ನಲ್ಲಿ 563 ವಿಕೆಟ್‌) ಅವರ ಬಳಿಕದ ಸ್ಥಾನ ಪಡೆದಿದ್ದಾರೆ.

ಲಿಯನ್‌ ಇಲ್ಲಿ ಬೌಲಿಂಗ್‌ ಮಾಡುವುದನ್ನು ಇಷ್ಟಪಡುತ್ತಾರೆ. ಇದು ಅವರ ಅದ್ಭುತ ಆಲ್‌ರೌಂಡ್‌ ನಿರ್ವಹಣೆಯಾಗಿದೆ ಎಂದು ಆಸ್ಟ್ರೇಲಿಯ ನಾಯಕ ಪ್ಯಾಟ್‌ ಕಮಿನ್ಸ್‌ ಹೇಳಿದ್ದಾರೆ. ಸೋಲಿನಿಂದ ನಿರಾಶೆಯಾಗಿದೆ. ಆದರೆ ಆಟಗಾರರ ತೀವ್ರ ಹೋರಾಟದ ಪ್ರಯತ್ನಕ್ಕೆ ಮೆಚ್ಚುಗೆ ಸಲ್ಲಿಸುತ್ತೇನೆ ಎಂದು ವೆಸ್ಟ್‌ಇಂಡೀಸ್‌ ನಾಯಕ ಬ್ರಾತ್‌ವೇಟ್‌ ತಿಳಿಸಿದ್ದಾರೆ.

ಪರ್ತ್‌ ಟೆಸ್ಟ್‌ ಗೆಲ್ಲಲು 498 ರನ್‌ ಗಳಿಸುವ ಗುರಿ ಪಡೆದಿದ್ದ ವೆಸ್ಟ್‌ಇಂಡೀಸ್‌ ತಂಡವು ಲಿಯಾನ್‌ ದಾಳಿಗೆ ತತ್ತರಿಸಿತು. ಆದರೆ ಆರಂಭಿಕ ನಾಯಕ ಕ್ರೆಗ್‌ ಬ್ರಾತ್‌ವೇಟ್‌ ಸಹಿತ ರೋಸ್ಟನ್‌ ಚೇಸ್‌ ಮತ್ತು ಅಲ್ಜಾರಿ ಜೋಸೆಫ್ ದಿಟ್ಟ ಹೋರಾಟ ನೀಡಿದ್ದರಿಂದ ವೆಸ್ಟ್‌ಇಂಡೀಸ್‌ ದ್ವಿತೀಯ ಇನ್ನಿಂಗ್ಸ್‌ನಲ್ಲಿ 333 ರನ್‌ ಗಳಿಸುವಂತಾಯಿತು. ಬ್ರಾತ್‌ವೇಟ್‌ ಶತಕ ಸಿಡಿಸಿದರೆ ಚೇಸ್‌ ಮತ್ತು ಜೋಸೆಫ್ ಉತ್ತಮವಾಗಿ ಆಡಿದರಲ್ಲದೇ 8ನೇ ವಿಕೆಟಿಗೆ 82 ರನ್‌ ಪೇರಿಸಿದ್ದರು.

ಲಬುಶೇನ್‌ ಪಂದ್ಯಶ್ರೇಷ್ಠ
ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ ಮಾರ್ನಸ್‌ ಲಬುಶೇನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. 1974ರಲ್ಲಿ ಗ್ರೆಗ್‌ ಚಾಪೆಲ್‌ ಬಳಿಕ ಟೆಸ್ಟ್‌ ಪಂದ್ಯವೊಂದರಲ್ಲಿ ದ್ವಿಶತಕ ಮತ್ತು ಶತಕ ಬಾರಿಸಿದ ಆಸ್ಟ್ರೇಲಿಯದ ಮೊದಲ ಆಟಗಾರರೆಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ.

ಸಂಕ್ಷಿಪ್ತ ಸ್ಕೋರು: ಆಸ್ಟ್ರೇಲಿಯ ಪ್ರಥಮ ಇನ್ನಿಂಗ್ಸ್‌ 598ಕ್ಕೆ 4 ಡಿಕ್ಲೇರ್ ಡ್; ವೆಸ್ಟ್‌ಇಂಡೀಸ್‌ ಪ್ರಥಮ ಇನ್ನಿಂಗ್ಸ್‌ 283; ಆಸ್ಟ್ರೇಲಿಯ ದ್ವಿತೀಯ ಇನ್ನಿಂಗ್ಸ್‌: 182ಕ್ಕೆ 2 ಡಿಕ್ಲೇರ್ ಡ್ ,; ವೆಸ್ಟ್‌ಇಂಡೀಸ್‌ ದ್ವಿತೀಯ ಇನ್ನಿಂಗ್ಸ್‌: 333.

ಪಂದ್ಯಶ್ರೇಷ್ಠ: ಮಾರ್ನಸ್‌ ಲಬುಶೇನ್‌.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.