ಮತ್ತೆ ಆಸೀಸ್‌ ಜಯ; ಭಾರತಕ್ಕೆ ಸರಣಿ ಸೋಲು


Team Udayavani, Mar 16, 2018, 9:25 AM IST

PERRY-14-3.jpg

ವಡೋದರ: ಆಸ್ಟ್ರೇಲಿಯ ತಂಡದ ಅಮೋಘ ಆಟಕ್ಕೆ ಭಾರತೀಯ ಮಹಿಳೆಯರು ಮತ್ತೂಮ್ಮೆ ತಲೆಬಾಗಿದ್ದಾರೆ. ಇಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ 60 ರನ್‌ಗಳಿಂದ ಸೋತು 3 ಪಂದ್ಯಗಳ ಏಕದಿನ ಸರಣಿಯನ್ನು ಕಳೆದುಕೊಂಡಿತು. ಎರಡೂ ಪಂದ್ಯ ಗೆದ್ದ ಕಾಂಗರೂ ಪಡೆ 2-0 ಮುನ್ನಡೆಯಲ್ಲಿದೆ. ಕೊನೆಯ ಪಂದ್ಯ ಮಾ.18ರಂದು ನಡೆಯಲಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯ 9 ವಿಕೆಟ್‌ ಕಳೆದುಕೊಂಡು 287 ರನ್‌ ಬಾರಿಸಿತು. ಈ ಮೊತ್ತವನ್ನು ಬೆನ್ನುಹತ್ತಿದ ಭಾರತ 49.2 ಓವರ್‌ಗಳಲ್ಲಿ 227 ರನ್ನಿಗೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನು ಹತ್ತಿದ ಭಾರತಕ್ಕೆ ಆರಂಭಿಕ ಆಟಗಾರ್ತಿಯರಾದ ಸ್ಮತಿ ಮಂಧನಾ ಮತ್ತು ಪೂನಂ ರಾವತ್‌ 17.5 ಓವರ್‌ಗಳಲ್ಲಿ 88 ರನ್‌ ಕಲೆಹಾಕಿ ಉತ್ತಮ ಅಡಿಪಾಯ ಹಾಕಿದ್ದರು. ದುರದೃಷ್ಟವಶಾತ್‌ ಈ ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸುತ್ತಿದ್ದ ಮಂಧನಾ ವಿಕೆಟ್‌ ಉರುಳಿತು. ಮಂಧನಾ 53 ಎಸೆತದಲ್ಲಿ 67 ರನ್‌ ಬಾರಿಸಿದರು. ಅವರ ಆಟದಲ್ಲಿ 12 ಬೌಂಡರಿ, ಒಂದು ಸಿಕ್ಸರ್‌ ಸೇರಿತ್ತು.

11 ರನ್‌ ಆಗುವಷ್ಟರಲ್ಲಿ ಪೂನಂ (27) ಪೆವಿಲಿಯನ್‌ ಸೇರಿದರು. ಅನಂತರ ಭಾರತದ ಕುಸಿತ ತೀವ್ರಗೊಳ್ಳತೊಡಗಿತು. ಸ್ಫೋಟಕ ಆಟಗಾರ್ತಿ ಯರಾದ ದೀಪ್ತಿ ಶರ್ಮ (26), ಮಿಥಾಲಿ ರಾಜ್‌ (15), ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (17) ಅಲ್ಪ ಮೊತ್ತಕ್ಕೆ ವಿಕೆಟ್‌ ಕಳೆದುಕೊಂಡದ್ದು ಭಾರತಕ್ಕೆ ಮುಳುವಾಯಿತು. ಇದರಿಂದ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಯ ಹಂತದಲ್ಲಿ ಬೌಲರ್‌ಗಳಾದ ಪೂಜಾ ವಸ್ತ್ರಾಕರ್‌ (30), ಶಿಖಾ ಪಾಂಡೆ (15) ಸಣ್ಣ ಮಟ್ಟದ ಹೋರಾಟ ನೀಡಿದರು. ಇದರಿಂದ ಯಾವುದೇ ಲಾಭವಾಗಲಿಲ್ಲ. ಆಸ್ಟ್ರೇಲಿಯ ಪರ ಸ್ಪಿನ್ನರ್‌ ಜೆಸ್‌ ಜೊನಾಸೆನ್‌ 3 ವಿಕೆಟ್‌, ಎಲಿಸ್‌ ಪೆರ್ರಿ ಮತ್ತು ಅಮಂಡಾ ವೆಲ್ಲಿಂಗ್ರಟನ್‌ ತಲಾ 2 ವಿಕೆಟ್‌ ಕಿತ್ತರು.

ಆಸ್ಟ್ರೇಲಿಯ ದೊಡ್ಡ ಮೊತ್ತ
ಬ್ಯಾಟಿಂಗಿಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ಆಟಗಾರ್ತಿಯರು ದಿಟ್ಟ ಬ್ಯಾಟಿಂಗ್‌ ಮೂಲಕ ಆತಿಥೇಯ ಬೌಲರ್‌ಗಳ ಬೆವರಿಳಿಸಿದರು. ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದ ಆರಂಭಿಕ ಆಟಗಾರ್ತಿ ನಿಕೋಲ್‌ ಬೋಲ್ಟನ್‌ 84 ರನ್‌ ಹೊಡೆದು ಮತ್ತೆ ಆತಿಥೇಯರಿಗೆ ಸಿಂಹಸ್ವಪ್ನರಾದರು. 88 ಎಸೆತಗಳನ್ನು ಎದುರಿಸಿದ ಬೋಲ್ಟನ್‌ 12 ಬೌಂಡರಿ ಸಿಡಿಸಿದರು. ಈ ಸಾಧನೆಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಒಲಿದು ಬಂತು. ಎಲಿಸ್‌ ಪೆರ್ರಿ (ಅಜೇಯ 70), ಬೇತ್‌ ಮೂನಿ (56) ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಭಾರತದ ಪರ ಶಿಖಾ ಪಾಂಡೆ 3 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌
ಆಸ್ಟ್ರೇಲಿಯ-9 ವಿಕೆಟಿಗೆ 287 (ಬೋಲ್ಟನ್‌ 84, ಪೆರ್ರಿ ಔಟಾಗದೆ 70, ಮೂನಿ 56, ಶಿಖಾ ಪಾಂಡೆ 61ಕ್ಕೆ 3, ಪೂನಂ ಯಾದವ್‌ 52ಕ್ಕೆ 2). ಭಾರತ-49.2 ಓವರ್‌ಗಳಲ್ಲಿ 227 (ಮಂಧನಾ 67, ಪೂಜಾ 30, ಪೂನಂ 27, ಜೊನಾಸೆನ್‌ 51ಕ್ಕೆ 3, ಪೆರ್ರಿ 41ಕ್ಕೆ 2). ಪಂದ್ಯಶ್ರೇಷ್ಠ: ನಿಕೋಲ್‌ ಬೋಲ್ಟನ್‌.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.