ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಟೂರ್ನಿ: ಫೆಡರರ್‌, ಜೊಕೋವಿಕ್‌ ಮೂರನೇ ಸುತ್ತಿಗೆ


Team Udayavani, Jan 23, 2020, 6:50 AM IST

ROGER-FEDERER

ಮೆಲ್ಬರ್ನ್: ವಿಶ್ವಖ್ಯಾತಿಯ ಟೆನಿಸ್‌ ತಾರೆಯರಾದ ರೋಜರ್‌ ಫೆಡರರ್‌ ಮತ್ತು ನೊವಾಕ್‌ ಜೊಕೋವಿಕ್‌ ಅವರು ಸುಲಭ ಗೆಲುವಿನೊಂದಿಗೆ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಮೂರನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಇವರ ಜತೆ ಅಮೆರಿಕದ ಟೆನ್ನಿಸ್‌ ಸ್ಯಾಂಡ್‌ಗೆÅàನ್‌ ಐದು ಸೆಟ್‌ಗಳ ಮ್ಯಾರಥಾನ್‌ ಸೆಣಸಾಟದಲ್ಲಿ ಗೆದ್ದು ಸಂಭ್ರಮಿಸಿದ್ದಾರೆ.

ತಟ್ಸುಮಗೆ ತಟ್ಟಿದ ಜೊಕೋ
ಮೊದಲ ಸುತ್ತಿನಲ್ಲಿ ಸ್ವಲ್ಪಮಟ್ಟಿನ ಸವಾಲು ಎದುರಿಸಿದ್ದ ಜೊಕೋವಿಕ್‌ ಬುಧವಾರ ನಡೆದ ದ್ವಿತೀಯ ಸುತ್ತಿನಲ್ಲಿ ಜಪಾನಿನ ವೈಲ್ಡ್‌ಕಾರ್ಡ್‌ ಪ್ರವೇಶಿಗ ತಟ್ಸುಮ ಅವರನ್ನು ಸುಲಭವಾಗಿ ಮಣಿಸಿ ಮೂರನೇ ಸುತ್ತು ಪ್ರವೇಶಿಸಿದರು. ಅವರು ದಾಖಲೆ ಎಂಟನೇ ಬಾರಿ ಇಲ್ಲಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
ವಿಶ್ವದ ದ್ವಿತೀಯ ರ್‍ಯಾಂಕಿನ ಜೊಕೋವಿಕ್‌ ಶ್ರೇಷ್ಠಮಟ್ಟದ ಆಟ ಪ್ರದರ್ಶಿಸಿ 6-1, 6-4, 6-2 ಸೆಟ್‌ಗಳಿಂದ ತಟ್ಸುಮ ಅವರನ್ನು ತಟ್ಟಿದರು. 16 ಏಸ್‌ ಮತ್ತು 31 ಗೆಲುವಿನ ಹೊಡೆತವಿಕ್ಕಿದ ಜೊಕೋ ಮೂರನೇ ಸುತ್ತಿನಲ್ಲಿ ಜಪಾನಿನ ಮತ್ತೋರ್ವ ಆಟಗಾರ ಯೊಶಿಹಿಟೊ ನಿಶಿಯೋಕ ಅವರ ಸವಾಲನ್ನು ಎದುರಿಸಲಿದ್ದಾರೆ. ನಿಶಿಯೋಕ ಇನ್ನೊಂದು ಪಂದ್ಯದಲ್ಲಿ ಬ್ರಿಟನ್‌ನ ಡ್ಯಾನ್‌ ಇವಾನ್ಸ್‌ ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿದ್ದರು.

ಸ್ಯಾಂಡ್‌ಗೆÅನ್‌ಗೆ ಭರ್ಜರಿ ಗೆಲುವು
ಅಮೆರಿಕದ ಟೆನ್ನಿಸ್‌ ಸ್ಯಾಂಡ್‌ಗೆÅನ್‌ ಅವರು ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಬಲುದೊಡ್ಡ ಗೆಲುವು ಸಾಧಿಸಿ ಮುನ್ನಡೆದಿದ್ದಾರೆ. ಎಂಟನೇ ಶ್ರೇಯಾಂಕದ ಮಾಟೆಯೊ ಬೆರೆಟ್ಟಿನಿ ಅವರನ್ನು ಐದು ಸೆಟ್‌ಗಳ ಸುದೀರ್ಘ‌ ಸೆಣಸಾಟದಲ್ಲಿ ಉರುಳಿಸಿದ್ದಾರೆ. ಕಳೆದ ವರ್ಷದ ಸೆಮಿಫೈನಲಿಸ್ಟ್‌ ಬೆರೆಟ್ಟಿನಿ 6-7 (7-9), 4-6, 6-4, 6-2, 5-7 ಸೆಟ್‌ಗಳಿಂದ ಸೋತು ಹೊರಬಿದ್ದರು. ಈ ಹೋರಾಟ 3 ತಾಸು ಮತ್ತು 23 ನಿಮಿಷಗಳವರೆಗೆ ಸಾಗಿತ್ತು. ಬೆರೆಟ್ಟಿನಿ ಇಲ್ಲಿ ಸೋತ ಗರಿಷ್ಠ ರ್‍ಯಾಂಕಿನ ಆಟಗಾರರಾಗಿದ್ದಾರೆ.

ಕ್ರಿಶ್ಚಿಯನ್‌ ಧರ್ಮದ ಬಗ್ಗೆ ನಂಬಿಕೆ ಇಟ್ಟುಕೊಂಡಿರುವ ಸ್ಯಾಂಡ್‌ಗೆÅನ್‌ 2018ರಲ್ಲಿ ಮೆಲ್ಬರ್ನ್ ಪಾರ್ಕ್‌ನಲ್ಲಿ ಕ್ವಾರ್ಟರ್‌ಫೈನಲಿಗೇರಿದ್ದರು. ಆದರೆ ಅವರ ರಾಜಕೀಯ ಅಭಿಪ್ರಾಯ ಮತ್ತು ಬಲಪಂಥೀಯ ಚಟುವಟಿಕೆಯ ಸಂಪರ್ಕವು ವಿವಾದಕ್ಕೆ ಕಾರಣವಾಗಿತ್ತು.

ಫೆಡರರ್‌ ಮುನ್ನಡೆ
ಮೂರನೇ ಶ್ರೇಯಾಂಕದ ರೋಜರ್‌ ಫೆಡರರ್‌ ಸುಲಭ ಗೆಲುವಿನೊಂದಿಗೆ ಮೂರನೇ ಸುತ್ತಿಗೆ ಮುನ್ನಡೆದಿದ್ದಾರೆ. ಎರಡನೇ ಸುತ್ತಿನ ಪಂದ್ಯ ಶೀಘ್ರ ಮುಗಿಯುವ ಉದ್ದೇಶದಿಂದ ಉಗ್ರ ಹೋರಾಟ ನಡೆಸಿದ್ದರು. ಎದುರಾಳಿ ಸರ್ಬಿಯದ ಫಿಲಿಪ್‌ ಕ್ರ್ಯಾಜಿನೋವಿಕ್‌ ವಿರುದ್ಧ 6-1, 6-4, 6-1 ಸೆಟ್‌ಗಳ ಜಯ ಸಾಧಿಸಿ ಸಂಭ್ರಮಿಸಿದರು. ಮೂರನೇ ಸೆಟ್‌ನಲ್ಲಿ ಫೆಡರರ್‌ 2-1 ಮುನ್ನಡೆಯಲ್ಲಿದ್ದಾಗ ಕ್ರ್ಯಾಚಿನೋವಿಕ್‌ ಗಾಯಕ್ಕಾಗಿ ವೈದ್ಯಕೀಯ ವಿಶ್ರಾಂತಿ ಪಡೆದಿದ್ದರು. ಇದರಿಂದ ಯಾವುದೆ ವ್ಯತ್ಯಾಸವಾಗಲಿಲ್ಲ. 20 ಬಾರಿಯ ಗ್ರ್ಯಾನ್‌ ಸ್ಲಾಮ್‌ ಚಾಂಪಿಯನ್‌ 42ನೇ ವಿಜಯಿ ಹೊಡೆತವಿಕ್ಕಿ 90 ನಿಮಿಷಗಳ ಒಳಗಡೆ ಪಂದ್ಯ ಗೆದ್ದರು. ಫೆಡರರ್‌ ಮುಂದಿನ ಸುತ್ತಿನಲ್ಲಿ ಸ್ಥಳೀಯ ಭರವಸೆ ಜಾನ್‌ ಮಿಲ್ಮನ್‌ ಅವರ ಸವಾಲಿಗೆ ಉತ್ತರಿಸಲಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.