ಹಸ್ತಲಾಘವ ಮಾಡಬೇಡಿ: ಕ್ರೀಡಾಪಟುಗಳಿಗೆ ಕಿರಣ್ ರಿಜಿಜು ಸಲಹೆ
Team Udayavani, Mar 6, 2020, 12:56 PM IST
ನವದೆಹಲಿ: ಕೊರೊನಾ ವೈರಸ್ನಿಂದ ವಿಶ್ವದಾದ್ಯಂತ ಆತಂಕ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿರುವ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು “ಯಾರೊಂದಿಗೂ ಹಸ್ತಲಾಘವ ಮಾಡಬೇಡಿ’ ಎಂದು ಕ್ರೀಡಾ ಪಟುಗಳಿಗೆ ಕಿವಿಮಾತು ಹೇಳಿದ್ದಾರೆ.
“ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ, ಕ್ರೀಡಾಪಟುಗಳೇ ಅಪರಿಚಿತರನ್ನು ಮಾತನಾಡಿಸುವಾಗ ಹುಷಾರಾಗಿರಿ, ಹಸ್ತಲಾಘವ ಮಾಡಬೇಡಿ, ಅಪ್ಪಿಕೊಳ್ಳುವುದು ಬೇಡ, ನಾವು ಭಾರತೀಯರು ಸಾಂಪ್ರದಾಯಿಕ ಶೈಲಿಯಲ್ಲಿ ನಮಸ್ತೆ ಮಾಡೋಣ, ಶುಭಾಶಯಗಳನ್ನು ತಿಳಿಸೋಣ’ ಎಂದು ರಿಜಿಜು ಹೇಳಿದ್ದಾರೆ.
ಕರೊನಾ ಭೀತಿಯಿಂದಾಗಿ ವಿಶ್ವದಲ್ಲಿ ಹಲವಾರು ಕ್ರೀಡಾಕೂಟಗಳು ರದ್ದಾಗುತ್ತಿದೆ. ಬ್ಯಾಂಕಾಕ್ ನಲ್ಲಿ ನಡೆಯಲಿರುವ ಏಷ್ಯಾಕಪ್ ಬಿಲ್ಗಾರಿಕೆಯಿಂದ ಭಾರತ ಹಿಂದೆ ಸರಿದಿದೆ. ರಕ್ಷಣೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ ಕ್ರೀಡಾಪಟುಗಳಿಗೆ ತೆರಳದಂತೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ