ಅಕ್ಷರ್ ಪಟೇಲ್ ಬೊಂಬಾಟ್ ಬ್ಯಾಟಿಂಗ್: ಸರಣಿ ಗೆಲುವಿನೊಂದಿಗೆ ವಿಶ್ವದಾಖಲೆ ಬರೆದ ಭಾರತ


Team Udayavani, Jul 25, 2022, 8:18 AM IST

Axar patel helps team India to win the second ODI against WI

ಪೋರ್ಟ್ ಆಫ್ ಸ್ಪೇನ್: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಅವರ ಅರ್ಧಶತಕದ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಎರಡು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಏಕದಿನ ಸರಣಿಯನ್ನು ಜಯಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಆರು ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿದರೆ, ಭಾರತ ತಂಡವು ಎಂಟು ವಿಕೆಟ್ ಕಳೆದುಕೊಂಡು ಇನ್ನೂ ಎರಡು ಎಸೆತ ಬಾಕಿ ಇರುವಂತೆ ಗೆಲುವು ಸಾಧಿಸಿತು.

ವಿಂಡೀಸ್ ಗೆ ಶಾಯ್ ಹೋಪ್ ಮತ್ತು ನಾಯಕ ನಿಕೋಲಸ್ ಪೂರನ್ ಬ್ಯಾಟಿಂಗ್ ಬಲ ತುಂಬಿದರು. ತನ್ನ ನೂರನೇ ಏಕದಿನ ಪಂದ್ಯವಾಡಿದ ಹೋಪ್ ಶತಕ ಸಿಡಿಸಿ ಮಿಂಚಿದರು. 135 ಎಸೆತ ಎದುರಿಸಿದ ಅವರು 115 ರನ್ ಗಳಿಸಿದರು. ನಾಯಕ ಪೂರನ್ 77 ಎಸೆತಗಳಲ್ಲಿ 74 ರನ್ ಗಳಿಸಿದರು. ಅವರ ಇನ್ನಿಂಗ್ಸ್ ನಲ್ಲಿ ಒಂದು ಬೌಂಡರಿ ಮತ್ತು ಆರು ಸಿಕ್ಸರ್ ಬಾರಿಸಿದರು. ಉಳಿದಂತೆ ಮೇಯರ್ಸ್ 39 ರನ್ ಮತ್ತು ಬ್ರೂಕ್ಸ್ 35 ರನ್ ಗಳಿಸಿದರು. ಭಾರತದ ಪರ ಶಾರ್ದೂಲ್ ಠಾಕೂರ್ ಮೂರು ವಿಕೆಟ್ ಕಿತ್ತರೆ, ಹೂಡಾ, ಅಕ್ಷರ್ ಮತ್ತು ಚಾಹಲ್ ತಲಾ ಒಂದು ವಿಕೆಟ್ ಪಡೆದರು. ಪದಾರ್ಪಣೆ ಮಾಡಿದ ವೇಗಿ ಆವೇಶ್ ಖಾನ್ ಕೇವಲ ಆರು ಓವರ್ ನಲ್ಲಿ 54 ರನ್ ನೀಡಿ ದುಬಾರಿಯಾದರು.

ಇದನ್ನೂ ಓದಿ:ಹೇಗಿರುತ್ತೆ ಮರುಭೂಮಿ ಅವಳಿ ನಗರ? :ಮಿರರ್‌ ಲೈನ್‌ ಯೋಜನೆಯ ಮತ್ತಷ್ಟು ವಿವರ ಬಹಿರಂಗ

ಗುರಿ ಬೆನ್ನತ್ತಿದ ಭಾರತ ನಾಯಕ ಧವನ್ (13 ರನ್) ವಿಕೆಟ್ ಆರಂಭದಲ್ಲೇ ಕಳೆದುಕೊಂಡಿತು. ನಂತರ ಗಿಲ್ 43 ರನ್ ಮತ್ತು ಶ್ರೇಯಸ್ ಅಯ್ಯರ್ 63 ರನ್ ಗಳಿಸಿದರು. ಸಂಜು ಸ್ಯಾಮ್ಸನ್ 54 ರನ್ ಬಾರಿಸಿದರು. ಅಯ್ಯರ್ ಮತ್ತು ಸಂಜು 99 ರನ್ ಜೊತೆಯಾಟವಾಡಿದರು. ಆದರೆ ಕೊನೆಯಲ್ಲಿ ಬಿರುಸಿನ ಆಟಕ್ಕೆ ನಿಂತ ಅಕ್ಷರ್  ಪಟೇಲ್ ಕೇವಲ 35 ಎಸೆತಗಳಲ್ಲಿ ಅಜೇಯ 64 ರನ್ ಬಾರಿಸಿದರು. ಅಕ್ಷರ್ ಈ ಇನ್ನಿಂಗ್ಸ್ ನಲ್ಲಿ ಐದು ಸಿಕ್ಸರ್ ಸಿಡಿಸಿದರು.

ಭಾರತ ತಂಡ ಕೊನೆಯ ಹತ್ತು ಓವರ್ ಗಳಲ್ಲಿ 100 ರನ್ ಕಲೆಹಾಕಿತು. ಅಕ್ಷರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಮೂಲಕ ಭಾರತ ತಂಡ ವಿಂಡೀಸ್ ವಿರುದ್ಧ ಏಕದಿನ ಸರಣಿ ಗೆಲುವಿನ ಅಭಿಯಾನವನ್ನು ಮುಂದುವರಿಸಿತು. ವಿಂಡೀಸ್ ವಿರುದ್ಧ ಸತತ 12 ನೇ ಏಕದಿನ ಸರಣಿ ಗೆಲುವು ದಾಖಲಿಸಿದ ಟೀಂ ಇಂಡಿಯಾ ವಿಶ್ವದಾಖಲೆ ಬರೆಯಿತು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.