ಬ್ಯಾಡ್ಮಿಂಟನ್‌: ಸಿಂಧು ಸೆಮಿಫೈನಲಿಗೆ ಸೈನಾಗೆ ಆಘಾತ; ಕಂಚಿಗೆ ತೃಪ್ತಿ


Team Udayavani, Aug 27, 2017, 8:40 AM IST

saina.jpg

ಗ್ಲಾಸ್ಕೊ: ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಜಪಾನಿನ ಏಳನೇ ಶ್ರೇಯಾಂಕದ ನಜೋಮಿ ಒಕುಹಾರಾ ಅವರಿಗೆ ಶರಣಾದ ಭಾರತದ ಸೈನಾ ನೆಹ್ವಾಲ್‌ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. 

74 ನಿಮಿಷಗಳ ತೀವ್ರ ಪೈಪೋಟಿಯ ಹೋರಾಟದಲ್ಲಿ ಸೈನಾ 21-12, 17-21, 10-21 ಗೇಮ್‌ಗಳಿಂದ ಪಂದ್ಯ ಕಳೆದುಕೊಂಡರು. ಭರ್ಜರಿ ಆಟದ ಮೂಲಕ ಮೊದಲ ಗೇಮ್‌ ವಶಪಡಿಸಿಕೊಂಡ ಸೈನಾ ದ್ವಿತೀಯ ಗೇಮ್‌ನಲ್ಲಿ ಪ್ರಬಲ ಹೋರಾಟ ನಡೆಸಿದರು. ಇಬ್ಬರೂ ಸಮಬಲದ ಕಾದಾಟ ನಡೆಸಿದರೂ ಪಂದ್ಯ ಸಾಗುತ್ತಿದ್ದಂತೆ ಒಕುಹಾರಾ ಮೇಲುಗೈ ಸಾಧಿಸಿ 21-17ರಿಂದ ಗೇಮ್‌ ಗೆದ್ದರು. ನಿರ್ಣಾಯಕ ಗೇಮ್‌ನಲ್ಲಿ ಸೈನಾ ಮುನ್ನಡೆ ಸಾಧಿಸಿದ್ದರೂ ಆಬಳಿಕ ಸತತ 9 ಅಂಕ ಗೆಲ್ಲುವ ಮೂಲಕ ಒಕುಹಾರಾ ತಿರುಗೇಟು ನೀಡಿದರಲ್ಲದೇ 21-10ರಿಂದ ಗೇಮ್‌ ಗೆದ್ದು ಫೈನಲಿಗೇರಿದರು. ಒಕುಹಾರಾ ವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಫೈನಲಿಗೇರಿದ ಜಪಾನಿನ ಮೊದಲ ಆಟಗಾರ್ತಿಯಾಗಿದ್ದಾರೆ.

ಜಕಾರ್ತಾದಲ್ಲಿ ನಡೆದ ಈ ಹಿಂದಿನ ವಿಶ್ವ ಬ್ಯಾಡ್ಮಿಂಟನ್‌ ಕೂಟದಲ್ಲಿ ಬೆಳ್ಳಿ ಜಯಿಸಿದ್ದ ಸೈನಾ ಅವರಿಗಿದು ಎರಡನೇ ಪದಕವಾಗಿದೆ. ಸೈನಾ ಸೆಮಿಫೈನಲ್‌ನಲ್ಲಿ ಸ್ಥಳೀಯ ಫೇವರಿಟ್‌ ಕ್ರಿಸ್ಟಿ ಗಿಲ್ಮೋರ್‌ ಅವರನ್ನು 21-19, 18-21, 21-15 ಗೇಮ್‌ಗಳಿಂದ ಸೋಲಿಸಿದ್ದರು.

7 ಬಾರಿ ಮುಖಾಮುಖೀ
ಸೈನಾ ಮತ್ತು ಒಕುಹಾರಾ ಈ ಹಿಂದೆ 7 ಬಾರಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮುಖಾ ಮುಖೀಯಾಗಿದ್ದು ಸೈನಾ ಆರರಲ್ಲಿ ಗೆದ್ದು ಪ್ರಾಬಲ್ಯ ಸ್ಥಾಪಿಸಿದ್ದರು. ಆದರೆ ಇಲ್ಲಿ ಸೈನಾ ತೀವ್ರ ಹೋರಾಡಿದರೂ ಗೆಲುವು ಒಲಿಸಿಕೊಳ್ಳಲು ವಿಫ‌ಲರಾಗಿ ನಿರಾಶೆ ಅನುಭವಿಸಿದರು. ಒಕುಹಾರಾ ಸತತ ಎರಡನೇ ಪಂದ್ಯದಲ್ಲಿ  ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಎದುರಾಳಿಯನ್ನು ಸದೆಬಡಿದ್ದಾರೆ. ಈ ಮೊದಲು ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಅವರು ಎರಡು ಬಾರಿಯ ಹಾಲಿ ಚಾಂಪಿಯನ್‌ ಸ್ಪೇನ್‌ನ ಕ್ಯಾರೋಲಿನಾ ಮರಿನ್‌ ಅವರನ್ನು 21-18, 14-21, 21-15 ಗೇಮ್‌ಗಳಿಂದ ಉರುಳಿಸಿದ್ದರು. ಫೈನಲ್‌ ಹೋರಾಟದಲ್ಲಿ ಅವರು ಸಿಂಧು ಅಥವಾ ಚೀನದ ಚೆನ್‌ ಯುಫೆಯಿ ಅವರನ್ನು ಎದುರಿಸಲಿದ್ದಾರೆ.

ಸಿಂಧು ಸೆಮಿಫೈನಲಿಗೆ
ನಾಲ್ಕನೇ ಶ್ರೇಯಾಂಕದ ಸಿಂಧು ಚೀನದ ಸನ್‌ ಯು ಅವರನ್ನು 21-14, 21-9 ಗೇಮ್‌ಗಳಿಂದ ಕೆಡಹಿ ಸೆಮಿಫೈನಲಿಗೇರಿದ್ದಾರೆ. 39 ನಿಮಿಷಗಳಲ್ಲಿ ಈ ಪಂದ್ಯ ಗೆದ್ದ ಸಿಂಧು ವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಹ್ಯಾಟ್ರಿಕ್‌ ಪದಕ ಖಚಿತಪಡಿಸಿದರು. 22ರ ಹರೆಯದ ರಿಯೋ ಬೆಳ್ಳಿ ವಿಜೇತೆ ಸಿಂಧು 2013 ಮತ್ತು 2014ರಲ್ಲಿ ಕಂಚಿನ ಪದಕ ಪಡೆದಿದ್ದರು. ಒಂದು ವೇಳೆ ಸೆಮಿಫೈನಲ್‌ ಪಂದ್ಯ ಗೆದ್ದರೆ ಬೆಳ್ಳಿ ಅಥವಾ ಚಿನ್ನ ಗೆಲ್ಲುವ ಸಾಧ್ಯತೆಯಿದೆ. ಪುರುಷರ ಸಿಂಗಲ್ಸ್‌ನಲ್ಲಿ ಹಾಲಿ ಚಾಂಪಿಯನ್‌ ಚೀನದ ಚೆನ್‌ ಲಾಂಗ್‌ ಅವರನ್ನು 21-9, 21-10 ಗೇಮ್‌ಗಳಿಂದ ಕೆಡಹಿದ ವಿಕ್ಟರ್‌ ಆ್ಯಕ್ಸೆಲ್ಸೆನ್‌ ಪುರುಷರ ವಿಭಾಗದಲ್ಲಿ ಫೈನಲಿಗೇರಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.