ಬುಲ್ಸ್‌, ಮುಂಬಾ: ಸೆಮಿ ಸೋಲಿನ ಸುತ್ತಮುತ್ತ…


Team Udayavani, Oct 17, 2019, 9:38 PM IST

Bangalore-Bulls

ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌, 2015ರ ಚಾಂಪಿಯನ್‌ ಯು ಮುಂಬಾ ಸೆಮಿಫೈನಲ್‌ನಲ್ಲಿ ಮುಗ್ಗರಿಸಿವೆ. ಈ ಸೋಲಿಗೇನು ಕಾರಣ? ಡೆಲ್ಲಿ, ಬೆಂಗಾಲ್‌ ಮೊದಲ ಸಲ ಫೈನಲ್‌ ತಲುಪಿವೆ. ಪ್ರೊ ಕಬಡ್ಡಿ ಕಿರೀಟ ಯಾರಿಗೆ?

ಅಹ್ಮದಾಬಾದ್‌: ಪ್ರೊ ಕಬಡ್ಡಿ 7ನೇ ಆವೃತ್ತಿಯ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಮತ್ತು ಯು ಮುಂಬಾ ತಂಡಗಳು ಸೋತು ಪ್ರಶಸ್ತಿ ರೇಸ್‌ನಿಂದ ಹೊರಬಿದ್ದಿವೆ. ಬುಲ್ಸ್‌ ಹಾಲಿ ಚಾಂಪಿಯನ್‌ ಆಗಿದ್ದರೆ, ಮುಂಬಾ 2015ರಲ್ಲಿ ಪ್ರಶಸ್ತಿ ಎತ್ತಿ, 2016ರ ಫೈನಲ್‌ನಲ್ಲಿ ಎಡವಿತ್ತು. ನೆಚ್ಚಿನ ತಂಡಗಳಾಗಿದ್ದರೂ ಇವುಗಳ ಸೋಲು ಸಹಜವಾಗಿಯೇ ಅಭಿಮಾನಿಗಳನ್ನು ನಿರಾಸೆಗೊಳಿಸಿದೆ. ಸೋಲಿಗೇನು ಕಾರಣ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಸೆಹ್ರಾವತ್‌ ಏಕಾಂಗಿ ಹೋರಾಟ
ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಇಷ್ಟು ದೂರ ಬಂದರೂ, ಇದು ಒನ್‌ ಮ್ಯಾನ್‌ ಶೋ ಆಗಿತ್ತೆಂಬುದನ್ನು ಮರೆಯುವಂತಿಲ್ಲ. ಲೀಗ್‌ ಹಂತದಿಂದ ಸೆಮಿಫೈನಲ್‌ ವರೆಗೆ ತಂಡಕ್ಕೆ ಬೆನ್ನೆಲುಬಾಗಿ ನಿಂತವರು ಪವನ್‌ ಸೆಹ್ರಾವತ್‌. ತಮ್ಮ ರೈಡಿಂಗ್‌ ಸಾಹಸದಿಂದ ಇಡೀ ತಂಡವನ್ನು ಎತ್ತಿ ನಿಲ್ಲಿಸುತ್ತಿದ್ದರು. ಅಂತಿಮ 4-5 ನಿಮಿಷಗಳಲ್ಲಿ ಪಂದ್ಯದ ಫ‌ಲಿತಾಂಶವನ್ನೇ ಬದಲಿಸುವ ಛಾತಿ ಇವರದಾಗಿತ್ತು.

ಕೊನೆಯ ತನಕವೂ ಸೆಹ್ರಾವತ್‌ ಹೋರಾಟ ಅಮೋಘ ಮಟ್ಟದಲ್ಲೇ ಇತ್ತು. ಆದರೆ ತಂಡದ ಸಹ ಆಟಗಾರ ವೈಫ‌ಲ್ಯ ಬುಲ್ಸ್‌ಗೆ ಮುಳುವಾಯಿತು. ಕೂಟದುದ್ದಕ್ಕೂ ನಾಯಕ ರೋಹಿತ್‌ ಕುಮಾರ್‌ ಮತ್ತು ಇತರ ಆಟಗಾರರು ಸತತ ವೈಫ‌ಲ್ಯ ಕಾಣುತ್ತಲೇ ಹೋದರು. ಒಂದು ಕಾಲದಲ್ಲಿ ನಮ್ಮ ಕ್ರಿಕೆಟ್‌ ತಂಡ ಸಚಿನ್‌ ತೆಂಡುಲ್ಕರ್‌ ಅವರನ್ನು ಹೇಗೆ ಅವಲಂಬಿಸಿತ್ತೋ, ಅದೇ ರೀತಿ ಬುಲ್ಸ್‌ ಸೆಹ್ರಾವತ್‌ ಅವರೊಬ್ಬರನ್ನೇ ನಂಬಿ ಕುಳಿತಿತ್ತು!

ಅನುಭವಿ ಆಟಗಾರರ ಕೊರತೆ ಕೂಡ ಬುಲ್ಸ್‌ಗೆ ಮುಳುವಾಯಿತು. ಸೆಮಿಫೈನಲ್‌ ಹಣಾಹಣಿಯ ಅಂತಿಮ 3 ನಿಮಿಷದಲ್ಲಿ ಬುಲ್ಸ್‌ ತಂಡದ ರಕ್ಷಣಾ ವಿಭಾಗ ತೀರ ಕಳಪೆ ಪ್ರದರ್ಶನ ನೀಡಿತು. ಹಾಗೆಯೇ ಪವನ್‌ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಉಳಿದ ಆಟಗಾರರಿಂದ ಸಾಧ್ಯವಾಗಲೇ ಇಲ್ಲ.

ಮುಂಬಾ ಅಂತಿಮ ಹಂತದ ಎಡವಟ್ಟು
ಯು ಮುಂಬಾದ್ದು ಇನ್ನೊಂದು ಕತೆ. ಕೊನೆಯ 3 ನಿಮಿಷದ ವರೆಗೂ ಮುನ್ನಡೆಯಲ್ಲಿದ್ದ ಮುಂಬಾ ಅಂತಿಮ ಹಂತದ ಎಡವಟ್ಟಿನಿಂದ ಬೆಂಗಾಲ್‌ಗೆ ಶರಣಾಗಬೇಕಾಯಿತು. ಬೆಂಗಾಲ್‌ ನಾಯಕ ಮಣಿಂದರ್‌ ಸಿಂಗ್‌ ಅನುಪಸ್ಥಿತಿಯ ಲಾಭವನ್ನು ಬಳಸಿಕೊಳ್ಳುವಲ್ಲಿಯೂ ವಿಫ‌ಲವಾಯಿತು.

ಮುಂಬಾ ಪರ ಕೊನೆಯ ರೈಡಿಂಗ್‌ ನಡೆಸಿದ ಅರ್ಜುನ್‌ ಜೈಸ್ವಾಲ್‌ ಅವರಿಗೆ ಪಂದ್ಯವನ್ನು ಟೈ ಮಾಡುವ ಅವಕಾಶವೊಂದಿತ್ತು ಆದರೆ ಬಲ್‌ದೇವ್‌ ಸಿಂಗ್‌ ಇದಕ್ಕೆ ಅಡ್ಡಿಯಾದರು. ಬಲಿಷ್ಠ ತಂಡವಾಗಿದ್ದ ಮುಂಬಾ, ಲೀಗ್‌ ಹಂತದಲ್ಲಿ ತನ್ನ ಛಾತಿಗೆ ತಕ್ಕ ಪ್ರದರ್ಶನ ನೀಡಿತ್ತು. ಆದರೆ ಸೆಮಿಯಲ್ಲಿ ಅದೃಷ್ಟ ಕೈಕೊಟ್ಟಿತು. ಬೆಂಗಾಲ್‌ ಪರ ಕನ್ನಡಿಗ ಸುಕೇಶ್‌ ಹೆಗ್ಡೆ ಮತ್ತು ಪ್ರಪಂಚನ್‌ ಮಿಂಚಿನ ರೈಡಿಂಗ್‌ ಮೂಲಕ ಗಮನ ಸೆಳೆದರು.

ಯಾರಿಗೆ ಮೊದಲ ಕಿರೀಟ?
ಮುಂದಿನ ಕುತೂಹಲವೆಂದರೆ, ಈ ಬಾರಿ ಯಾರಿಗೆ ಮೊದಲ ಪ್ರೊ ಕಬಡ್ಡಿ ಕಿರೀಟ ಎನ್ನುವುದು. ಡೆಲ್ಲಿ ಮತ್ತು ಬೆಂಗಾಲ್‌ ಇದೇ ಮೊದಲ ಸಲ ಫೈನಲ್‌ಗೆ ಲಗ್ಗೆ ಇರಿಸಿದ್ದು, ಯಾರೇ ಗೆದ್ದರೂ ಪ್ರೊ ಕಬಡ್ಡಿಯ ನೂತನ ಚಾಂಪಿಯನ್‌ ಆಗಿ ಮೂಡಿಬರಲಿದ್ದಾರೆ. ಈ ಅದೃಷ್ಟ ಯಾರಿಗಿದೆ? ಶನಿವಾರ ರಾತ್ರಿ ಉತ್ತರ ಸಿಗಲಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.