Bangla-Afghan; ಸಮಬಲರ ಹೋರಾಟ: ರೋಚಕ ಕಾದಾಟ ನಿರೀಕ್ಷೆ


Team Udayavani, Oct 7, 2023, 6:18 AM IST

1-sadsadsa

ಧರ್ಮಶಾಲಾ : ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಧರ್ಮಶಾಲಾ ಮೊದಲ ವಿಶ್ವಕಪ್‌ ಪಂದ್ಯಕ್ಕೆ ಸಜ್ಜಾಗಿದೆ. ಶನಿವಾರ ಇಲ್ಲಿ ಸಮಬಲ ತಂಡಗಳಾದ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನ ತಂಡಗಳು ಮುಖಾಮುಖೀಯಾಗಲಿವೆ. ಇವೆರಡೂ ವಿಶ್ವಕಪ್‌ಗೆ ನೇರ ಪ್ರವೇಶ ಪಡೆದ ತಂಡಗಳಾದ ಕಾರಣ ರೋಚಕ ಹೋರಾಟ ನಿರೀಕ್ಷಿಸಲಡ್ಡಿಯಿಲ್ಲ.

ಬಾಂಗ್ಲಾದೇಶವನ್ನು ಮರಳಿ ಶಕಿಬ್‌ ಅಲ್‌ ಹಸನ್‌ ಮುನ್ನಡೆಸುತ್ತಿರುವುದು ಈ ಸಲದ ವಿಶೇಷ. 2011ರ ಕೂಟದಲ್ಲೂ ಶಕಿಬ್‌ ಬಾಂಗ್ಲಾದ ಸಾರಥ್ಯ ವಹಿಸಿದ್ದರು. ಅಂದಿನ ಪಂದ್ಯಾವಳಿ ಕೂಡ ಭಾರತದಲ್ಲಿ ನಡೆದಿತ್ತು.

ಬಾಂಗ್ಲಾದೇಶ ತಂಡದಿಂದ ತಮಿಮ್‌ ಇಕ್ಬಾಲ್‌ ಅವರನ್ನು ಕೈಬಿಟ್ಟ ಬಳಿಕ ಈ ಸ್ಟಾರ್‌ ಆಟಗಾರರ ನಡುವೆ ಸಣ್ಣದೊಂದು ವಾಗ್ಯುದ್ಧ ನಡೆದಿತ್ತು. ತಮಿಮ್‌ ಅವರನ್ನು ಬೆನ್ನುನೋವಿನ ಕಾರಣದಿಂದ ಹೊರಗಿರಿಸಲಾಯಿತು ಎಂಬುದು ಬಾಂಗ್ಲಾ ಕ್ರಿಕೆಟ್‌ ಮಂಡ ಳಿಯ ಸ್ಪಷ್ಟನೆಯಾಗಿತ್ತು. ಆದರೆ, ತಮಿಮ್‌ 3ನೇ ಕ್ರಮಾಂಕದಲ್ಲಿ ಆಡಲು ನಿರಾಕರಿಸಿದ್ದರಿಂದ ಸ್ಥಾನ ಕಳೆದುಕೊಂಡರು ಎಂಬುದಾಗಿ ಶಕಿಬ್‌ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದರು. ತಮಿಮ್‌ ಓರ್ವ ಚೈಲ್ಡಿಶ್‌, ಅವರೋರ್ವ ಟೀಮ್‌ ಮ್ಯಾನ್‌ ಅಲ್ಲ ಎಂಬುದಾಗಿ ಶಕಿಬ್‌ ನೇರ ಆರೋಪ ಮಾಡಿದ್ದರು.
ಶಕಿಬ್‌ ಸೇರಿದಂತೆ ಬಾಂಗ್ಲಾ ಬಹಳಷ್ಟು ಅನುಭವಿ ಆಟಗಾರರನ್ನು ಹೊಂದಿದೆ. ಕೀಪರ್‌ ಮುಶ್ಫಿಕರ್‌ ರಹೀಂ, ಲಿಟನ್‌ ದಾಸ್‌, ಮಹಮದುಲ್ಲ, ಪೇಸರ್‌ ಮುಸ್ತಫಿಜುರ್‌ ರೆಹಮಾನ್‌ ಇವರಲ್ಲಿ ಪ್ರಮುಖರು. ಆದರೆ ಇವರೆಲ್ಲರಿಗಿಂತ ಯುವ ಬ್ಯಾಟರ್‌ ನಜ್ಮುಲ್‌ ಹುಸೇನ್‌ ಹೆಚ್ಚು ಅಪಾಯಕಾರಿಯಾಗಿ ಗೋಚರಿ ಸಬಹುದು. ಈ ವರ್ಷದ ಏಕದಿನದಲ್ಲಿ ಅವರು ಬಾಂಗ್ಲಾ ಪರ ಸರ್ವಾಧಿಕ 698 ರನ್‌ ಬಾರಿಸಿದ್ದಾರೆ. ಹಾಗೆಯೇ ತೌಹಿದ್‌ ಹೃದಯ್‌ ಉತ್ತಮ ಲಯದಲ್ಲಿದ್ದಾರೆ.

ಬಾಂಗ್ಲಾದ ನಿಜವಾದ ಶಕ್ತಿ ಇರುವುದೇ ಸ್ಪಿನ್‌ ವಿಭಾಗದಲ್ಲಿ. ಶಕಿಬ್‌, ಮೆಹಿದಿ ಮಿರಾಜ್‌, ಮಹೆದಿ ಹಸನ್‌ ಮಿರಾಜ್‌, ನಾಸುಮ್‌ ಅಹ್ಮದ್‌ ಭಾರತದ ಟ್ರ್ಯಾಕ್‌ಗಳಲ್ಲಿ ಮಿಂಚುವ ಸಾಧ್ಯತೆ ಇದೆ.

ಅಫ್ಘಾನ್‌: ಒಂದೇ ಗೆಲುವು
ಅಫ್ಘಾನಿಸ್ಥಾನ 2017ರಲ್ಲಿ ಐಸಿಸಿಯ ಪೂರ್ಣ ಪ್ರಮಾಣದ ಸದಸ್ಯತ್ವ ಪಡೆದ ಬಳಿಕ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತ ಬಂದ ತಂಡ. ಆದರೆ ವಿಶ್ವಕಪ್‌ ಇತಿಹಾಸದ 15 ಪಂದ್ಯಗಳಲ್ಲಿ ಜಯಿಸಿದ್ದು ಒಂದರಲ್ಲಿ ಮಾತ್ರ. ಅದೂ ಸ್ಕಾಟ್ಲೆಂಡ್‌ ವಿರುದ್ಧ.

2019ರ ವಿಶ್ವಕಪ್‌ನಲ್ಲಿ ಅಫ್ಘಾನ್‌ ಸಾಧನೆ ಚೇತೋಹಾರಿಯಾಗಿತ್ತು. ಅಂದು ಭಾರತ, ಪಾಕಿಸ್ಥಾವನ್ನು ಸೋಲಿಸುವ ಹಂತಕ್ಕೆ ಬಂದಿತ್ತು. ಇದು ಹಶ್ಮತುಲ್ಲ ಶಾಹಿದಿ ಬಳಗಕ್ಕೆ ಸ್ಫೂರ್ತಿ ಆಗಬೇಕಿದೆ. ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ಮುಜೀಬ್‌ ಉರ್‌ ರೆಹಮಾನ್‌, ನೂರ್‌ ಅಹ್ಮದ್‌ ಅವರಂಥ ಅನುಭವಿಗಳನ್ನು ಹೊಂದಿರುವ ತಂಡವಿದು. ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ನವೀನ್‌ ಉಲ್‌ ಹಕ್‌, ಮುಜೀಬ್‌ ಉರ್‌ ರೆಹಮಾನ್‌ ಕೂಡ ತಂಡದ ರಕ್ಷಣೆಗೆ ನಿಲ್ಲಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

ಅಫ್ಘಾನಿಸ್ಥಾನದ ಬ್ಯಾಟಿಂಗ್‌ ಲೈನಅಪ್‌ ಬಲಿಷ್ಠವಾಗಿದ್ದರೂ ಸ್ಥಿರತೆಯ ಕೊರತೆ ಕಾಡುತ್ತಿದೆ. ಗೆಲುವಿನ ಹಂತದಲ್ಲಿ ಮುಗ್ಗರಿಸುವ ಸಮಸ್ಯೆಗೊಂದು ಪರಿಹಾರ ಕಂಡುಕೊಂಡರೆ ಅಫ್ಘಾನ್‌ ಅಪಾಯಕಾರಿ ಗೋಚರಿಸುವುದರಲ್ಲಿ ಅನುಮಾನವಿಲ್ಲ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.