Bangladesh vs Sri Lanka: 1ನೇ ಏಕದಿನ; ನಜ್ಮುಲ್‌ ಶತಕ, ಲಂಕಾ ವಿರುದ್ಧ ಬಾಂಗ್ಲಾಕ್ಕೆ  ಜಯ


Team Udayavani, Mar 14, 2024, 9:28 PM IST

Bangladesh vs Sri Lanka: 1ನೇ ಏಕದಿನ; ನಜ್ಮುಲ್‌ ಶತಕ, ಲಂಕಾ ವಿರುದ್ಧ ಬಾಂಗ್ಲಾಕ್ಕೆ  ಜಯ

ಚತ್ತೋಗ್ರಾಮ್‌ (ಬಾಂಗ್ಲಾದೇಶ): ಪ್ರವಾಸಿ ಶ್ರೀಲಂಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ, ಬಾಂಗ್ಲಾದೇಶ 6 ವಿಕೆಟ್‌ಗಳ ಜಯ ಸಾಧಿಸಿದೆ.

ನಾಯಕ ನಜ್ಮುಲ್‌ ಹುಸೇನ್‌ ಅವರ ಅಜೇಯ ಶತಕ ಬಾಂಗ್ಲಾ ಚೇಸಿಂಗ್‌ನ ಆಕರ್ಷಣೆ ಆಗಿತ್ತು. ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ 48.5 ಓವರ್‌ಗಳಲ್ಲಿ 255ಕ್ಕೆ ಆಲೌಟ್‌ ಆದರೆ, ಬಾಂಗ್ಲಾದೇಶ ಆರಂಭಿಕ ಕುಸಿತದಿಂದ ಚೇತರಿಸಿಕೊಂಡೂ 44.4 ಓವರ್‌ಗಳಲ್ಲಿ 4 ವಿಕೆಟಿಗೆ 257 ರನ್‌ ಬಾರಿಸಿ ಗೆಲುವು ಸಾಧಿಸಿತು. ಆಗ ನಜ್ಮುಲ್‌ ಹುಸೇನ್‌ 122 ಮತ್ತು ಮುಶ್ಫೀಕರ್‌ ರಹೀಂ 73 ರನ್‌ ಮಾಡಿ ಅಜೇಯರಾಗಿದ್ದರು.

ನಜ್ಮುಲ್‌-ರಹೀಂ ಮುರಿಯದ 5ನೇ ವಿಕೆಟಿಗೆ 165 ರನ್‌ ಪೇರಿಸಿ ತಂಡವನ್ನು ಯಶಸ್ವಿಯಾಗಿ ದಡ ಸೇರಿಸಿದರು. ಬಾಂಗ್ಲಾದ 4 ವಿಕೆಟ್‌ 92 ರನ್ನಿಗೆ ಬಿದ್ದಿತ್ತು. ಮೊದಲ ಎಸೆತದಲ್ಲೇ ಲಿಟನ್‌ ದಾಸ್‌ (0) ವಿಕೆಟ್‌ ಬಿದ್ದೊಡನೆ ಕ್ರೀಸಿಗೆ ಆಗಮಿಸಿದ ನಜ್ಮುಲ್‌ ಹುಸೇನ್‌ ಕಪ್ತಾನನ ಆಟಕ್ಕೆ ಉತ್ತಮ ನಿದರ್ಶನ ಒದಗಿಸಿದರು. ಅವರ 122 ರನ್‌ 129 ಎಸೆತಗಳಿಂದ ದಾಖಲಾಯಿತು. ಸಿಡಿಸಿದ್ದು 13 ಫೋರ್‌ ಮತ್ತು 2 ಸಿಕ್ಸರ್‌. ಇದು ಅವರ 3ನೇ ಶತಕ ಹಾಗೂ ಜೀವನಶ್ರೇಷ್ಠ ಗಳಿಕೆ.

ರಹೀಂ 84 ಎಸೆತಗಳಿಂದ 73 ರನ್‌ ಮಾಡಿದರು (8 ಬೌಂಡರಿ). ಈ ನಡುವೆ ಮಹಮದುಲ್ಲ 37 ರನ್‌ ಕೊಡುಗೆ ಸಲ್ಲಿಸಿದರು. ಶ್ರೀಲಂಕಾ ಸರದಿಯಲ್ಲಿ ಜನಿತ್‌ ಲಿಯನಗೆ ಸರ್ವಾಧಿಕ 67, ಕುಸಲ್‌ ಮೆಂಡಿಸ್‌ 59 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-48.5 ಓವರ್‌ಗಳಲ್ಲಿ 255 (ಜನಿತ್‌ ಲಿಯನಗೆ 67, ಕುಸಲ್‌ ಮೆಂಡಿಸ್‌ 59, ನಿಸ್ಸಂಕ 36, ತಾಂಜಿಮ್‌ ಹಸನ್‌ 44ಕ್ಕೆ 3, ಟಸ್ಕಿನ್‌ ಅಹ್ಮದ್‌ 60ಕ್ಕೆ 3, ಶೊರೀಫ‌ುಲ್‌ ಇಸ್ಲಾಮ್‌ 51ಕ್ಕೆ 3). ಬಾಂಗ್ಲಾದೇಶ-44.4 ಓವರ್‌ಗಳಲ್ಲಿ 4 ವಿಕೆಟಿಗೆ 257 (ನಜ್ಮುಲ್‌ ಔಟಾಗದೆ 122, ರಹೀಂ ಔಟಾಗದೆ 73, ಮಹಮದುಲ್ಲ 37, ಮಧುಶಂಕ 44ಕ್ಕೆ 2). ಪಂದ್ಯಶ್ರೇಷ್ಠ: ನಜ್ಮುಲ್‌ ಹುಸೇನ್‌.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.