ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್
Team Udayavani, Jul 1, 2022, 8:23 AM IST
ಮುಂಬೈ: ಇಂಗ್ಲೆಂಡ್ ವಿರುದ್ಧ ಇಂದು ಆರಂಭವಾಗಲಿರುವ ಟೆಸ್ಟ್ ಪಂದ್ಯದ ಬಳಿಕ ನಡೆಯಲಿರುವ ತಲಾ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಿರಿಯ ಆಟಗಾರ ಶಿಖರ್ ಧವನ್ ಮತ್ತೆ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ.
ನಾಯಕನಾಗಿ ರೋಹಿತ್ ಶರ್ಮಾ ಮರಳಿದ್ದಾರೆ. ಈ ಬಾರಿ ಮೀಸಲು ಸಾಮರ್ಥ್ಯದ ತಂಡ ಪ್ರಕಟಿಸದೆ ಪೂರ್ಣ ಪ್ರಮಾಣದ ತಂಡವನ್ನೇ ಬಿಸಿಸಿಐ ಆಯ್ಕೆ ಮಾಡಿದೆ. ಆದರೆ ಟೆಸ್ಟ್ ಪಂದ್ಯಕ್ಕೆ ಮತ್ತು ಮೊದಲ ಟಿ20 ಪಂದ್ಯದ ನಡುವೆ ಕಡಿಮೆ ಅಂತರವಿರುವ ಕಾರಣ ಟೆಸ್ಟ್ ತಂಡದ ಸದಸ್ಯರು ಮೊದಲ ಟಿ20 ಪಂದ್ಯಕ್ಕೆ ಆಯ್ಕೆಯಾಗಿಲ್ಲ.
ಮೊದಲ ಟಿ20 ಪಂದ್ಯಕ್ಕೆ ವಿರಾಟ್, ಶ್ರೇಯಸ್ ಅಯ್ಯರ್, ಪಂತ್, ಬುಮ್ರಾ ಮತ್ತು ರವೀಂದ್ರ ಜಡೇಜಾ ಇರುವುದಿಲ್ಲ, ಅವರ ಬದಲಿಗೆ ಋತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ಅರ್ಶದೀಪ್ ಸಿಂಗ್ ಮತ್ತು ವೆಂಕಟೇಶ್ ಅಯ್ಯರ್ ಆಡಲಿದ್ದಾರೆ.
ಭುವನೇಶ್ವರ್ ಕುಮಾರ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ಅರ್ಶದೀಪ್ ಸಿಂಗ್ ರನ್ನು ಮೊದಲ ಬಾರಿಗೆ ಒಡಿಐ ತಂಡಕ್ಕೆ ಸೇರಿಸಲಾಗಿದೆ. ವಿಕೆಟ್ ಕೀಪರ್ ಗಳಾಗಿ ರಿಷಭ್ ಪಂತ್ ಮತ್ತು ಇಶಾನ್ ಕಿಶನ್ ತಂಡದಲ್ಲಿದ್ದಾರೆ.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿಧ್ ಕೃಷ್ಣ , ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಮೊದಲ ಟಿ20ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿ.ಕೀ), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್.
2ನೇ ಮತ್ತು 3ನೇ ಟಿ20ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್ ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್