ಆಸ್ಟ್ರೇಲಿಯ,ನ್ಯೂಜಿಲ್ಯಾಂಡ್‌ ಸರಣಿ ಕ್ರಿಕೆಟ್‌ ವೇಳಾಪಟ್ಟಿ ಅಂತಿಮ


Team Udayavani, Sep 9, 2017, 6:40 AM IST

BCCI-09.jpg

ಹೊಸದಿಲ್ಲಿ: ಭಾರತ ತನ್ನ 2017-18ರ ಋತುವಿನ ತವರಿನ ಕ್ರಿಕೆಟ್‌ ಸರಣಿಯನ್ನು ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯೊಂದಿಗೆ ಆರಂಭಿಸಲಿದೆ. ಬಳಿಕ ನ್ಯೂಜಿಲ್ಯಾಂಡ್‌ ತಂಡದ ಆಗಮನವಾಗಲಿದೆ. ಈ 2 ಸರಣಿಗಳ ವೇಳಾಪಟ್ಟಿಯನ್ನು ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಿದೆ.

ಆಸ್ಟ್ರೇಲಿಯ ವಿರುದ್ಧ 5 ಏಕದಿನ ಹಾಗೂ 3 ಟಿ-20 ಪಂದ್ಯ ನಡೆದರೆ, ನ್ಯೂಜಿಲ್ಯಾಂಡ್‌ ವಿರುದ್ಧ ತಲಾ 3 ಏಕದಿನ ಹಾಗೂ ಟಿ-20 ಪಂದ್ಯಗಳನ್ನು ಆಡಲಾಗುವುದು. ಎರಡೂ ಸರಣಿಗೂ ಮುನ್ನ ಪ್ರವಾಸಿ ತಂಡಗಳಿಗೆ ಅಭ್ಯಾಸ ಪಂದ್ಯಗಳನ್ನೂ ವ್ಯವಸ್ಥೆ ಮಾಡಲಾಗಿದೆ.

ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್‌ ವಿರುದ್ಧದ ಸರಣಿಗಾಗಿ ಬಿಸಿಸಿಐ ಕಳೆದ ಆಗಸ್ಟ್‌ನಲ್ಲೇ ಪಂದ್ಯದ ತಾಣಗಳನ್ನು ಪ್ರಕಟಿಸಿತ್ತು. ಆದರೆ ಇದನ್ನು ಆಧಿಕೃತವಾಗಿ ಅಂತಿಮಗೊಳಿಸಿರಲಿಲ್ಲ. ಆಸೀಸ್‌ ಸರಣಿಯ ತಾಣಗಳಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ಆದರೆ ನ್ಯೂಜಿಲ್ಯಾಂಡ್‌ ಎದುರಿನ ಒಂದು ಏಕದಿನ ಹಾಗೂ ಟಿ-20 ಪಂದ್ಯದ ಆತಿಥ್ಯವನ್ನು ಕಾನ್ಪುರದ “ಗ್ರೀನ್‌ಪಾರ್ಕ್‌ ಸ್ಟೇಡಿಯಂ’ ಮತ್ತು ಕಟಕ್‌ ಬದಲು ಯುಪಿಸಿಎ ಸ್ಟೇಡಿಯಂ ಹಾಗೂ ತಿರುವನಂತಪುರಕ್ಕೆ ವಹಿಸಲಾಗಿದೆ.

ಆಸ್ಟ್ರೇಲಿಯ ವಿರುದ್ಧದ ಏಕದಿನ ಪಂದ್ಯಗಳು ಕ್ರಮವಾಗಿ ಚೆನ್ನೈ (ಸೆ. 17), ಕೋಲ್ಕತಾ (ಸೆ. 21), ಇಂದೋರ್‌ (ಸೆ. 24), ಬೆಂಗಳೂರು (ಸೆ. 28) ಮತ್ತು ನಾಗ್ಪುರದಲ್ಲಿ (ಅ. 1) ನಡೆಯಲಿವೆ. ಟಿ-20 ಪಂದ್ಯಗಳ ತಾಣ ರಾಂಚಿ (ಅ. 7), ಗುವಾಹಟಿ (ಅ. 10) ಮತ್ತು ಹೈದರಾಬಾದ್‌ (ಅ. 13).

ನ್ಯೂಜಿಲ್ಯಾಂಡ್‌ ಎದುರಿನ 3 ಏಕದಿನ ಪಂದ್ಯಗಳು ಮುಂಬಯಿ (ಅ. 22), ಪುಣೆ (ಅ. 25) ಮತ್ತು ಕಾನ್ಪುರದಲ್ಲಿ (ಅ. 29); ಟಿ-20 ಪಂದ್ಯಗಳು ಹೊಸದಿಲ್ಲಿ (ನ. 1), ರಾಜ್‌ಕೋಟ್‌ (ನ. 4) ಮತ್ತು ತಿರುವನಂತಪುರದಲ್ಲಿ (ನ. 7) ನಡೆಯಲಿವೆ.

ಸೆ. 10: ಟಿಕೆಟ್‌ ಮಾರಾಟ
ಸೆ. 17ರ ಚೆನ್ನೈ ಏಕದಿನ ಪಂದ್ಯಕ್ಕಾಗಿ ರವಿವಾರ ಸಾರ್ವಜನಿಕರಿಗೆ ಟಿಕೆಟ್‌ ಮಾರಾಟ ವ್ಯವಸ್ಥೆ ಮಾಡಲಾಗುವುದು ಎಂದು ತಮಿಳುನಾಡು ಕ್ರಿಕೆಟ್‌ ಅಸೋಸಿಯೇಶನ್‌ ಪ್ರಕಟಿಸಿದೆ. ಸಾರ್ವಜನಿಕರು ತಮಿಳುನಾಡು ಕ್ರಿಕೆಟ್‌ ಸಂಸ್ಥೆಯ ವೆಬ್‌ಸೈಟ್‌ ಮೂಲಕವೂ ಟಿಕೆಟ್‌ಗಳನ್ನು ಕಾದಿರಿಸಬಹುದಾಗಿದೆ.ಕನಿಷ್ಠ ಟಿಕೆಟ್‌ ದರ 1,200 ರೂ. ಆಗಿದ್ದು, ಗರಿಷ್ಠ ದರ 12,000 ರೂ. ಎಂದು ಮಂಡಳಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಮಂಡಳಿ ಇಲೆವೆನ್‌ ತಂಡ ಪ್ರಕಟ
ಆಸ್ಟ್ರೇಲಿಯ ವಿರುದ್ದ ಸೆ. 12ರಂದು ನಡೆಯುವ ಏಕದಿನ ಅಭ್ಯಾಸ ಪಂದ್ಯಕ್ಕಾಗಿ ಮಂಡಳಿ ಅಧ್ಯಕ್ಷರ ಬಳಗವನ್ನು ಪ್ರಕಟಿಸಲಾಗಿದೆ. ಕಳೆದ ಋತುವಿನ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಹಾಗೂ ವಿಜಯ್‌ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಗಮನ ಸೆಳೆದ ಬಹುತೇಕ ಆಟಗಾರರು ಈ ತಂಡದಲ್ಲಿದ್ದಾರೆ.

ಮಂಡಳಿ ಇಲೆವೆನ್‌ ತಂಡ: ರಾಹುಲ್‌ ತ್ರಿಪಾಠಿ, ಮಾಯಾಂಕ್‌ ಅಗರ್ವಾಲ್‌, ಶಿವಂ ಚೌಧರಿ, ನಿತೀಶ್‌ ರಾಣ, ಗೋವಿಂದ ಪೋದ್ದರ್‌, ಗುರುಕೀರತ್‌ ಸಿಂಗ್‌ ಮಾನ್‌, ಶ್ರೀವತ್ಸ ಗೋಸ್ವಾಮಿ, ಅಕ್ಷಯ್‌ ಕರ್ನೆವಾರ್‌, ಕುಲ್ವಂತ್‌ ಖೆರೋಲಿಯ, ಕೃಶಾಂಗ್‌ ಪಟೇಲ್‌, ಆವೇಶ್‌ ಖಾನ್‌, ಸಂದೀಪ್‌ ಶರ್ಮ, ವಾಷಿಂಗ್ಟನ್‌ ಸುಂದರ್‌, ರಾಹಿಲ್‌ ಷಾ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.