ಬಿಸಿಸಿಐ-ನಾಡಾ ನಡುವಿನ ಬಿಕ್ಕಟ್ಟು ತೀವ್ರ
Team Udayavani, Nov 11, 2017, 6:55 AM IST
ಮುಂಬೈ: ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಮತ್ತು ನಾಡಾ (ಭಾರತ ಉದ್ದೀಪನ ನಿಗ್ರಹ ಸಂಸ್ಥೆ) ನಡುವಿನ ತಿಕ್ಕಾಟ ಈಗ ತಾರಕಕ್ಕೇರಿದೆ. ಬಿಸಿಸಿಐನ ಕ್ರಿಕೆಟಿಗರು ತನ್ನಿಂದ ಉದ್ದೀಪನ ಪರೀಕ್ಷೆಗೊಳಪಡಬೇಕು ಎಂದು ನಾಡಾ ವಾದಿಸಿದೆ. ಅದಕ್ಕೆ ಕೇಂದ್ರ ಕ್ರೀಡಾ ಸಚಿವಾಲಯ ಕೂಡ ಅನುಮತಿಯೂ ನೀಡಿದೆ. ಆದರೆ ಬಿಸಿಸಿಐ ಮಾತ್ರ ಖಂಡತುಂಡವಾಗಿ ಈ ಪ್ರಸ್ತಾಪವನ್ನು ವಿರೋಧಿಸಿದೆ.
ಒಂದು ವೇಳೆ ಬಿಸಿಸಿಐ ಇದಕ್ಕೆ ಒಪ್ಪಿಕೊಳ್ಳದೇ ಹೋದರೆ ಯಾವುದೇ ಭಾರತೀಯ ಕ್ರೀಡಾಪಟುಗಳನ್ನು ನಾಡಾ ಪರೀಕ್ಷೆಗೊಳಪಡಿಸಲು ಸಾಧ್ಯವಾಗುವುದಿಲ್ಲ. ಕಾರಣ ನಾಡಾವನ್ನೇ ವಾಡಾ (ವಿಶ್ವ ಉದ್ದೀಪನ ನಿಗ್ರಹ ಸಂಸ್ಥೆ) ಅಮಾನ್ಯಗೊಳಿಸಲಿದೆ. ಇದರ ಪರಿಣಾಮ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತೀಯರು ತೀವ್ರ ಮುಜುಗರ ಅನುಭವಿಸಬೇಕಾದ ಸನ್ನಿವೇಶ ಎದುರಾಗಲಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ, ಬಿಸಿಸಿಐ ರಾಷ್ಟ್ರೀಯ ಕ್ರೀಡಾಸಂಸ್ಥೆಯಲ್ಲ. ಆದ್ದರಿಂದ ನಾಡಾದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಬಿಸಿಸಿಐ ಆಟಗಾರರನ್ನು ಪರೀಕ್ಷೆಗೊಳಪಡಿಸಲು ತನ್ನದೇ ವ್ಯವಸ್ಥೆ ಹೊಂದಿದೆ. ಸ್ಪರ್ಧೆ ನಡೆಯುವ ಸಂದರ್ಭದಲ್ಲಿ ಅಥವಾ ಸ್ಪಧೇìತರ ಸಂದರ್ಭಗಳಲ್ಲಿ ಐಡಿಟಿಎಂ ಎಂಬ ಸಂಸ್ಥೆ ಸಂಗ್ರಹಿಸುವ ಆಟಗಾರರ ಮಾದರಿಗಳನ್ನು ವಾಡಾ ಮಾನ್ಯತೆ ಹೊಂದಿರುವ ಎನ್ಡಿಟಿಎಲ್ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಕ್ರೀಡಾ ಸಚಿವಾಲಯದ ಅನುಮತಿಯೂ ಇದೆ ಎಂದು ಹೇಳಿದ್ದಾರೆ.
ಬಿಸಿಸಿಐ ಈ ವಿಚಾರದಲ್ಲಿ ವಾಡಾ ಹಾಕಿಕೊಟ್ಟಿರುವ ಗುಣಮಟ್ಟವನ್ನೇ ಅನುಸರಿಸುತ್ತಿದೆ. ವಿಶ್ವಮಟ್ಟದ ಗುಣಮಟ್ಟವನ್ನೇ ಹೊಂದಿರುವ ಸಂಸ್ಥೆಯಿಂದ ಪರೀಕ್ಷೆಗಳು ನಡೆಯುತ್ತಿವೆ ಎಂದು ಜೊಹ್ರಿ ಸಮರ್ಥಿಸಿಕೊಂಡಿದ್ದಾರೆ.
ಒಂದು ವೇಳೆ ಬಿಸಿಸಿಐ ತನ್ನ ವಿರೋಧವನ್ನು ಮುಂದುವರಿಸಿದ್ದೇ ಆದಲ್ಲಿ ಅದು ಸರ್ಕಾರ ಮತ್ತು ಬಿಸಿಸಿಐ ನಡುವಿನ ಹೋರಾಟವಾಗಿ ಬದಲಾಗುವ ಸಾಧ್ಯತೆಯಿದೆ. ದೇಶದ ಕ್ರೀಡಾ ವಲಯದಲ್ಲಿ ತೀವ್ರ ಬಿಕ್ಕಟ್ಟೂ ಸೃಷ್ಟಿಯಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ