ಸ್ವಹಿತಾಸಕ್ತಿ ಸಂಘರ್ಷ: ಇಂದು ದ್ರಾವಿಡ್ ವಿಚಾರಣೆ
Team Udayavani, Sep 26, 2019, 5:10 AM IST
ಮುಂಬಯಿ: ಬೆಂಗಳೂರಿನಲ್ಲಿ ರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ನಿರ್ದೇಶಕರಾಗಿರುವ ರಾಹುಲ್ ದ್ರಾವಿಡ್, ಸ್ವಹಿತಾಸಕ್ತಿ ಸಂಘರ್ಷ ಪ್ರಕರಣದಲ್ಲಿ ಗುರುವಾರ ಬಿಸಿಸಿಐ ವಿಶೇಷ ವಿಚಾರಣಾಧಿಕಾರಿ ಎದುರು ಹಾಜರಾಗಲಿದ್ದಾರೆ.
ಬಿಸಿಸಿಐನ ಯಾವುದೇ ಹುದ್ದೆ ಯಲ್ಲಿರುವ ವ್ಯಕ್ತಿ, ಈ ಹುದ್ದೆಯ ಮೇಲೆ ಪ್ರಭಾವ ಬೀರುವಂತಹ ಇನ್ನೊಂದು ಹುದ್ದೆಯಲ್ಲಿರಬಾರದು. ಇದ್ದರೆ ಅದನ್ನು ಸ್ವಹಿತಾಸಕ್ತಿ ಎಂದು ಪರಿಗಣಿ ಸಲಾಗುತ್ತದೆ. ಸದ್ಯ ದ್ರಾವಿಡ್ ಎನ್ಸಿಎ ಮುಖ್ಯಸ್ಥರಾಗಿರುವುದರ ಜತೆಗೆ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ತಂಡದ ಮಾಲಕ ಸಂಸ್ಥೆಯಾಗಿರುವ “ಇಂಡಿಯಾ ಸಿಮೆಂಟ್ಸ್ ಕಂಪೆನಿ’ಯ ಉಪಾ ಧ್ಯಕ್ಷರೂ ಆಗಿದ್ದಾರೆ. ಇದು ಸ್ವಹಿತಾಸಕ್ತಿ ಎಂಬ ಆರೋಪ ಕೇಳಿಬಂದಿ ರುವುದರಿಂದ ದ್ರಾವಿಡ್ ಈ ಬಗ್ಗೆ ತಮ್ಮ ನಿಲುವನ್ನು ವಿವರಿಸಲಿದ್ದಾರೆ.
ದ್ರಾವಿಡ್ ಎನ್ಸಿಎ ಹುದ್ದೆಗೆ ಏರುವ ಮುನ್ನವೇ ಇಂಡಿಯಾ ಸಿಮೆಂಟ್ಸ್ ಉಪಾಧ್ಯಕ್ಷರಾಗಿರುವುದು ಬಿಸಿಸಿಐ ಆಡಳಿತಾಧಿಕಾರಿಗಳಿಗೆ ಗೊತ್ತಿತ್ತು. ಆದರೆ ಇದನ್ನು ಸ್ವಹಿತಾಸಕ್ತಿ ಸಂಘರ್ಷವೆಂದು ಅವರು ಪರಿಗಣಿಸಿಲ್ಲ.
ಸಂಬಳರಹಿತ ರಜೆ
ಸದ್ಯ ದ್ರಾವಿಡ್ ಹುದ್ದೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಬದಲಿಗೆ ಸಂಬಳರಹಿತ ರಜೆ ಮೇಲಿದ್ದಾರೆ. ಆದ್ದರಿಂದ ಸ್ವಹಿತಾಸಕ್ತಿ ಸಮಸ್ಯೆ ಬಾಧಿಸು ವುದಿಲ್ಲ ಎನ್ನುವುದು ದ್ರಾವಿಡ್ ಮತ್ತು ಆಡಳಿತಾಧಿಕಾರಿಗಳ ವಾದ. ಇದನ್ನು ವಿರೋಧಿಸಿರುವ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ, ಬಿಸಿಸಿಐ ವಿಚಾರಣಾಧಿಕಾರಿ ಡಿ.ಕೆ. ಜೈನ್ಗೆ ದೂರು ಸಲ್ಲಿಸಿದ್ದರು. ಆದ್ದರಿಂದ ದ್ರಾವಿಡ್ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ದ್ರಾವಿಡ್ ಮೇಲೆ ದಾಖಲಾಗಿರುವ ಈ ಪ್ರಕರಣದ ವಿರುದ್ಧ ಹಿರಿಯ ಕ್ರಿಕೆಟಿಗರಾದ ಸೌರವ್ ಗಂಗೂಲಿ, ಹರ್ಭಜನ್ ಸಿಂಗ್ ಧ್ವನಿ ಎತ್ತಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್